Homeಕರ್ನಾಟಕಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಡಾ.ಬಿ.ಆರ್‌.ಅಂಬೇಡ್ಕರ್‌, ಮೀಸಲಾತಿ ಮತ್ತು ದಲಿತರ ಕುರಿತು ಅವಹೇಳನಕಾರಿ ಸ್ಕಿಟ್‌ ಮಾಡಿ ವಿವಾದ ಸೃಷ್ಟಿಸುವ ಬೆಂಗಳೂರಿನ ಜೈನ್‌ ವಿಶ್ವವಿದ್ಯಾನಿಲಯದ ವಿರುದ್ಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗದಲ್ಲಿ ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಸ್ಕಿಟ್‌ ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಂಬೇಡ್ಕರ್‌ ಅವರನ್ನು ಅಗೌರವಿಸುವ ವಿದ್ಯಮಾನಗಳು ಆಗಾಗ್ಗೆ ಘಟಿಸುತ್ತಿವೆ. ಇವು ಉದ್ದೇಶಪೂರ್ವಕ ಘಟನೆಗಳಾಗಿವೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿತ್ತು. ಈಗ ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಕಿಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಲಾಗಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಭೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿದರು.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದೆ ಎಂದಿದ್ದಾರೆ.

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಿಯುಟಿಸಿ ಅಧ್ಯಕ್ಷ ಪ್ರೊ.ಮುರಳೀಧರ್, ಬಿ.ಗೋಪಾಲ್, ಡಾ. ರಾಮಕೃಷ್ಣಯ್ಯ, ಪ್ರೊ.ಹೊನ್ನು ಸಿದ್ದಾರ್ಥ, ಟಿ.ಎಚ್.ಮೂರ್ತಿ, ಡಾ.ಪ್ರಭಾಕರ್, ಪ್ರೊ. ಕೃಷ್ಣಸ್ವಾಮಿ, ಹ.ರ.ಮಹೇಶ್, ಡಾ.ದೇವಾನಂದ್, ಸುರೇಶ್ ಗೌತಮ್, ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್, ಶಶಿಕುಮಾರ್ ಪಿ, ಬೈರಾಜ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೇರಿ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಕ್, ರಾಜೇಶ್, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು,
ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿರಿ: ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಜೈನ್‌ ವಿವಿ, ತಪ್ಪಿತಸ್ಥರ ಬಂಧನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It’s am immature reaction. If Gandhiji can be out to scrutiny, if Nehru can be out to scrutiny, if savarkar can be out to scrutiny, why if lord Ram himself can be put to scrutiny, why not the architect of constitution. Let him come out even brighter…

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...