Homeಮುಖಪುಟಕಿಚ್ಚುಹಚ್ಚಿ ಶಾಂತಿಯಾತ್ರೆ ಮಾಡಿದ್ದು ಇತಿಹಾಸದ ವ್ಯಂಗ್ಯ...!!

ಕಿಚ್ಚುಹಚ್ಚಿ ಶಾಂತಿಯಾತ್ರೆ ಮಾಡಿದ್ದು ಇತಿಹಾಸದ ವ್ಯಂಗ್ಯ…!!

- Advertisement -
- Advertisement -

ಬೆಂಕಿಕಡ್ಡಿ ಗೀರಿದ ಪರಿಣಾಮವೇ ಹಿಂಸಾಚಾರಕ್ಕೆ ಮೂಲ ಕಾರಣ. ಮೂರು ಕಿಡಿಗಳು ಹೊತ್ತಿಕೊಂಡು ಉರಿಯಲು ಆರಂಭಿಸಿದಾಗಲೇ ಆರಿಸುವ ಯತ್ನ ಮಾಡಿದ್ದರೆ ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇರಲಿಲ್ಲ.. ಸೂತ್ರಧಾರಿಗಳು ಹೊತ್ತಿಸಿದ ಕಿಡಿಗಳು ಸುಡುತ್ತಲೇ ಹೋದವು. ಬೆಂಕಿ ಹೊತ್ತಿಕೊಳ್ಳುತ್ತಿ ದ್ದಂತೆಯೇ ತುಪ್ಪವನ್ನೂ ಸುರಿಯತೊಡಗಿದರು. ಬೆಂಕಿಯ ಕೆನ್ನಾಲಗೆಗಳು ಇಡೀ ಈಶಾನ್ಯ ದೆಹಲಿಯ ಹಲವು ಪ್ರದೇಶಗಳು ಹೊತ್ತಿ ಉರಿದವು. ಹಿಂಸಾಚಾರ 42 ಬಲಿ ಪಡೆಯಿತು. ನೂರಾರು ಮಂದಿ ಗಾಯಗೊಂಡರು. ಹಲವು ಮನೆಗಳು, ಶಾಪ್ ಮತ್ತು ಮನೆಗಳು ಕಿಡಿಗೇಡಿಗಳು ಹೊತ್ತಿಸಿದ ಬೆಂಕಿಯಲ್ಲಿ ಭಸ್ಮವಾದವು. ಇದರ ಅರಿವು ಇರಬೇಕಾಗಿದ್ದವರು ಜಾಣತನ ಪ್ರದರ್ಶಿಸಿದರು. ಜಾಣತನ ಫಲವೇ ಹಿಂಸಾಚಾರ ಮತ್ತು ಬೆಂಕಿ .

ಧ್ವಂಸಗೈದ ಕೈಗಳಿಗೆ ಮಣ್ಣು ಮೆತ್ತಿಕೊಳ್ಳಲಿಲ್ಲ.ಮಣ್ಣುಮೆತ್ತಿಕೊಂಡ ಸಾಕ್ಷಿಯೂ ಇರಲಿಲ್ಲ.ಎಲ್ಲವೂ ಸೇವೆಯೊಳಗೆ ಮುಗಿದು ಹೋಗಿತ್ತು. 1992, 2002 ಮತ್ತು 2020 ಪ್ರತಿ ಘಟನೆಯ ನಡುವೆ 10 ವರ್ಷಗಳ ಅಂತರವಿದೆ. ಮೂರನೆಯದು 18 ವರ್ಷದ ಅಂತರ.ಇವೆಲ್ಲವೂ  “ನಿರ್ದಿಷ್ಟ ದಾಳಿ”ಯ ಭಾಗವೇ ಆಗಿವೆ. “ನಿರ್ದಿಷ್ಟ ದಾಳಿ”ಗೆ 28 ವರ್ಷಗಳ ಇತಿಹಾಸವಿದೆ. ಈ ಇತಿಹಾಸ ಕರಾಳ ಅಧ್ಯಾಯಗಳು ಪ್ರತಿ ಹತ್ತು ಇಲ್ಲವೇ ಹದಿನೆಂಟು ವರ್ಷಕ್ಕೊಮ್ಮೆ ತೆರೆದುಕೊಳ್ಳುತ್ತಲೇ ಹೋಗುತ್ತಿವೆ. ಸಂಘಟಿತ, ವ್ಯವಸ್ಥಿತ ಮತ್ತು “ನಿರ್ದಿಷ್ಟ ದಾಳಿ” ನಡೆದಾಗ ಸಾಮಾನ್ಯ ಜನತೆ ಜರ್ಝರಿತಗೊಂಡಿರುವುದಂತೂ ಸತ್ಯದ ಸಂಗತಿ.

