Homeಕರ್ನಾಟಕಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಡಾ.ಬಿ.ಆರ್‌.ಅಂಬೇಡ್ಕರ್‌, ಮೀಸಲಾತಿ ಮತ್ತು ದಲಿತರ ಕುರಿತು ಅವಹೇಳನಕಾರಿ ಸ್ಕಿಟ್‌ ಮಾಡಿ ವಿವಾದ ಸೃಷ್ಟಿಸುವ ಬೆಂಗಳೂರಿನ ಜೈನ್‌ ವಿಶ್ವವಿದ್ಯಾನಿಲಯದ ವಿರುದ್ಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗದಲ್ಲಿ ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಸ್ಕಿಟ್‌ ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಂಬೇಡ್ಕರ್‌ ಅವರನ್ನು ಅಗೌರವಿಸುವ ವಿದ್ಯಮಾನಗಳು ಆಗಾಗ್ಗೆ ಘಟಿಸುತ್ತಿವೆ. ಇವು ಉದ್ದೇಶಪೂರ್ವಕ ಘಟನೆಗಳಾಗಿವೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿತ್ತು. ಈಗ ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಕಿಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಲಾಗಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಭೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿದರು.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದೆ ಎಂದಿದ್ದಾರೆ.

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಿಯುಟಿಸಿ ಅಧ್ಯಕ್ಷ ಪ್ರೊ.ಮುರಳೀಧರ್, ಬಿ.ಗೋಪಾಲ್, ಡಾ. ರಾಮಕೃಷ್ಣಯ್ಯ, ಪ್ರೊ.ಹೊನ್ನು ಸಿದ್ದಾರ್ಥ, ಟಿ.ಎಚ್.ಮೂರ್ತಿ, ಡಾ.ಪ್ರಭಾಕರ್, ಪ್ರೊ. ಕೃಷ್ಣಸ್ವಾಮಿ, ಹ.ರ.ಮಹೇಶ್, ಡಾ.ದೇವಾನಂದ್, ಸುರೇಶ್ ಗೌತಮ್, ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್, ಶಶಿಕುಮಾರ್ ಪಿ, ಬೈರಾಜ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೇರಿ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಕ್, ರಾಜೇಶ್, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು,
ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿರಿ: ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಜೈನ್‌ ವಿವಿ, ತಪ್ಪಿತಸ್ಥರ ಬಂಧನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It’s am immature reaction. If Gandhiji can be out to scrutiny, if Nehru can be out to scrutiny, if savarkar can be out to scrutiny, why if lord Ram himself can be put to scrutiny, why not the architect of constitution. Let him come out even brighter…

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...