Homeಕರ್ನಾಟಕಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. - ಎಸ್.ಆರ್.ಶ್ರೀನಿವಾಸ್

- Advertisement -
- Advertisement -

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್, ಗುಬ್ಬಿಯಲ್ಲಿ ಡಿಸೆಂಬರ್ 19ರಂದು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಇಂದು ಪುನರುಚ್ಚರಿಸಿದರು. “ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಿದ್ದೇನೆ. ಚಾಮುಂಡೇಶ್ವರಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿತ್ತು” ಎಂದಿದ್ದಾರೆ.

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. ಅದು ಆಗುತ್ತಿಲ್ಲ. ಪಕ್ಷದಲ್ಲಿ ಆಗುವುದೇ ಒಂದು, ಹೊರಗೆ ಹೇಳುವುದೇ ಒಂದು. ಇಂತಹ ದ್ವಂದ್ವವನ್ನು ಬಿಟ್ಟು ನೇರಾನೇರ ಹೇಳಿದರೆ ಒಳ್ಳೆಯದು. ಜೆಡಿಎಸ್ ಪಕ್ಷದಲ್ಲಿ ಗೋಪಾಲಯ್ಯ, ನಾನು ಮತ್ತು ರಾಜಣ್ಣ ಅವರನ್ನು ಬಿಟ್ಟರೆ ಬೇರೆ ಯಾರೂ ಕೂಡ ನೇರವಾಗಿ ಮಾತನಾಡುತ್ತಿರಲಿಲ್ಲ ಎಂಬುದನ್ನು ಸ್ಮರಿಸಿದರು.

ಕೃಷಿ ಸಂಬಂಧಿ ನೂತನ ಮೂರು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ದಲ್ಲಿ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಕೃಷಿ ಮಸೂದೆಯ ಪರವಾಗಿ ಜೆಡಿಎಸ್ ಮತ ಚಲಾಯಿಸಿದ್ದಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ ಬೇಸರಗೊಂಡಿದ್ದಾರೆ. ಅದೇ ಕಾರಣಕ್ಕೆ ಜೆಡಿಎಸ್ ತೆಗೆದುಕೊಳ್ಳುವ ತೀರ್ಮಾನಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್ ಹೇಳಿದಂತೆ “ನಾನು ಮಾನಸಿಕವಾಗಿ ರಾಜಕೀಯ ಮಾಡುತ್ತಿಲ್ಲ. ದೈಹಿಕವಾಗಿ ಮಾತ್ರ ರಾಜಕಾರಣದಲ್ಲಿದ್ದೇನೆ” ಎಂದು ಹೇಳಿರುವುದು ಮೇಲಿನ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯ ಸೋಲಿನ ಒಳ ಒಪ್ಪಂದದ ಬಗ್ಗೆ ಮಾತ್ರ ಮಾತನಾಡುತ್ತಿದ್ದೀರಾ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿನ ಒಳ ಒಪ್ಪಂದದ ಕುರಿತು ಹೇಳಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀನಿವಾಸ್, “ಎಚ್.ಡಿ.ದೇವೇಗೌಡರು ಯಾರೋ ಒಬ್ಬ ಮುಖಂಡರನ್ನು ನಂಬಿಕೊಂಡಿದ್ದರು. ಅತಿಯಾದ ನಂಬಿಕೆ ಮತ್ತು ಭರವಸೆ ಅವರ ಸೋಲಿಗೆ ಕಾರಣ. ನಮ್ಮ ಮಾತನ್ನು ಕೇಳಿದ್ದರೆ ದೇವೇಗೌಡರು ಗೆಲ್ಲುತ್ತಿದ್ದರು. ಆ ಮುಖಂಡರು ದೇವೇಗೌಡರು ಸೋಲಲು ಕಾರಣ. ಒಳಗೊಂದು, ಹೊರಗೊಂದು ಮಾತನಾಡುವುದು ಸರಿಯಲ್ಲ. ಕುಮಾರಸ್ವಾಮಿ ಏಕೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಮುಖಂಡರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ಎರಡೂವರೆ ವರ್ಷ ಸರ್ಕಾರ ಬೀಳುವುದಿಲ್ಲ. ನಾನು ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ. ನನಗೆ ಬಿಜೆಪಿ ಮೇಲೆ ಪ್ರೀತಿಯೂ ಇಲ್ಲ, ಒಲವೂ ಇಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಇಚ್ಚೆ ನನಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಟರು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಗೆ ತೀವ್ರ ಅಸಮಾಧಾನ ಹೊರಹಾಕಿದರು.

ಮುಂದಿನ ತೀರ್ಮಾನದ ಕುರಿತು ಈಗಲೇ ಏನೂ ಹೇಳಲಾಗುವುದಿಲ್ಲ. ಕಾರ್ಯಕರ್ತರನ್ನು ಕರೆದು ಚರ್ಚೆ ನಡೆಸಬೇಕು. ಪ್ರತಿಯೊಂದು ಪಕ್ಷದಲ್ಲೂ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಪದ್ದತಿ ಇದೆ. ಅದನ್ನು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದರು.

ಕೆ.ಎನ್. ರಾಜಣ್ಣ ಮತ್ತು ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ ನಾವು ಸ್ನೇಹಿತರು. ನನ್ನ ಗೆಲುವಿನಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜಣ್ಣ ನನಗೆ ಗಾಡ್ ಫಾದರ್. ಮನೆಗೆ ಬರುವಂತೆ ಕರೆ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ಬಂದಿದ್ದೇನೆ. ಮುಂದಿನ ಹೆಜ್ಞೆಗಳ ಕುರಿತು ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ.  ಗುಬ್ಬಿಯ ಕೆಲ ಜೆಡಿಎಸ್ ಮುಖಂಡರು ಪಕ್ಷದಲ್ಲಿದ್ದುಕೊಂಡೇ ನನ್ನ ವಿರುದ್ದವಾಗಿ ಕೆಲಸ ಮಾಡಿದರು. ನನ್ನನ್ನೂ ಸೋಲಿಸುವ ಯತ್ನ ನಡೆಯಿತು. ಆದರೂ ಮತದಾರರು ಗೆಲ್ಲಿಸಿದರು ಎಂದು ಹೇಳಿದರು.

ಮಾಜಿ ಶಾಸಕರ ಮನೆಯಲ್ಲಿ ಶ್ರೀನಿವಾಸ್ ಕಾಣಿಸಿಕೊಂಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಜೆಡಿಎಸ್ ನಾಯಕರ ನಡವಳಿಗಳ ಬಗ್ಗೆ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದು, ಅವರು ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ತೀರ್ಮಾನಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಪಕ್ಷದಿಂದ ಹೆಜ್ಜೆಯನ್ನು ಹೊರಗೆ ಇಟ್ಟಿರುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...