Homeಕರ್ನಾಟಕಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. - ಎಸ್.ಆರ್.ಶ್ರೀನಿವಾಸ್

- Advertisement -
- Advertisement -

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್, ಗುಬ್ಬಿಯಲ್ಲಿ ಡಿಸೆಂಬರ್ 19ರಂದು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಇಂದು ಪುನರುಚ್ಚರಿಸಿದರು. “ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಿದ್ದೇನೆ. ಚಾಮುಂಡೇಶ್ವರಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿತ್ತು” ಎಂದಿದ್ದಾರೆ.

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. ಅದು ಆಗುತ್ತಿಲ್ಲ. ಪಕ್ಷದಲ್ಲಿ ಆಗುವುದೇ ಒಂದು, ಹೊರಗೆ ಹೇಳುವುದೇ ಒಂದು. ಇಂತಹ ದ್ವಂದ್ವವನ್ನು ಬಿಟ್ಟು ನೇರಾನೇರ ಹೇಳಿದರೆ ಒಳ್ಳೆಯದು. ಜೆಡಿಎಸ್ ಪಕ್ಷದಲ್ಲಿ ಗೋಪಾಲಯ್ಯ, ನಾನು ಮತ್ತು ರಾಜಣ್ಣ ಅವರನ್ನು ಬಿಟ್ಟರೆ ಬೇರೆ ಯಾರೂ ಕೂಡ ನೇರವಾಗಿ ಮಾತನಾಡುತ್ತಿರಲಿಲ್ಲ ಎಂಬುದನ್ನು ಸ್ಮರಿಸಿದರು.

ಕೃಷಿ ಸಂಬಂಧಿ ನೂತನ ಮೂರು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ದಲ್ಲಿ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಕೃಷಿ ಮಸೂದೆಯ ಪರವಾಗಿ ಜೆಡಿಎಸ್ ಮತ ಚಲಾಯಿಸಿದ್ದಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ ಬೇಸರಗೊಂಡಿದ್ದಾರೆ. ಅದೇ ಕಾರಣಕ್ಕೆ ಜೆಡಿಎಸ್ ತೆಗೆದುಕೊಳ್ಳುವ ತೀರ್ಮಾನಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್ ಹೇಳಿದಂತೆ “ನಾನು ಮಾನಸಿಕವಾಗಿ ರಾಜಕೀಯ ಮಾಡುತ್ತಿಲ್ಲ. ದೈಹಿಕವಾಗಿ ಮಾತ್ರ ರಾಜಕಾರಣದಲ್ಲಿದ್ದೇನೆ” ಎಂದು ಹೇಳಿರುವುದು ಮೇಲಿನ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯ ಸೋಲಿನ ಒಳ ಒಪ್ಪಂದದ ಬಗ್ಗೆ ಮಾತ್ರ ಮಾತನಾಡುತ್ತಿದ್ದೀರಾ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿನ ಒಳ ಒಪ್ಪಂದದ ಕುರಿತು ಹೇಳಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀನಿವಾಸ್, “ಎಚ್.ಡಿ.ದೇವೇಗೌಡರು ಯಾರೋ ಒಬ್ಬ ಮುಖಂಡರನ್ನು ನಂಬಿಕೊಂಡಿದ್ದರು. ಅತಿಯಾದ ನಂಬಿಕೆ ಮತ್ತು ಭರವಸೆ ಅವರ ಸೋಲಿಗೆ ಕಾರಣ. ನಮ್ಮ ಮಾತನ್ನು ಕೇಳಿದ್ದರೆ ದೇವೇಗೌಡರು ಗೆಲ್ಲುತ್ತಿದ್ದರು. ಆ ಮುಖಂಡರು ದೇವೇಗೌಡರು ಸೋಲಲು ಕಾರಣ. ಒಳಗೊಂದು, ಹೊರಗೊಂದು ಮಾತನಾಡುವುದು ಸರಿಯಲ್ಲ. ಕುಮಾರಸ್ವಾಮಿ ಏಕೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಮುಖಂಡರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ಎರಡೂವರೆ ವರ್ಷ ಸರ್ಕಾರ ಬೀಳುವುದಿಲ್ಲ. ನಾನು ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ. ನನಗೆ ಬಿಜೆಪಿ ಮೇಲೆ ಪ್ರೀತಿಯೂ ಇಲ್ಲ, ಒಲವೂ ಇಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಇಚ್ಚೆ ನನಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಟರು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಗೆ ತೀವ್ರ ಅಸಮಾಧಾನ ಹೊರಹಾಕಿದರು.

ಮುಂದಿನ ತೀರ್ಮಾನದ ಕುರಿತು ಈಗಲೇ ಏನೂ ಹೇಳಲಾಗುವುದಿಲ್ಲ. ಕಾರ್ಯಕರ್ತರನ್ನು ಕರೆದು ಚರ್ಚೆ ನಡೆಸಬೇಕು. ಪ್ರತಿಯೊಂದು ಪಕ್ಷದಲ್ಲೂ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಪದ್ದತಿ ಇದೆ. ಅದನ್ನು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದರು.

ಕೆ.ಎನ್. ರಾಜಣ್ಣ ಮತ್ತು ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ ನಾವು ಸ್ನೇಹಿತರು. ನನ್ನ ಗೆಲುವಿನಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜಣ್ಣ ನನಗೆ ಗಾಡ್ ಫಾದರ್. ಮನೆಗೆ ಬರುವಂತೆ ಕರೆ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ಬಂದಿದ್ದೇನೆ. ಮುಂದಿನ ಹೆಜ್ಞೆಗಳ ಕುರಿತು ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ.  ಗುಬ್ಬಿಯ ಕೆಲ ಜೆಡಿಎಸ್ ಮುಖಂಡರು ಪಕ್ಷದಲ್ಲಿದ್ದುಕೊಂಡೇ ನನ್ನ ವಿರುದ್ದವಾಗಿ ಕೆಲಸ ಮಾಡಿದರು. ನನ್ನನ್ನೂ ಸೋಲಿಸುವ ಯತ್ನ ನಡೆಯಿತು. ಆದರೂ ಮತದಾರರು ಗೆಲ್ಲಿಸಿದರು ಎಂದು ಹೇಳಿದರು.

ಮಾಜಿ ಶಾಸಕರ ಮನೆಯಲ್ಲಿ ಶ್ರೀನಿವಾಸ್ ಕಾಣಿಸಿಕೊಂಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಜೆಡಿಎಸ್ ನಾಯಕರ ನಡವಳಿಗಳ ಬಗ್ಗೆ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದು, ಅವರು ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ತೀರ್ಮಾನಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಪಕ್ಷದಿಂದ ಹೆಜ್ಜೆಯನ್ನು ಹೊರಗೆ ಇಟ್ಟಿರುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...