Homeಚಳವಳಿವಂಚಿತರ ಪಾಲಿಗೆ ಮುಚ್ಚತೊಡಗಿದೆ ಜೆ.ಎನ್.ಯು ಬಾಗಿಲು : ಡಿ. ಉಮಾಪತಿ

ವಂಚಿತರ ಪಾಲಿಗೆ ಮುಚ್ಚತೊಡಗಿದೆ ಜೆ.ಎನ್.ಯು ಬಾಗಿಲು : ಡಿ. ಉಮಾಪತಿ

ಏಕಲವ್ಯ-ದ್ರೋಣ-ಅರ್ಜುನ ಮತ್ತು ಶಂಬೂಕ-ಬ್ರಾಹ್ಮಣ-ಶ್ರೀರಾಮನ ಕ್ರೂರ ಕಥನಗಳು ಆಧುನಿಕ ಭಾರತದಲ್ಲಿ ಬಗೆ ಬಗೆಯ ಹೊಸ ವೇಷಗಳನ್ನು ಧರಿಸಿ ಪುನರಾವರ್ತನೆ ಆಗುತ್ತಿವೆ. ಅಕ್ಷರವಂಚನೆಯ ಮೋಸ ಹತ್ತಾರು ರೂಪಗಳಲ್ಲಿ ಮುಂದುವರೆದಿದೆ.

- Advertisement -
- Advertisement -

ವ್ಯವಸ್ಥೆಯ ಅಂಚಿನಲ್ಲಿ ಉಸಿರು ಬಿಗಿಹಿಡಿದು ಬದುಕಿರುವ ನಿರ್ಗತಿಕ ಮತ್ತು ವಂಚಿತ ಸಮುದಾಯಗಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ, ಮೇಲ್ವರ್ಗ-ಮೇಲ್ಜಾತಿಗಳು ಸಾವಿರಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿರುವ ಯಥಾಸ್ಥಿತಿಯ ಅಡಿಪಾಯ ಅಲ್ಲಾಡತೊಡಗುತ್ತದೆ.

ಯಾಕೆಂದರೆ ಮಾತು ಸತ್ತ ಸಮುದಾಯಗಳಿಗೆ ಪದಸಂಪತ್ತು ಸಿಗುತ್ತದೆ, ಮಾತಾಡುವ ಆತ್ಮವಿಶ್ವಾಸ ಮೂಡುತ್ತದೆ.

ಸಮಾನ ಕಲಿಕೆಯ ಹಕ್ಕಿನ ಈ ಹೋರಾಟ ಇಂದು ನಿನ್ನೆಯದಲ್ಲ. ಸ್ವಂತ ಸಾಧನೆಯಿಂದಲೇ ಅರಿವನ್ನು ತನ್ನದಾಗಿಸಿಕೊಂಡ ಶೂದ್ರ ಏಕಲವ್ಯನನ್ನು ಜಾತಿ-ವರ್ಣ ವ್ಯವಸ್ಥೆ ವಂಚಿಸಿ ಸೋಲಿಸಿತು. ತಪಸ್ಸನ್ನು ಆಚರಿಸಲು ಮುಂದಾದ ಶಂಬೂಕನ ತಲೆದಂಡವನ್ನೇ ಪಡೆದು ಇತರೆ ಶೂದ್ರರು-ಅಸ್ಪೃಶ್ಯರು ತಲೆಯೆತ್ತದಂತೆ ಕ್ರೂರ ಶಿಕ್ಷೆ ವಿಧಿಸಿತ್ತು.

ಈ ಏಕಲವ್ಯ-ದ್ರೋಣ-ಅರ್ಜುನ ಮತ್ತು ಶಂಬೂಕ-ಬ್ರಾಹ್ಮಣ-ಶ್ರೀರಾಮನ ಕ್ರೂರ ಕಥನಗಳು ಆಧುನಿಕ ಭಾರತದಲ್ಲಿ ಬಗೆಬಗೆಯ ಹೊಸ ವೇಷಗಳನ್ನು ಧರಿಸಿ ಪುನರಾವರ್ತನೆ ಆಗುತ್ತಿವೆ. ಅಕ್ಷರವಂಚನೆಯ ಮೋಸ ಹತ್ತಾರು ರೂಪಗಳಲ್ಲಿ ಮುಂದುವರೆದಿದೆ.

