Homeಮುಖಪುಟಕಿಚ್ಚುಹಚ್ಚಿ ಶಾಂತಿಯಾತ್ರೆ ಮಾಡಿದ್ದು ಇತಿಹಾಸದ ವ್ಯಂಗ್ಯ...!!

ಕಿಚ್ಚುಹಚ್ಚಿ ಶಾಂತಿಯಾತ್ರೆ ಮಾಡಿದ್ದು ಇತಿಹಾಸದ ವ್ಯಂಗ್ಯ…!!

- Advertisement -
- Advertisement -

ಬೆಂಕಿಕಡ್ಡಿ ಗೀರಿದ ಪರಿಣಾಮವೇ ಹಿಂಸಾಚಾರಕ್ಕೆ ಮೂಲ ಕಾರಣ. ಮೂರು ಕಿಡಿಗಳು ಹೊತ್ತಿಕೊಂಡು ಉರಿಯಲು ಆರಂಭಿಸಿದಾಗಲೇ ಆರಿಸುವ ಯತ್ನ ಮಾಡಿದ್ದರೆ ಯಾವುದೇ ಅನಾಹುತಗಳು ಸಂಭವಿಸುವ ಸಾಧ್ಯತೆ ಇರಲಿಲ್ಲ.. ಸೂತ್ರಧಾರಿಗಳು ಹೊತ್ತಿಸಿದ ಕಿಡಿಗಳು ಸುಡುತ್ತಲೇ ಹೋದವು. ಬೆಂಕಿ ಹೊತ್ತಿಕೊಳ್ಳುತ್ತಿ ದ್ದಂತೆಯೇ ತುಪ್ಪವನ್ನೂ ಸುರಿಯತೊಡಗಿದರು. ಬೆಂಕಿಯ ಕೆನ್ನಾಲಗೆಗಳು ಇಡೀ ಈಶಾನ್ಯ ದೆಹಲಿಯ ಹಲವು ಪ್ರದೇಶಗಳು ಹೊತ್ತಿ ಉರಿದವು. ಹಿಂಸಾಚಾರ 42 ಬಲಿ ಪಡೆಯಿತು. ನೂರಾರು ಮಂದಿ ಗಾಯಗೊಂಡರು. ಹಲವು ಮನೆಗಳು, ಶಾಪ್ ಮತ್ತು ಮನೆಗಳು ಕಿಡಿಗೇಡಿಗಳು ಹೊತ್ತಿಸಿದ ಬೆಂಕಿಯಲ್ಲಿ ಭಸ್ಮವಾದವು. ಇದರ ಅರಿವು ಇರಬೇಕಾಗಿದ್ದವರು ಜಾಣತನ ಪ್ರದರ್ಶಿಸಿದರು. ಜಾಣತನ ಫಲವೇ ಹಿಂಸಾಚಾರ ಮತ್ತು ಬೆಂಕಿ .

ಧ್ವಂಸಗೈದ ಕೈಗಳಿಗೆ ಮಣ್ಣು ಮೆತ್ತಿಕೊಳ್ಳಲಿಲ್ಲ.ಮಣ್ಣುಮೆತ್ತಿಕೊಂಡ ಸಾಕ್ಷಿಯೂ ಇರಲಿಲ್ಲ.ಎಲ್ಲವೂ ಸೇವೆಯೊಳಗೆ ಮುಗಿದು ಹೋಗಿತ್ತು. 1992, 2002 ಮತ್ತು 2020 ಪ್ರತಿ ಘಟನೆಯ ನಡುವೆ 10 ವರ್ಷಗಳ ಅಂತರವಿದೆ. ಮೂರನೆಯದು 18 ವರ್ಷದ ಅಂತರ.ಇವೆಲ್ಲವೂ  “ನಿರ್ದಿಷ್ಟ ದಾಳಿ”ಯ ಭಾಗವೇ ಆಗಿವೆ. “ನಿರ್ದಿಷ್ಟ ದಾಳಿ”ಗೆ 28 ವರ್ಷಗಳ ಇತಿಹಾಸವಿದೆ. ಈ ಇತಿಹಾಸ ಕರಾಳ ಅಧ್ಯಾಯಗಳು ಪ್ರತಿ ಹತ್ತು ಇಲ್ಲವೇ ಹದಿನೆಂಟು ವರ್ಷಕ್ಕೊಮ್ಮೆ ತೆರೆದುಕೊಳ್ಳುತ್ತಲೇ ಹೋಗುತ್ತಿವೆ. ಸಂಘಟಿತ, ವ್ಯವಸ್ಥಿತ ಮತ್ತು “ನಿರ್ದಿಷ್ಟ ದಾಳಿ” ನಡೆದಾಗ ಸಾಮಾನ್ಯ ಜನತೆ ಜರ್ಝರಿತಗೊಂಡಿರುವುದಂತೂ ಸತ್ಯದ ಸಂಗತಿ.

