Homeಕರ್ನಾಟಕಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. - ಎಸ್.ಆರ್.ಶ್ರೀನಿವಾಸ್

- Advertisement -
- Advertisement -

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್, ಗುಬ್ಬಿಯಲ್ಲಿ ಡಿಸೆಂಬರ್ 19ರಂದು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಇಂದು ಪುನರುಚ್ಚರಿಸಿದರು. “ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಿದ್ದೇನೆ. ಚಾಮುಂಡೇಶ್ವರಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿತ್ತು” ಎಂದಿದ್ದಾರೆ.

ನಾನು ನೇರವಾಗಿ ಮಾತನಾಡುವ ಮನುಷ್ಯ. ಸಿದ್ದರಾಮಣ್ಣ ಅವರನ್ನು ಸೋಲಿಸಲು ಒಳ ಒಪ್ಪಂದ ಅಗಿದ್ದು ಸತ್ಯ. ಒಳಗೊಂದು ಹೊರಗೊಂದು ಮಾತನಾಡುವುದು ಬಿಟ್ಟು ನೇರವಾಗಿ ಹೇಳಬೇಕು. ಅದು ಆಗುತ್ತಿಲ್ಲ. ಪಕ್ಷದಲ್ಲಿ ಆಗುವುದೇ ಒಂದು, ಹೊರಗೆ ಹೇಳುವುದೇ ಒಂದು. ಇಂತಹ ದ್ವಂದ್ವವನ್ನು ಬಿಟ್ಟು ನೇರಾನೇರ ಹೇಳಿದರೆ ಒಳ್ಳೆಯದು. ಜೆಡಿಎಸ್ ಪಕ್ಷದಲ್ಲಿ ಗೋಪಾಲಯ್ಯ, ನಾನು ಮತ್ತು ರಾಜಣ್ಣ ಅವರನ್ನು ಬಿಟ್ಟರೆ ಬೇರೆ ಯಾರೂ ಕೂಡ ನೇರವಾಗಿ ಮಾತನಾಡುತ್ತಿರಲಿಲ್ಲ ಎಂಬುದನ್ನು ಸ್ಮರಿಸಿದರು.

ಕೃಷಿ ಸಂಬಂಧಿ ನೂತನ ಮೂರು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ದಲ್ಲಿ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆಗಳಿಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಕೃಷಿ ಮಸೂದೆಯ ಪರವಾಗಿ ಜೆಡಿಎಸ್ ಮತ ಚಲಾಯಿಸಿದ್ದಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ ಬೇಸರಗೊಂಡಿದ್ದಾರೆ. ಅದೇ ಕಾರಣಕ್ಕೆ ಜೆಡಿಎಸ್ ತೆಗೆದುಕೊಳ್ಳುವ ತೀರ್ಮಾನಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್ ಹೇಳಿದಂತೆ “ನಾನು ಮಾನಸಿಕವಾಗಿ ರಾಜಕೀಯ ಮಾಡುತ್ತಿಲ್ಲ. ದೈಹಿಕವಾಗಿ ಮಾತ್ರ ರಾಜಕಾರಣದಲ್ಲಿದ್ದೇನೆ” ಎಂದು ಹೇಳಿರುವುದು ಮೇಲಿನ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.

ಸಿದ್ದರಾಮಯ್ಯ ಸೋಲಿನ ಒಳ ಒಪ್ಪಂದದ ಬಗ್ಗೆ ಮಾತ್ರ ಮಾತನಾಡುತ್ತಿದ್ದೀರಾ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿನ ಒಳ ಒಪ್ಪಂದದ ಕುರಿತು ಹೇಳಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀನಿವಾಸ್, “ಎಚ್.ಡಿ.ದೇವೇಗೌಡರು ಯಾರೋ ಒಬ್ಬ ಮುಖಂಡರನ್ನು ನಂಬಿಕೊಂಡಿದ್ದರು. ಅತಿಯಾದ ನಂಬಿಕೆ ಮತ್ತು ಭರವಸೆ ಅವರ ಸೋಲಿಗೆ ಕಾರಣ. ನಮ್ಮ ಮಾತನ್ನು ಕೇಳಿದ್ದರೆ ದೇವೇಗೌಡರು ಗೆಲ್ಲುತ್ತಿದ್ದರು. ಆ ಮುಖಂಡರು ದೇವೇಗೌಡರು ಸೋಲಲು ಕಾರಣ. ಒಳಗೊಂದು, ಹೊರಗೊಂದು ಮಾತನಾಡುವುದು ಸರಿಯಲ್ಲ. ಕುಮಾರಸ್ವಾಮಿ ಏಕೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಮುಖಂಡರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ಎರಡೂವರೆ ವರ್ಷ ಸರ್ಕಾರ ಬೀಳುವುದಿಲ್ಲ. ನಾನು ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ. ನನಗೆ ಬಿಜೆಪಿ ಮೇಲೆ ಪ್ರೀತಿಯೂ ಇಲ್ಲ, ಒಲವೂ ಇಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಇಚ್ಚೆ ನನಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಟರು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಗೆ ತೀವ್ರ ಅಸಮಾಧಾನ ಹೊರಹಾಕಿದರು.

ಮುಂದಿನ ತೀರ್ಮಾನದ ಕುರಿತು ಈಗಲೇ ಏನೂ ಹೇಳಲಾಗುವುದಿಲ್ಲ. ಕಾರ್ಯಕರ್ತರನ್ನು ಕರೆದು ಚರ್ಚೆ ನಡೆಸಬೇಕು. ಪ್ರತಿಯೊಂದು ಪಕ್ಷದಲ್ಲೂ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಪದ್ದತಿ ಇದೆ. ಅದನ್ನು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದರು.

ಕೆ.ಎನ್. ರಾಜಣ್ಣ ಮತ್ತು ನಾನು ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ ನಾವು ಸ್ನೇಹಿತರು. ನನ್ನ ಗೆಲುವಿನಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜಣ್ಣ ನನಗೆ ಗಾಡ್ ಫಾದರ್. ಮನೆಗೆ ಬರುವಂತೆ ಕರೆ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ಬಂದಿದ್ದೇನೆ. ಮುಂದಿನ ಹೆಜ್ಞೆಗಳ ಕುರಿತು ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ.  ಗುಬ್ಬಿಯ ಕೆಲ ಜೆಡಿಎಸ್ ಮುಖಂಡರು ಪಕ್ಷದಲ್ಲಿದ್ದುಕೊಂಡೇ ನನ್ನ ವಿರುದ್ದವಾಗಿ ಕೆಲಸ ಮಾಡಿದರು. ನನ್ನನ್ನೂ ಸೋಲಿಸುವ ಯತ್ನ ನಡೆಯಿತು. ಆದರೂ ಮತದಾರರು ಗೆಲ್ಲಿಸಿದರು ಎಂದು ಹೇಳಿದರು.

ಮಾಜಿ ಶಾಸಕರ ಮನೆಯಲ್ಲಿ ಶ್ರೀನಿವಾಸ್ ಕಾಣಿಸಿಕೊಂಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಜೆಡಿಎಸ್ ನಾಯಕರ ನಡವಳಿಗಳ ಬಗ್ಗೆ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದು, ಅವರು ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ತೀರ್ಮಾನಗಳಿಂದ ದೂರ ಉಳಿದಿದ್ದೇನೆ ಎಂದು ಹೇಳುವ ಮೂಲಕ ಪಕ್ಷದಿಂದ ಹೆಜ್ಜೆಯನ್ನು ಹೊರಗೆ ಇಟ್ಟಿರುವ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...