ಹಣವಂತರು ವರ್ಷಕ್ಕೆ 10-15 ಲಕ್ಷ ತೆತ್ತು ಖಾಸಗಿ ಕಾಲೇಜುಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿದ್ದಾರೆ. ಇಲ್ಲದವರ ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಬಿಸಿಲುಗುದುರೆ ಆಗತೊಡಗಿದೆ.

2016-17ರಲ್ಲಿ ಅಮೆರಿಕೆಯಲ್ಲಿನ ಭಾರತೀಯ ವಿದ್ಯಾರ್ಥಿಗಳು 42,835 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದರು. 2015-16ರಲ್ಲಿ ಮಾಡಿದ್ದ ವೆಚ್ಚಕ್ಕಿಂತ ಶೇ.30ರಷ್ಟು ಹೆಚ್ಚು ಇದು.

ಭಾರತದ ಉನ್ನತ ಶಿಕ್ಷಣದ ಪೂರ್ಣ ಬಜೆಟ್ ಈ ವರ್ಷ 35 ಸಾವಿರ ಕೋಟಿ ರುಪಾಯಿ. ಈ ಬಜೆಟ್ಟಿನ ಒಂದೂವರೆ ಪಟ್ಟು ಹಣವನ್ನು ಭಾರತದ ವಿದ್ಯಾರ್ಥಿಗಳು ಅಮೆರಿಕೆಯಲ್ಲಿ ಹೂಡುತ್ತಿದ್ದಾರೆ. ಹೀಗೆ ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುತ್ತಿರುವವರ ಸಂಖ್ಯೆ ಸುಮಾರು ಐದು ಲಕ್ಷ. ಭಾರತದ ಉನ್ನತ ಶಿಕ್ಷಣ ತಲುಪಿರುವ ಅಧೋಗತಿಯ ಸೂಚಕ ಇದು.

ದೆಹಲಿಯ ವಿಖ್ಯಾತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ‘ರಾಷ್ಟ್ರವಿರೋಧಿ’ ಹಣೆಪಟ್ಟಿ ಹಚ್ಚಿರುವ ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಿಂದ ಅಲ್ಲಿನ ವಿದ್ಯಾರ್ಥಿಗಳ ಪ್ರವೇಶಾವಕಾಶ ಮತ್ತು ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯವನ್ನು ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ತುಳಿದು ಹಾಕುತ್ತಿದೆ.. ದೇಶದ ಮೂಲೆಮೂಲೆಗಳಿಂದ ಇಲ್ಲಿಗೆ ಬರುವ ಬಡ ದಲಿತ-ಆದಿವಾಸಿ ಮಕ್ಕಳಿಗೆ ಜೆ.ಎನ್.ಯು ಬಾಗಿಲು ತೆರೆದಿರುತ್ತಿತ್ತು. ಅವರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿತ್ತು. ಈ ಅವಕಾಶಗಳು ಇದೀಗ ಬತ್ತತೊಡಗಿವೆ.

2017-18ರ ಎಂ.ಫಿಲ್ ಮತ್ತು ಪಿಎಚ್.ಡಿ. ಪ್ರವೇಶದ ಮೀಸಲಾತಿ ವಿವರಗಳು ಈ ಧೋರಣೆಗೆ ಹಿಡಿದ ಪುಟ್ಟ ಕನ್ನಡಿ. ಶೇ.15ರಷ್ಟು ಮೀಸಲಾತಿ ದೊರೆಯಬೇಕಿದ್ದ ಪರಿಶಿಷ್ಟ ಜಾತಿಗಳಿಗೆ ವಾಸ್ತವವಾಗಿ ದೊರೆತದ್ದು ಶೇ.1.3. ಶೇ.ಏಳೂವರೆಯ ಜಾಗದಲ್ಲಿ ಪರಿಶಿಷ್ಟ ಪಂಗಡಗಳಿಗೆ ಸಿಕ್ಕಿದ್ದು ಶೇ.0.6. ಶೇ.27ರಷ್ಟು ದೊರೆಯಬೇಕಿದ್ದ ಓ.ಬಿ.ಸಿ.ಗಳಿಗೆ ದಕ್ಕಿದ್ದು ಶೇ.8.2 ಮಾತ್ರ. ಸೀಟುಗಳ ಸಂಖ್ಯೆಯಲ್ಲಿ ಶೇ.83ರಷ್ಟು ಕಡಿತ ಮಾಡಲಾಗಿದೆ.