ಸೂತ್ರ ಹಿಡಿದವರು ಪರದೆಯ ಹಿಂದೆ ಇದ್ದಾರೆ. ಪರದೆಯ ಹಿಂದೆ ಯಾರು ಕುಳಿತಿದ್ದಾರೆ? ಯಾವ ಬೊಂಬೆ ಸೂತ್ರ ಹಿಡಿದ್ದಾರೆಂಬುದು ಪ್ರೇಕ್ಷಕರಿಗೆ ಗೊತ್ತಾಗುತ್ತಿಲ್ಲ. ಸೂತ್ರಧಾರರು ನಿರ್ದೇಶಿಸಿದಂತೆ ಗೊಂಬೆಗಳು ನರ್ತಿಸುತ್ತಿವೆ. ಕೊಳ್ಳಿ ಇಟ್ಟಂತೆ ನಟಿಸಿದರೆ ವಾಸ್ತವದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತದೆ. ಪಾತ್ರದ ಹತ್ಯೆ ನಡೆದುಹೋದರೆ ವಾಸ್ತವದಲ್ಲಿ ಹಲವು ತಲೆಗಳು ಉರುಳಿಹೋಗಿರುತ್ತವೆ. ಸೂತ್ರಧಾರರ ಶಕ್ತಿ ಏನೆಂಬುದು ಅವರ ಬೊಂಬೆ ಆಡಿಸುವ ರೀತಿಯಲ್ಲೇ ತಿಳಿಯುತ್ತದೆ. ರಂಗಸ್ಥಳದಲ್ಲಿ ಅಭಿನಯಿಸುವ ಬೊಂಬೆಗಳು ನಿಜ ಜೀವನದಲ್ಲಿ ಜೀವಂತ ಮನುಷ್ಯರೇ ಆಗಿರುತ್ತಾರೆ. ಅಂಥ ಬೊಂಬೆಗಳಿಂದಾಗಿಯೇ ಈಶಾನ್ಯ ದೆಹಲಿ ಹೊತ್ತಿ ಉರಿಯುತ್ತಿರುವುದು.

ಬೊಂಬೆಗಳು ಅಭಿನಯಿಸುವಾಗ ಯಾರೂ ರಂಗಸ್ಥಳಕ್ಕೆ ಹೋಗುವಂತಿಲ್ಲ. ಹೋಗಬೇಕಾದವರು ಹತ್ತಿರದಲ್ಲೇ ನಿಂತು ತಾದಾತ್ಮ್ಯದಿಂದ ನೋಡುತ್ತಾರೆ. ಬೊಂಬೆಗಳ ಅಭಿನಯ ಅಂಥದ್ದು. ನಿಜದಲ್ಲಿ ಬೆಂಕಿ ಹಚ್ಚಿದರೂ, ಜೀವಗಳು ಉರುಳಿಬಿದ್ದರೂ ಅದು ರಂಗದ ಮೇಲೆಯೇ ನಡೆದಂತೆ ಕಾಣುತ್ತದೆ. ಸೂತ್ರಧಾರರ ”ಪಾಲಕರು” ಆಜ್ಞಾನುವರ್ತಿಗಳು ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿ ನೀರು ಸುರಿದು ಆರಿಸುವ ಪ್ರಯತ್ನ ಮಾಡಬಹುದಿತ್ತು ಅದು ಮಾಡಲೇ ಇಲ್ಲ. ”ಊರೆಲ್ಲಾ ಕೊಳ್ಳೇ ಹೋದಮೇಲೆ ದಿಡ್ಡಿ ಬಾಗಿಲು ಹಾಕಿದರು” ಎಂಬಂತೆ ಪಾಲಕರು ನಡೆದುಕೊಂಡರು. ಸೂತ್ರದಾರರ ಕೈಚಳಕ ಪ್ರೇಕ್ಷಕರನ್ನು ಮನರಂಜಿಸಿತ್ತು. ಅವರ ಬಯಕೆಯೂ ಈಡೇರಿತ್ತು.

ಯಕ್ಷಗೊಂಬೆಗಳು ಪರಸ್ಪರ ಕಲ್ಲು ತೂರಿಕೊಂಡಿದ್ದವು. ಇದು ಜನರಿಗೆ ಕಾಣುವ ಹೊತ್ತಿಗೆ ಪರಸ್ಪರ ವಿರೋಧಿ ಗುಂಪು ಕಲ್ಲುತೂರಿಕೊಂಡಂತೆ. ಯಾಕೆ ಹೀಗೆ? ಇಂತಹ ನಾಟಕದ ದೃಶ್ಯಗಳ ಸೂತ್ರಧಾರರು ಆಟ ಆಡಲು ಬೇಕು. ಆ ಆಟ ಪ್ರೇಕ್ಷಕರಿಂದ ಹೊಗಳಿಕೆಯ ಗದ್ದುಗೆಗೆ ಏರಿಸುತ್ತದೆ. ಸೂತ್ರದಾರರು ಹೊಗಳಿಕೆಯ ಗದ್ದುಗೆ ಹಿಡಿಯುವುದೇ ತೊಗಲು ಬೊಂಬೆಗಳ ನರ್ತನದಿಂದ. ಆ ತೊಗಲು ಗೊಂಬೆಗಳು ಇಡೀ ದೇಶದ ಯಾವುದೇ ರಾಜ್ಯದಲ್ಲಿರಬಹುದು. ಅವು ಸದಾ ಕುಣಿಯುತ್ತಲೇ ಇರುತ್ತವೆ. ಗೊಂಬೆಗಳು ಹೆಚ್ಚುಹೆಚ್ಚು ಕುಣಿದಂತೆ ಪ್ರೇಕ್ಷಕ ಅಳುತ್ತಾನೆ, ನಗುತ್ತಾನೆ, ನೋವು ತಾಳಲಾರದೆ ಆಕ್ರಂದನ ಮಾಡುತ್ತಾನೆ.

