Homeಕರ್ನಾಟಕಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಡಾ.ಬಿ.ಆರ್‌.ಅಂಬೇಡ್ಕರ್‌, ಮೀಸಲಾತಿ ಮತ್ತು ದಲಿತರ ಕುರಿತು ಅವಹೇಳನಕಾರಿ ಸ್ಕಿಟ್‌ ಮಾಡಿ ವಿವಾದ ಸೃಷ್ಟಿಸುವ ಬೆಂಗಳೂರಿನ ಜೈನ್‌ ವಿಶ್ವವಿದ್ಯಾನಿಲಯದ ವಿರುದ್ಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗದಲ್ಲಿ ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಸ್ಕಿಟ್‌ ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಂಬೇಡ್ಕರ್‌ ಅವರನ್ನು ಅಗೌರವಿಸುವ ವಿದ್ಯಮಾನಗಳು ಆಗಾಗ್ಗೆ ಘಟಿಸುತ್ತಿವೆ. ಇವು ಉದ್ದೇಶಪೂರ್ವಕ ಘಟನೆಗಳಾಗಿವೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿತ್ತು. ಈಗ ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಕಿಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಲಾಗಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಭೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿದರು.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದೆ ಎಂದಿದ್ದಾರೆ.

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಿಯುಟಿಸಿ ಅಧ್ಯಕ್ಷ ಪ್ರೊ.ಮುರಳೀಧರ್, ಬಿ.ಗೋಪಾಲ್, ಡಾ. ರಾಮಕೃಷ್ಣಯ್ಯ, ಪ್ರೊ.ಹೊನ್ನು ಸಿದ್ದಾರ್ಥ, ಟಿ.ಎಚ್.ಮೂರ್ತಿ, ಡಾ.ಪ್ರಭಾಕರ್, ಪ್ರೊ. ಕೃಷ್ಣಸ್ವಾಮಿ, ಹ.ರ.ಮಹೇಶ್, ಡಾ.ದೇವಾನಂದ್, ಸುರೇಶ್ ಗೌತಮ್, ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್, ಶಶಿಕುಮಾರ್ ಪಿ, ಬೈರಾಜ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೇರಿ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಕ್, ರಾಜೇಶ್, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು,
ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿರಿ: ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಜೈನ್‌ ವಿವಿ, ತಪ್ಪಿತಸ್ಥರ ಬಂಧನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It’s am immature reaction. If Gandhiji can be out to scrutiny, if Nehru can be out to scrutiny, if savarkar can be out to scrutiny, why if lord Ram himself can be put to scrutiny, why not the architect of constitution. Let him come out even brighter…

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...