ಜೆ.ಎನ್.ಯು ವಿದ್ಯಾರ್ಥಿ ಸಂಘದ ಚುನಾವಣೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಕೂಡ ಬಹುತೇಕ ಅತ್ಯಂತ ತಳವರ್ಗಗಳಿಗೆ ಸೇರಿದವರು. ಕನ್ಹಯ್ಯ ಕುಮಾರ್ ಕೂಡ ಇಂತಹುದೇ ಹಿನ್ನೆಲೆಯಿಂದ ಬಂದಾತ. ಜೆ.ಎನ್.ಯು. ಇತಿಹಾಸದಲ್ಲಿ ಇಂತಹ ನಿದರ್ಶನಗಳು ಹೇರಳ.

29 ವರ್ಷ ವಯಸ್ಸಿನ ಜಿತೇಂದ್ರ ಸೂನ ಹತ್ತು ವರ್ಷಗಳ ಹಿಂದೆ ದಿಲ್ಲಿಯ ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ನಲ್ಲಿ ಗ್ಯಾಸ್ ಸ್ಟೌವ್‍ಗಳನ್ನು ರಿಪೇರಿ ಮಾಡುತ್ತಿದ್ದ. ರಸ್ತೆಯಡಿಗಳ ಪೈಪುಗಳು ಒಡೆದರೆ ಗುಂಡಿ ತೋಡುತ್ತಿದ್ದ. ಒಡಿಶಾದ ಕಾಳಹಂಡಿ ಜಿಲ್ಲೆಯ ಬಡ ತಂದೆತಾಯಿಗಳ ಮಗ. ಎಂಟನೆಯ ತರಗತಿಯಲ್ಲಿದ್ದಾಗ ತಾಯಿ ತೀರಿಹೋದಳು. ಇತರರ ಭತ್ತದ ಗದ್ದೆಗಳಲ್ಲಿ ಕೂಲಿ ಮಾಡಿ ದಿನಕ್ಕೆ 30-40 ರುಪಾಯಿ ಸಂಪಾದಿಸುತ್ತಿದ್ದ. ನರೇಗಾ ಯೋಜನೆಯಡಿ ಉದ್ಯೋಗ ಗಿಟ್ಟಿಸಿ ನೆಲ ಅಗೆದು ದಿನಕ್ಕೆ 100-150 ರುಪಾಯಿ ಕೂಲಿ ಗಳಿಸಿದ್ದ.

ಹೊಟ್ಟೆಪಾಡಿಗೆಂದು ದೆಹಲಿ ತಲುಪಿ ಕೂಲಿನಾಲಿ ಮಾಡುತ್ತಲೇ ಪದವಿ ಗಳಿಸಿದ. 2013ರಲ್ಲಿ ಜೆ.ಎನ್.ಯು ಪ್ರವೇಶ ಪರೀಕ್ಷೆ ಪಾಸು ಮಾಡಿದ. ಇದೀಗ ಪಿಎಚ್.ಡಿ. ಮಾಡುತ್ತಿರುವ ಆತ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹುದ್ದೆಗೆ ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘಟನೆಯಿಂದ (BAPSA) ಸ್ಪರ್ಧಿಸಿದ್ದ. ಬದುಕಿನೊಂದಿಗೆ ಹೋರಾಡಿ ಜೆ.ಎನ್.ಯು. ಪ್ರವೇಶಿಸಿ ಅಕ್ಷರಗಳನ್ನು ಎದೆಗಿಳಿಸಿಕೊಂಡ ಇಂತಹ ಸಾವಿರಾರು ಕತೆಗಳಿವೆ.

ಸಫಾಯಿ ಕರ್ಮಚಾರಿಗಳು, ಕೈಯಿಂದ ಮಾನವ ಮಲ ಬಳಿವವರು, ರಸ್ತೆ ಬದಿಯ ಸಣ್ಣಪುಟ್ಟ ವ್ಯಾಪಾರಿಗಳು, ಕೃಷಿ ಕೂಲಿಕಾರರು, ಅಂಗನವಾಡಿ ಅಮ್ಮಂದಿರ ಬಡಮಕ್ಕಳು ಕಲಿಯಲು ಇಲ್ಲಿಗೆ ಬರುತ್ತಾರೆ. ಮಾಸಿಕ ಆದಾಯ 6000 ರುಪಾಯಿಗಳು ಮತ್ತು ಅದಕ್ಕೂ ಕಮ್ಮಿ ಇರುವ ಆದಾಯವರ್ಗದ ಕುಟುಂಬಗಳಿಂದ ಬರುವ ಇಂತಹ ಮಕ್ಕಳ ಪ್ರಮಾಣ ಶೇ.43. ಮೊನ್ನೆ ಮೊನ್ನೆ ಹಾಸ್ಟೆಲ್ ಮತ್ತು ಕಲಿಕೆಯ ಶುಲ್ಕವನ್ನು ಜೆ.ಎನ್.ಯು ಆಡಳಿತವರ್ಗ ವಾರ್ಷಿಕ 30 ಸಾವಿರ ರುಪಾಯಿಗಳಿಂದ 60 ಸಾವಿರಕ್ಕೆ ಏರಿಸಿದೆ. ಪಾವತಿ ಮಾಡಲಾಗದಿದ್ದರೆ ಇಲ್ಲಿ ಓದುವುದನ್ನು ಬಿಟ್ಟು ಬೇರೆ ಹುಡುಕಿಕೊಳ್ಳಿ ಎಂದು ವಿಶ್ವವಿದ್ಯಾಲಯದ ಆಡಳಿತವರ್ಗ ವಿದ್ಯಾರ್ಥಿಗಳನ್ನು ಜಬರಿಸಿದೆ.

