Homeಮುಖಪುಟಕಿಚ್ಚುಹಚ್ಚಿ ಶಾಂತಿಯಾತ್ರೆ ಮಾಡಿದ್ದು ಇತಿಹಾಸದ ವ್ಯಂಗ್ಯ...!!

ಕಿಚ್ಚುಹಚ್ಚಿ ಶಾಂತಿಯಾತ್ರೆ ಮಾಡಿದ್ದು ಇತಿಹಾಸದ ವ್ಯಂಗ್ಯ…!!

- Advertisement -
- Advertisement -

ಬೆಂಕಿಕಡ್ಡಿ ಗೀರಿದ ಪರಿಣಾಮವೇ ಹಿಂಸಾಚಾರಕ್ಕೆ ಮೂಲ ಕಾರಣ. ಮೂರು ಕಿಡಿಗಳು ಹೊತ್ತಿಕೊಂಡು ಉರಿಯಲು ಆರಂಭಿಸಿದಾಗಲೇ ಆರಿಸುವ ಯತ್ನ ಮಾಡಿದ್ದರೆ ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇರಲಿಲ್ಲ.. ಸೂತ್ರಧಾರಿಗಳು ಹೊತ್ತಿಸಿದ ಕಿಡಿಗಳು ಸುಡುತ್ತಲೇ ಹೋದವು. ಬೆಂಕಿ ಹೊತ್ತಿಕೊಳ್ಳುತ್ತಿ ದ್ದಂತೆಯೇ ತುಪ್ಪವನ್ನೂ ಸುರಿಯತೊಡಗಿದರು. ಬೆಂಕಿಯ ಕೆನ್ನಾಲಗೆಗಳು ಇಡೀ ಈಶಾನ್ಯ ದೆಹಲಿಯ ಹಲವು ಪ್ರದೇಶಗಳು ಹೊತ್ತಿ ಉರಿದವು. ಹಿಂಸಾಚಾರ 42 ಬಲಿ ಪಡೆಯಿತು. ನೂರಾರು ಮಂದಿ ಗಾಯಗೊಂಡರು. ಹಲವು ಮನೆಗಳು, ಶಾಪ್ ಮತ್ತು ಮನೆಗಳು ಕಿಡಿಗೇಡಿಗಳು ಹೊತ್ತಿಸಿದ ಬೆಂಕಿಯಲ್ಲಿ ಭಸ್ಮವಾದವು. ಇದರ ಅರಿವು ಇರಬೇಕಾಗಿದ್ದವರು ಜಾಣತನ ಪ್ರದರ್ಶಿಸಿದರು. ಜಾಣತನ ಫಲವೇ ಹಿಂಸಾಚಾರ ಮತ್ತು ಬೆಂಕಿ .

ಧ್ವಂಸಗೈದ ಕೈಗಳಿಗೆ ಮಣ್ಣು ಮೆತ್ತಿಕೊಳ್ಳಲಿಲ್ಲ.ಮಣ್ಣುಮೆತ್ತಿಕೊಂಡ ಸಾಕ್ಷಿಯೂ ಇರಲಿಲ್ಲ.ಎಲ್ಲವೂ ಸೇವೆಯೊಳಗೆ ಮುಗಿದು ಹೋಗಿತ್ತು. 1992, 2002 ಮತ್ತು 2020 ಪ್ರತಿ ಘಟನೆಯ ನಡುವೆ 10 ವರ್ಷಗಳ ಅಂತರವಿದೆ. ಮೂರನೆಯದು 18 ವರ್ಷದ ಅಂತರ.ಇವೆಲ್ಲವೂ  “ನಿರ್ದಿಷ್ಟ ದಾಳಿ”ಯ ಭಾಗವೇ ಆಗಿವೆ. “ನಿರ್ದಿಷ್ಟ ದಾಳಿ”ಗೆ 28 ವರ್ಷಗಳ ಇತಿಹಾಸವಿದೆ. ಈ ಇತಿಹಾಸ ಕರಾಳ ಅಧ್ಯಾಯಗಳು ಪ್ರತಿ ಹತ್ತು ಇಲ್ಲವೇ ಹದಿನೆಂಟು ವರ್ಷಕ್ಕೊಮ್ಮೆ ತೆರೆದುಕೊಳ್ಳುತ್ತಲೇ ಹೋಗುತ್ತಿವೆ. ಸಂಘಟಿತ, ವ್ಯವಸ್ಥಿತ ಮತ್ತು “ನಿರ್ದಿಷ್ಟ ದಾಳಿ” ನಡೆದಾಗ ಸಾಮಾನ್ಯ ಜನತೆ ಜರ್ಝರಿತಗೊಂಡಿರುವುದಂತೂ ಸತ್ಯದ ಸಂಗತಿ.