ಮಹಾಭಾರತದಲ್ಲಿ ಕೃಷ್ಣ ಸೂತ್ರಧಾರ  ಅರ್ಜುನನ ಸಾರಥಿ. ದ್ವಾರಕಾ ನಗರಿಯ ಅವತಾರ ಪುರುಷ. ಅಂಥ ಕೃಷ್ಣ ಯುದ್ದರಂಗದಲ್ಲಿ ಕುದುರೆಯ ಲಗಾಮು ಹಿಡಿದು ಅರ್ಜುನನಿಗೆ ನೆರವಾದ. ಪಾಂಡವರಿಗೆ ಪಟ್ಟಾಧಿಕಾರ ಸಿಗುವಂತೆ ಮಾಡುವಲ್ಲಿ ಯಶಸ್ವಿಯಾದ. ಯುದ್ದದಲ್ಲಿ ಸಾವು ನೋವಾದಾಗ ಅವರು ಮಾಡಿದ ಪಾಪದ ಫಲ ಅಂದ. ಧರ್ಮಕ್ಕೆ ಜ್ಲಾನಿ ಉಂಟಾದಾಗ ಅವತಾರವೆತ್ತಿ ದುಷ್ಟರ ಸಂಹಾರ ಮಾಡುತ್ತೇನೆ ಎಂದ. ಆ ದುಷ್ಟರು ಕೂಡ ನಮ್ಮೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸಿದ್ದವರೇ. ಆದರೆ ಅಧಿಕಾರದ ಆಸೆಗೆ ನಮ್ಮೊಂದಿಗಿನ ದುಷ್ಟರೆಂದು ಕರೆಯಲ್ಪಡುವವನ್ನು ಕೊಲ್ಲಲು ಪ್ರೇರೇಪಿಸಿದ. ದುಷ್ಟರು ಯಾರು ಎಂಬುದನ್ನು ನಿರ್ಧರಿಸುವರು ದ್ವಾರಕೆಯ ಪುತ್ರರು. ದ್ವಾರಕೆಯ ಸೂತ್ರದಾರರು ಮಾಡಿದ್ದು ತಪ್ಪಲ್ಲವೇ ಎಂದು ಕೇಳಿದರೆ ಧರ್ಮದ ಕಡೆ ಮುಖ ಮಾಡುತ್ತಾರೆ. ಆ ಮುಖಗಳಿಗೆ ರಕ್ತದ ಕಲೆಗಳು ಮೆತ್ತಿಕೊಂಡಿವೆ.

ಸಧ್ಯಕ್ಕೆ ತೊಗಲು ಬೊಂಬೆಯಾಟ ನಿಂತಿದೆ. ಯುದ್ದದಲ್ಲಿ ಕಾಲು, ಕಣ್ಣು, ಕೈ ಕಳೆದುಕಕೊಂಡ, ಗಾಯಗೊಂಡ ಅಮಾಯಕರು ಧನ್ವಂತರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟುಂಬಗಳ ರೋಧಿಸುತ್ತಿವೆ. ಮನೆ, ಅಂಗಡಿ ಕಳೆದು ಕೊಂಡವರು ದಿಕ್ಕುಗಾಣದೆ ಯಾರತ್ತಲೋ ಸಹಾಯಹಸ್ತ ಚಾಚಿದ್ದಾರೆ. ಪರಿಹಾರ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕ್ರೂರ ಮನಸ್ಸುಗಳು ಜಯದಲ್ಲಿ ಸಂಭ್ರಮಿಸುತ್ತಿವೆ. ದುಃಖತಪ್ತರು ‘ಹರ ಕೊಲ್ಲಲ್ ಪರ ಕಾಯ್ವನೆ’? ಎಂದು ಗೋಳಾಡುತ್ತಿದ್ದಾರೆ. ಭೀಭತ್ಸ ಸನ್ನಿವೇಶ ನಮ್ಮೆದುರಿಗಿದೆ. ದುಃಖದ ಕಾರ್ಮೋಡಗಳು ಮಳೆಸುರಿಸುತ್ತಿವೆ. ಭೂಮಿ ನೆನೆಯದು ಬೆಂಕಿ ಆರದು ಅನ್ನುವಂತಿದೆ. ‘ಎಳವನ ಮೇಲೆ ಕುರುಡ ಕುಳಿತಿದ್ದಾನೆ/ ದಾರಿ ಸಾಗುವುದೆಂತೋ ನೋಡಬೇಕಾಗಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...