ಕಳೆದ ಐದು ವರ್ಷಗಳಲ್ಲಿ ಐದೂವರೆ ಲಕ್ಷ ಕೋಟಿ ರುಪಾಯಿಗಳಷ್ಟು ಕಾಪೆರ್Çರೇಟು ಸಾಲಗಳನ್ನು ಮನ್ನಾ ಮಾಡಲಾಗಿದೆ. ಸರ್ದಾರ್ ವಲ್ಲಭ ಭಾಯಿ ಪಟೇಲರ ಪ್ರತಿಮೆ ನಿಲ್ಲಿಸಲು 3000 ಕೋಟಿ ರುಪಾಯಿ ವ್ಯಯಿಸಲಾಗಿದೆ. ನೋಟು ರದ್ದು ಮಾಡಿ, ಹೊಸ ನೋಟು ಮುದ್ರಿಸಲು ಮಾಡಲಾದ ವೆಚ್ಚ 13 ಸಾವಿರ ಕೋಟಿ ರುಪಾಯಿಗಳು. ಆಳುವ ಪಕ್ಷದ ಜಾಹೀರಾತುಗಳಿಗೆ ಸಾವಿರಾರು ಕೋಟಿ ರುಪಾಯಿ ಖರ್ಚು ಮಾಡಲಾಗಿದೆ. ಆದರೆ ನಿರ್ಗತಿಕರು ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳ ಪಾಲಿನ ಏಕೈಕ ಅಕ್ಷರಲೋಕ ಜೆ.ಎನ್.ಯು ಬಾಗಿಲನ್ನು ಶುಲ್ಕ ಏರಿಸಿ ಈ ವರ್ಗಗಳಿಗೆ ಮುಚ್ಚಲಾಗುತ್ತಿದೆ.

ಪ್ರತಿಭಟನೆಗೆ ಇಳಿದಿರುವ ವಿದ್ಯಾರ್ಥಿ ಸಮುದಾಯದ ವಿರುದ್ಧ ದಮನಕಾರಿ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಮೊನ್ನೆ ವಕೀಲರ ಜೊತೆಗಿನ ಘರ್ಷಣೆಗಳಲ್ಲಿ ಕುರಿಮರಿಗಳಂತೆ ವರ್ತಿಸಿದ್ದ ದೆಹಲಿ ಪೆÇಲೀಸರು, ಇದೀಗ ಬಡ ವಿದ್ಯಾರ್ಥಿಗಳ ಬುರುಡೆ ಬಿಚ್ಚುತ್ತಿದ್ದಾರೆ.

ಇದೇ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯವೇ ಸ್ಥಾಪಿಸಿದ ವ್ಯವಸ್ಥೆ (National Institutions Ranking Framework) ದೇಶದಲ್ಲೇ ಮೊದಲ ರ್ಯಾಂಕ್ ನೀಡಿತ್ತು. ವಿಶ್ವವಿದ್ಯಾಲಯವೊಂದು ಏಕಕಾಲಕ್ಕೆ ರಾಷ್ಟ್ರವಿರೋಧಿ ಎನಿಸಿಕೊಳ್ಳುವುದು ಮತ್ತು ಅದೇ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದಿಂದ ದೇಶದಲ್ಲಿ ಮೊದಲ ರ್ಯಾಂಕ್ ಪಡೆಯುವುದು ದೊಡ್ಡ ಸೋಜಿಗವೇ ಸರಿ!