ಸೂತ್ರ ಹಿಡಿದವರು ಪರದೆಯ ಹಿಂದೆ ಇದ್ದಾರೆ. ಪರದೆಯ ಹಿಂದೆ ಯಾರು ಕುಳಿತಿದ್ದಾರೆ? ಯಾವ ಬೊಂಬೆ ಸೂತ್ರ ಹಿಡಿದ್ದಾರೆಂಬುದು ಪ್ರೇಕ್ಷಕರಿಗೆ ಗೊತ್ತಾಗುತ್ತಿಲ್ಲ. ಸೂತ್ರಧಾರರು ನಿರ್ದೇಶಿಸಿದಂತೆ ಗೊಂಬೆಗಳು ನರ್ತಿಸುತ್ತಿವೆ. ಕೊಳ್ಳಿ ಇಟ್ಟಂತೆ ನಟಿಸಿದರೆ ವಾಸ್ತವದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತದೆ. ಪಾತ್ರದ ಹತ್ಯೆ ನಡೆದುಹೋದರೆ ವಾಸ್ತವದಲ್ಲಿ ಹಲವು ತಲೆಗಳು ಉರುಳಿಹೋಗಿರುತ್ತವೆ. ಸೂತ್ರಧಾರರ ಶಕ್ತಿ ಏನೆಂಬುದು ಅವರ ಬೊಂಬೆ ಆಡಿಸುವ ರೀತಿಯಲ್ಲೇ ತಿಳಿಯುತ್ತದೆ. ರಂಗಸ್ಥಳದಲ್ಲಿ ಅಭಿನಯಿಸುವ ಬೊಂಬೆಗಳು ನಿಜ ಜೀವನದಲ್ಲಿ ಜೀವಂತ ಮನುಷ್ಯರೇ ಆಗಿರುತ್ತಾರೆ. ಅಂಥ ಬೊಂಬೆಗಳಿಂದಾಗಿಯೇ ಈಶಾನ್ಯ ದೆಹಲಿ ಹೊತ್ತಿ ಉರಿಯುತ್ತಿರುವುದು.

ಬೊಂಬೆಗಳು ಅಭಿನಯಿಸುವಾಗ ಯಾರೂ ರಂಗಸ್ಥಳಕ್ಕೆ ಹೋಗುವಂತಿಲ್ಲ. ಹೋಗಬೇಕಾದವರು ಹತ್ತಿರದಲ್ಲೇ ನಿಂತು ತಾದಾತ್ಮ್ಯದಿಂದ ನೋಡುತ್ತಾರೆ. ಬೊಂಬೆಗಳ ಅಭಿನಯ ಅಂಥದ್ದು. ನಿಜದಲ್ಲಿ ಬೆಂಕಿ ಹಚ್ಚಿದರೂ, ಜೀವಗಳು ಉರುಳಿಬಿದ್ದರೂ ಅದು ರಂಗದ ಮೇಲೆಯೇ ನಡೆದಂತೆ ಕಾಣುತ್ತದೆ. ಸೂತ್ರಧಾರರ ”ಪಾಲಕರು” ಆಜ್ಞಾನುವರ್ತಿಗಳು ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿ ನೀರು ಸುರಿದು ಆರಿಸುವ ಪ್ರಯತ್ನ ಮಾಡಬಹುದಿತ್ತು ಅದು ಮಾಡಲೇ ಇಲ್ಲ. ”ಊರೆಲ್ಲಾ ಕೊಳ್ಳೇ ಹೋದಮೇಲೆ ದಿಡ್ಡಿ ಬಾಗಿಲು ಹಾಕಿದರು” ಎಂಬಂತೆ ಪಾಲಕರು ನಡೆದುಕೊಂಡರು. ಸೂತ್ರದಾರರ ಕೈಚಳಕ ಪ್ರೇಕ್ಷಕರನ್ನು ಮನರಂಜಿಸಿತ್ತು. ಅವರ ಬಯಕೆಯೂ ಈಡೇರಿತ್ತು.

ಯಕ್ಷಗೊಂಬೆಗಳು ಪರಸ್ಪರ ಕಲ್ಲು ತೂರಿಕೊಂಡಿದ್ದವು. ಇದು ಜನರಿಗೆ ಕಾಣುವ ಹೊತ್ತಿಗೆ ಪರಸ್ಪರ ವಿರೋಧಿ ಗುಂಪು ಕಲ್ಲುತೂರಿಕೊಂಡಂತೆ. ಯಾಕೆ ಹೀಗೆ? ಇಂತಹ ನಾಟಕದ ದೃಶ್ಯಗಳ ಸೂತ್ರಧಾರರು ಆಟ ಆಡಲು ಬೇಕು. ಆ ಆಟ ಪ್ರೇಕ್ಷಕರಿಂದ ಹೊಗಳಿಕೆಯ ಗದ್ದುಗೆಗೆ ಏರಿಸುತ್ತದೆ. ಸೂತ್ರದಾರರು ಹೊಗಳಿಕೆಯ ಗದ್ದುಗೆ ಹಿಡಿಯುವುದೇ ತೊಗಲು ಬೊಂಬೆಗಳ ನರ್ತನದಿಂದ. ಆ ತೊಗಲು ಗೊಂಬೆಗಳು ಇಡೀ ದೇಶದ ಯಾವುದೇ ರಾಜ್ಯದಲ್ಲಿರಬಹುದು. ಅವು ಸದಾ ಕುಣಿಯುತ್ತಲೇ ಇರುತ್ತವೆ. ಗೊಂಬೆಗಳು ಹೆಚ್ಚುಹೆಚ್ಚು ಕುಣಿದಂತೆ ಪ್ರೇಕ್ಷಕ ಅಳುತ್ತಾನೆ, ನಗುತ್ತಾನೆ, ನೋವು ತಾಳಲಾರದೆ ಆಕ್ರಂದನ ಮಾಡುತ್ತಾನೆ.

