Homeಕರ್ನಾಟಕಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. - ಎಸ್.ಆರ್.ಶ್ರೀನಿವಾಸ್

- Advertisement -
- Advertisement -

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್, ಗುಬ್ಬಿಯಲ್ಲಿ ಡಿಸೆಂಬರ್ 19ರಂದು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಇಂದು ಪುನರುಚ್ಚರಿಸಿದರು. “ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಿದ್ದೇನೆ. ಚಾಮುಂಡೇಶ್ವರಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿತ್ತು” ಎಂದಿದ್ದಾರೆ.

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. ಅದು ಆಗುತ್ತಿಲ್ಲ. ಪಕ್ಷದಲ್ಲಿ ಆಗುವುದೇ ಒಂದು, ಹೊರಗೆ ಹೇಳುವುದೇ ಒಂದು. ಇಂತಹ ದ್ವಂದ್ವವನ್ನು ಬಿಟ್ಟು ನೇರಾನೇರ ಹೇಳಿದರೆ ಒಳ್ಳೆಯದು. ಜೆಡಿಎಸ್ ಪಕ್ಷದಲ್ಲಿ ಗೋಪಾಲಯ್ಯ, ನಾನು ಮತ್ತು ರಾಜಣ್ಣ ಅವರನ್ನು ಬಿಟ್ಟರೆ ಬೇರೆ ಯಾರೂ ಕೂಡ ನೇರವಾಗಿ ಮಾತನಾಡುತ್ತಿರಲಿಲ್ಲ ಎಂಬುದನ್ನು ಸ್ಮರಿಸಿದರು.

ಕೃಷಿ ಸಂಬಂಧಿ ನೂತನ ಮೂರು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ದಲ್ಲಿ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಕೃಷಿ ಮಸೂದೆಯ ಪರವಾಗಿ ಜೆಡಿಎಸ್ ಮತ ಚಲಾಯಿಸಿದ್ದಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ ಬೇಸರಗೊಂಡಿದ್ದಾರೆ. ಅದೇ ಕಾರಣಕ್ಕೆ ಜೆಡಿಎಸ್ ತೆಗೆದುಕೊಳ್ಳುವ ತೀರ್ಮಾನಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್ ಹೇಳಿದಂತೆ “ನಾನು ಮಾನಸಿಕವಾಗಿ ರಾಜಕೀಯ ಮಾಡುತ್ತಿಲ್ಲ. ದೈಹಿಕವಾಗಿ ಮಾತ್ರ ರಾಜಕಾರಣದಲ್ಲಿದ್ದೇನೆ” ಎಂದು ಹೇಳಿರುವುದು ಮೇಲಿನ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯ ಸೋಲಿನ ಒಳ ಒಪ್ಪಂದದ ಬಗ್ಗೆ ಮಾತ್ರ ಮಾತನಾಡುತ್ತಿದ್ದೀರಾ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿನ ಒಳ ಒಪ್ಪಂದದ ಕುರಿತು ಹೇಳಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀನಿವಾಸ್, “ಎಚ್.ಡಿ.ದೇವೇಗೌಡರು ಯಾರೋ ಒಬ್ಬ ಮುಖಂಡರನ್ನು ನಂಬಿಕೊಂಡಿದ್ದರು. ಅತಿಯಾದ ನಂಬಿಕೆ ಮತ್ತು ಭರವಸೆ ಅವರ ಸೋಲಿಗೆ ಕಾರಣ. ನಮ್ಮ ಮಾತನ್ನು ಕೇಳಿದ್ದರೆ ದೇವೇಗೌಡರು ಗೆಲ್ಲುತ್ತಿದ್ದರು. ಆ ಮುಖಂಡರು ದೇವೇಗೌಡರು ಸೋಲಲು ಕಾರಣ. ಒಳಗೊಂದು, ಹೊರಗೊಂದು ಮಾತನಾಡುವುದು ಸರಿಯಲ್ಲ. ಕುಮಾರಸ್ವಾಮಿ ಏಕೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಮುಖಂಡರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ಎರಡೂವರೆ ವರ್ಷ ಸರ್ಕಾರ ಬೀಳುವುದಿಲ್ಲ. ನಾನು ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ. ನನಗೆ ಬಿಜೆಪಿ ಮೇಲೆ ಪ್ರೀತಿಯೂ ಇಲ್ಲ, ಒಲವೂ ಇಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಇಚ್ಚೆ ನನಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಟರು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಗೆ ತೀವ್ರ ಅಸಮಾಧಾನ ಹೊರಹಾಕಿದರು.

ಮುಂದಿನ ತೀರ್ಮಾನದ ಕುರಿತು ಈಗಲೇ ಏನೂ ಹೇಳಲಾಗುವುದಿಲ್ಲ. ಕಾರ್ಯಕರ್ತರನ್ನು ಕರೆದು ಚರ್ಚೆ ನಡೆಸಬೇಕು. ಪ್ರತಿಯೊಂದು ಪಕ್ಷದಲ್ಲೂ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಪದ್ದತಿ ಇದೆ. ಅದನ್ನು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದರು.

ಕೆ.ಎನ್. ರಾಜಣ್ಣ ಮತ್ತು ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ ನಾವು ಸ್ನೇಹಿತರು. ನನ್ನ ಗೆಲುವಿನಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜಣ್ಣ ನನಗೆ ಗಾಡ್ ಫಾದರ್. ಮನೆಗೆ ಬರುವಂತೆ ಕರೆ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ಬಂದಿದ್ದೇನೆ. ಮುಂದಿನ ಹೆಜ್ಞೆಗಳ ಕುರಿತು ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ.  ಗುಬ್ಬಿಯ ಕೆಲ ಜೆಡಿಎಸ್ ಮುಖಂಡರು ಪಕ್ಷದಲ್ಲಿದ್ದುಕೊಂಡೇ ನನ್ನ ವಿರುದ್ದವಾಗಿ ಕೆಲಸ ಮಾಡಿದರು. ನನ್ನನ್ನೂ ಸೋಲಿಸುವ ಯತ್ನ ನಡೆಯಿತು. ಆದರೂ ಮತದಾರರು ಗೆಲ್ಲಿಸಿದರು ಎಂದು ಹೇಳಿದರು.

ಮಾಜಿ ಶಾಸಕರ ಮನೆಯಲ್ಲಿ ಶ್ರೀನಿವಾಸ್ ಕಾಣಿಸಿಕೊಂಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಜೆಡಿಎಸ್ ನಾಯಕರ ನಡವಳಿಗಳ ಬಗ್ಗೆ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದು, ಅವರು ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ತೀರ್ಮಾನಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಪಕ್ಷದಿಂದ ಹೆಜ್ಜೆಯನ್ನು ಹೊರಗೆ ಇಟ್ಟಿರುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...