ಇದನ್ನು ಓದಿ : JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ಭಿನ್ನಾಭಿಪ್ರಾಯಗಳನ್ನು ತುಳಿಯಲಾಗುತ್ತಿದೆ. ಭಿನ್ನಮತ ಪ್ರದರ್ಶಿಸುವ ವಿದ್ಯಾರ್ಥಿಗಳನ್ನು ದುಬಾರಿ ದಂಡ ಶುಲ್ಕಗಳಿಂದ ದಂಡಿಸಲಾಗುತ್ತಿದೆ. ವಿದ್ಯಾರ್ಥಿಗಳ ಕೈಗೆಟುಕುವ ದರಗಳಲ್ಲಿ ವ್ಯವಹರಿಸುವ ಧಾಬಾಗಳನ್ನು ಮುಚ್ಚಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ರಾತ್ರಿ 11.30ರ ನಂತರ ಕ್ಯಾಂಪಸಿನಲ್ಲಿ ಕಫ್ರ್ಯೂ ವಿಧಿಸಲಾಗಿದೆ. ರಾತ್ರಿಯೆಲ್ಲ ತೆರೆದಿರುತ್ತಿದ್ದ ಗ್ರಂಥಾಲಯವನ್ನು ಮುಚ್ಚಲಾಗುತ್ತಿದೆ.

ಸಾಮಾಜಿಕವಾಗಿ ಎಲ್ಲರನ್ನೂ ಒಳಗೊಳ್ಳುವ, ಜನತಾಂತ್ರಿಕ, ಪ್ರಗತಿಪರ ಹಾಗೂ ಜಾತ್ಯತೀತ ಗುಣಗಳನ್ನು, ವೈಚಾರಿಕ ಸ್ವಾತಂತ್ರ್ಯ ಮತ್ತು ಮುಕ್ತಚಿಂತನೆಯ ಮೌಲ್ಯಗಳು ಜೆ.ಎನ್.ಯುವಿನ ಆತ್ಮ. ಈ ಆತ್ಮವನ್ನೇ ನಾಶ ಮಾಡಲಾಗುತ್ತಿದೆ. ಶಿಕ್ಷಣವನ್ನು ಖಾಸಗೀಕರಿಸಿ ವ್ಯಾಪಾರದ ಸರಕನ್ನಾಗಿಸುವ, ಉಳ್ಳವರ ಏಕಸ್ವಾಮ್ಯ ಆಗಿಸುವ ಹುನ್ನಾರ ಜಾರಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ವರ್ಚಸ್ ಆರೆಸಸ್ ಕೇಂದ್ರ ಸರ್ಕಾರದ ದೂರ್ ನಡಿಯ ದುರ್ನಡತೆ ನನ್ನ ಧಿಕ್ಕಾರ
    ಕಾಂಗ್ರೆಸ್ ಒಂದುರೀತಿ ಅನ್ಯಾಯ ಮಾಡಿದ್ದಾದರೆ ಅವರು 70 ವರ್ಷ ಆಡಳಿತ ಅವಧಿಯಲ್ಲಿ ಹಂತಹಂತವಾಗಿ ತಳ ವರ್ಗದವರಿಗೆ ಅನ್ಯಾಯ ಮಾಡುತ್ತಲೇ ಮುಂದಿರುತ್ತಾರೆ
    ಬಿಜೆಪಿ ಆರನೇ ವರ್ಷ ರನ್ನಿಂಗ್ ಇದೆ ನಿರ್ಗತಿಕರಿಗೆ ಕಾರ್ಮಿಕ ವರ್ಗದವರಿಗೆ ತಿನ್ನಲು ಊಟವೇ ಇಲ್ಲದ ಕಡುಬಡತನ ಹೇರಲಾಗಿದೆ ಇನ್ನು 70ವರ್ಷ ಕಾಂಗ್ರೆಸ್ ಸರ್ಕಾರದ ಅವಧಿ ಬಿಜೆಪಿಗೆ ಸಿಕ್ಕರೆ ಭಾರತದೇಶವೇ ಸಂಪೂರ್ಣ ಮನುವಾದಿಗಳು ವರ್ಚಸ್ ಶೂದ್ರರು ಹೊಡೆದಾಡುವುದು ರಲ್ಲಿ ಮುಲಾಜಿಲ್ಲದೆ ನಡೆಯಬೇಕಾಗುತ್ತದೆ ಮೋದಿಯಂತಹ ದುರ್ದೈವ ಪ್ರಧಾನಿ ಎಂದರೆ ಮತ್ತೊಬ್ಬನಿಲ್ಲ
    ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...