ಸೂತ್ರ ಹಿಡಿದವರು ಪರದೆಯ ಹಿಂದೆ ಇದ್ದಾರೆ. ಪರದೆಯ ಹಿಂದೆ ಯಾರು ಕುಳಿತಿದ್ದಾರೆ? ಯಾವ ಬೊಂಬೆ ಸೂತ್ರ ಹಿಡಿದ್ದಾರೆಂಬುದು ಪ್ರೇಕ್ಷಕರಿಗೆ ಗೊತ್ತಾಗುತ್ತಿಲ್ಲ. ಸೂತ್ರಧಾರರು ನಿರ್ದೇಶಿಸಿದಂತೆ ಗೊಂಬೆಗಳು ನರ್ತಿಸುತ್ತಿವೆ. ಕೊಳ್ಳಿ ಇಟ್ಟಂತೆ ನಟಿಸಿದರೆ ವಾಸ್ತವದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತದೆ. ಪಾತ್ರದ ಹತ್ಯೆ ನಡೆದುಹೋದರೆ ವಾಸ್ತವದಲ್ಲಿ ಹಲವು ತಲೆಗಳು ಉರುಳಿಹೋಗಿರುತ್ತವೆ. ಸೂತ್ರಧಾರರ ಶಕ್ತಿ ಏನೆಂಬುದು ಅವರ ಬೊಂಬೆ ಆಡಿಸುವ ರೀತಿಯಲ್ಲೇ ತಿಳಿಯುತ್ತದೆ. ರಂಗಸ್ಥಳದಲ್ಲಿ ಅಭಿನಯಿಸುವ ಬೊಂಬೆಗಳು ನಿಜ ಜೀವನದಲ್ಲಿ ಜೀವಂತ ಮನುಷ್ಯರೇ ಆಗಿರುತ್ತಾರೆ. ಅಂಥ ಬೊಂಬೆಗಳಿಂದಾಗಿಯೇ ಈಶಾನ್ಯ ದೆಹಲಿ ಹೊತ್ತಿ ಉರಿಯುತ್ತಿರುವುದು.

ಬೊಂಬೆಗಳು ಅಭಿನಯಿಸುವಾಗ ಯಾರೂ ರಂಗಸ್ಥಳಕ್ಕೆ ಹೋಗುವಂತಿಲ್ಲ. ಹೋಗಬೇಕಾದವರು ಹತ್ತಿರದಲ್ಲೇ ನಿಂತು ತಾದಾತ್ಮ್ಯದಿಂದ ನೋಡುತ್ತಾರೆ. ಬೊಂಬೆಗಳ ಅಭಿನಯ ಅಂಥದ್ದು. ನಿಜದಲ್ಲಿ ಬೆಂಕಿ ಹಚ್ಚಿದರೂ, ಜೀವಗಳು ಉರುಳಿಬಿದ್ದರೂ ಅದು ರಂಗದ ಮೇಲೆಯೇ ನಡೆದಂತೆ ಕಾಣುತ್ತದೆ. ಸೂತ್ರಧಾರರ ”ಪಾಲಕರು” ಆಜ್ಞಾನುವರ್ತಿಗಳು ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿ ನೀರು ಸುರಿದು ಆರಿಸುವ ಪ್ರಯತ್ನ ಮಾಡಬಹುದಿತ್ತು ಅದು ಮಾಡಲೇ ಇಲ್ಲ. ”ಊರೆಲ್ಲಾ ಕೊಳ್ಳೇ ಹೋದಮೇಲೆ ದಿಡ್ಡಿ ಬಾಗಿಲು ಹಾಕಿದರು” ಎಂಬಂತೆ ಪಾಲಕರು ನಡೆದುಕೊಂಡರು. ಸೂತ್ರದಾರರ ಕೈಚಳಕ ಪ್ರೇಕ್ಷಕರನ್ನು ಮನರಂಜಿಸಿತ್ತು. ಅವರ ಬಯಕೆಯೂ ಈಡೇರಿತ್ತು.

ಯಕ್ಷಗೊಂಬೆಗಳು ಪರಸ್ಪರ ಕಲ್ಲು ತೂರಿಕೊಂಡಿದ್ದವು. ಇದು ಜನರಿಗೆ ಕಾಣುವ ಹೊತ್ತಿಗೆ ಪರಸ್ಪರ ವಿರೋಧಿ ಗುಂಪು ಕಲ್ಲುತೂರಿಕೊಂಡಂತೆ. ಯಾಕೆ ಹೀಗೆ? ಇಂತಹ ನಾಟಕದ ದೃಶ್ಯಗಳ ಸೂತ್ರಧಾರರು ಆಟ ಆಡಲು ಬೇಕು. ಆ ಆಟ ಪ್ರೇಕ್ಷಕರಿಂದ ಹೊಗಳಿಕೆಯ ಗದ್ದುಗೆಗೆ ಏರಿಸುತ್ತದೆ. ಸೂತ್ರದಾರರು ಹೊಗಳಿಕೆಯ ಗದ್ದುಗೆ ಹಿಡಿಯುವುದೇ ತೊಗಲು ಬೊಂಬೆಗಳ ನರ್ತನದಿಂದ. ಆ ತೊಗಲು ಗೊಂಬೆಗಳು ಇಡೀ ದೇಶದ ಯಾವುದೇ ರಾಜ್ಯದಲ್ಲಿರಬಹುದು. ಅವು ಸದಾ ಕುಣಿಯುತ್ತಲೇ ಇರುತ್ತವೆ. ಗೊಂಬೆಗಳು ಹೆಚ್ಚುಹೆಚ್ಚು ಕುಣಿದಂತೆ ಪ್ರೇಕ್ಷಕ ಅಳುತ್ತಾನೆ, ನಗುತ್ತಾನೆ, ನೋವು ತಾಳಲಾರದೆ ಆಕ್ರಂದನ ಮಾಡುತ್ತಾನೆ.