ಮಹಾಭಾರತದಲ್ಲಿ ಕೃಷ್ಣ ಸೂತ್ರಧಾರ  ಅರ್ಜುನನ ಸಾರಥಿ. ದ್ವಾರಕಾ ನಗರಿಯ ಅವತಾರ ಪುರುಷ. ಅಂಥ ಕೃಷ್ಣ ಯುದ್ದರಂಗದಲ್ಲಿ ಕುದುರೆಯ ಲಗಾಮು ಹಿಡಿದು ಅರ್ಜುನನಿಗೆ ನೆರವಾದ. ಪಾಂಡವರಿಗೆ ಪಟ್ಟಾಧಿಕಾರ ಸಿಗುವಂತೆ ಮಾಡುವಲ್ಲಿ ಯಶಸ್ವಿಯಾದ. ಯುದ್ದದಲ್ಲಿ ಸಾವು ನೋವಾದಾಗ ಅವರು ಮಾಡಿದ ಪಾಪದ ಫಲ ಅಂದ. ಧರ್ಮಕ್ಕೆ ಜ್ಲಾನಿ ಉಂಟಾದಾಗ ಅವತಾರವೆತ್ತಿ ದುಷ್ಟರ ಸಂಹಾರ ಮಾಡುತ್ತೇನೆ ಎಂದ. ಆ ದುಷ್ಟರು ಕೂಡ ನಮ್ಮೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸಿದ್ದವರೇ. ಆದರೆ ಅಧಿಕಾರದ ಆಸೆಗೆ ನಮ್ಮೊಂದಿಗಿನ ದುಷ್ಟರೆಂದು ಕರೆಯಲ್ಪಡುವವನ್ನು ಕೊಲ್ಲಲು ಪ್ರೇರೇಪಿಸಿದ. ದುಷ್ಟರು ಯಾರು ಎಂಬುದನ್ನು ನಿರ್ಧರಿಸುವರು ದ್ವಾರಕೆಯ ಪುತ್ರರು. ದ್ವಾರಕೆಯ ಸೂತ್ರದಾರರು ಮಾಡಿದ್ದು ತಪ್ಪಲ್ಲವೇ ಎಂದು ಕೇಳಿದರೆ ಧರ್ಮದ ಕಡೆ ಮುಖ ಮಾಡುತ್ತಾರೆ. ಆ ಮುಖಗಳಿಗೆ ರಕ್ತದ ಕಲೆಗಳು ಮೆತ್ತಿಕೊಂಡಿವೆ.

ಸಧ್ಯಕ್ಕೆ ತೊಗಲು ಬೊಂಬೆಯಾಟ ನಿಂತಿದೆ. ಯುದ್ದದಲ್ಲಿ ಕಾಲು, ಕಣ್ಣು, ಕೈ ಕಳೆದುಕಕೊಂಡ, ಗಾಯಗೊಂಡ ಅಮಾಯಕರು ಧನ್ವಂತರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟುಂಬಗಳ ರೋಧಿಸುತ್ತಿವೆ. ಮನೆ, ಅಂಗಡಿ ಕಳೆದು ಕೊಂಡವರು ದಿಕ್ಕುಗಾಣದೆ ಯಾರತ್ತಲೋ ಸಹಾಯಹಸ್ತ ಚಾಚಿದ್ದಾರೆ. ಪರಿಹಾರ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕ್ರೂರ ಮನಸ್ಸುಗಳು ಜಯದಲ್ಲಿ ಸಂಭ್ರಮಿಸುತ್ತಿವೆ. ದುಃಖತಪ್ತರು ‘ಹರ ಕೊಲ್ಲಲ್ ಪರ ಕಾಯ್ವನೆ’? ಎಂದು ಗೋಳಾಡುತ್ತಿದ್ದಾರೆ. ಭೀಭತ್ಸ ಸನ್ನಿವೇಶ ನಮ್ಮೆದುರಿಗಿದೆ. ದುಃಖದ ಕಾರ್ಮೋಡಗಳು ಮಳೆಸುರಿಸುತ್ತಿವೆ. ಭೂಮಿ ನೆನೆಯದು ಬೆಂಕಿ ಆರದು ಅನ್ನುವಂತಿದೆ. ‘ಎಳವನ ಮೇಲೆ ಕುರುಡ ಕುಳಿತಿದ್ದಾನೆ/ ದಾರಿ ಸಾಗುವುದೆಂತೋ ನೋಡಬೇಕಾಗಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...