ಮಹಾಭಾರತದಲ್ಲಿ ಕೃಷ್ಣ ಸೂತ್ರಧಾರ  ಅರ್ಜುನನ ಸಾರಥಿ. ದ್ವಾರಕಾ ನಗರಿಯ ಅವತಾರ ಪುರುಷ. ಅಂಥ ಕೃಷ್ಣ ಯುದ್ದರಂಗದಲ್ಲಿ ಕುದುರೆಯ ಲಗಾಮು ಹಿಡಿದು ಅರ್ಜುನನಿಗೆ ನೆರವಾದ. ಪಾಂಡವರಿಗೆ ಪಟ್ಟಾಧಿಕಾರ ಸಿಗುವಂತೆ ಮಾಡುವಲ್ಲಿ ಯಶಸ್ವಿಯಾದ. ಯುದ್ದದಲ್ಲಿ ಸಾವು ನೋವಾದಾಗ ಅವರು ಮಾಡಿದ ಪಾಪದ ಫಲ ಅಂದ. ಧರ್ಮಕ್ಕೆ ಜ್ಲಾನಿ ಉಂಟಾದಾಗ ಅವತಾರವೆತ್ತಿ ದುಷ್ಟರ ಸಂಹಾರ ಮಾಡುತ್ತೇನೆ ಎಂದ. ಆ ದುಷ್ಟರು ಕೂಡ ನಮ್ಮೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸಿದ್ದವರೇ. ಆದರೆ ಅಧಿಕಾರದ ಆಸೆಗೆ ನಮ್ಮೊಂದಿಗಿನ ದುಷ್ಟರೆಂದು ಕರೆಯಲ್ಪಡುವವನ್ನು ಕೊಲ್ಲಲು ಪ್ರೇರೇಪಿಸಿದ. ದುಷ್ಟರು ಯಾರು ಎಂಬುದನ್ನು ನಿರ್ಧರಿಸುವರು ದ್ವಾರಕೆಯ ಪುತ್ರರು. ದ್ವಾರಕೆಯ ಸೂತ್ರದಾರರು ಮಾಡಿದ್ದು ತಪ್ಪಲ್ಲವೇ ಎಂದು ಕೇಳಿದರೆ ಧರ್ಮದ ಕಡೆ ಮುಖ ಮಾಡುತ್ತಾರೆ. ಆ ಮುಖಗಳಿಗೆ ರಕ್ತದ ಕಲೆಗಳು ಮೆತ್ತಿಕೊಂಡಿವೆ.

ಸಧ್ಯಕ್ಕೆ ತೊಗಲು ಬೊಂಬೆಯಾಟ ನಿಂತಿದೆ. ಯುದ್ದದಲ್ಲಿ ಕಾಲು, ಕಣ್ಣು, ಕೈ ಕಳೆದುಕಕೊಂಡ, ಗಾಯಗೊಂಡ ಅಮಾಯಕರು ಧನ್ವಂತರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟುಂಬಗಳ ರೋಧಿಸುತ್ತಿವೆ. ಮನೆ, ಅಂಗಡಿ ಕಳೆದು ಕೊಂಡವರು ದಿಕ್ಕುಗಾಣದೆ ಯಾರತ್ತಲೋ ಸಹಾಯಹಸ್ತ ಚಾಚಿದ್ದಾರೆ. ಪರಿಹಾರ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕ್ರೂರ ಮನಸ್ಸುಗಳು ಜಯದಲ್ಲಿ ಸಂಭ್ರಮಿಸುತ್ತಿವೆ. ದುಃಖತಪ್ತರು ‘ಹರ ಕೊಲ್ಲಲ್ ಪರ ಕಾಯ್ವನೆ’? ಎಂದು ಗೋಳಾಡುತ್ತಿದ್ದಾರೆ. ಭೀಭತ್ಸ ಸನ್ನಿವೇಶ ನಮ್ಮೆದುರಿಗಿದೆ. ದುಃಖದ ಕಾರ್ಮೋಡಗಳು ಮಳೆಸುರಿಸುತ್ತಿವೆ. ಭೂಮಿ ನೆನೆಯದು ಬೆಂಕಿ ಆರದು ಅನ್ನುವಂತಿದೆ. ‘ಎಳವನ ಮೇಲೆ ಕುರುಡ ಕುಳಿತಿದ್ದಾನೆ/ ದಾರಿ ಸಾಗುವುದೆಂತೋ ನೋಡಬೇಕಾಗಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...