Homeಚಳವಳಿವಂಚಿತರ ಪಾಲಿಗೆ ಮುಚ್ಚತೊಡಗಿದೆ ಜೆ.ಎನ್.ಯು ಬಾಗಿಲು : ಡಿ. ಉಮಾಪತಿ

ವಂಚಿತರ ಪಾಲಿಗೆ ಮುಚ್ಚತೊಡಗಿದೆ ಜೆ.ಎನ್.ಯು ಬಾಗಿಲು : ಡಿ. ಉಮಾಪತಿ

ಏಕಲವ್ಯ-ದ್ರೋಣ-ಅರ್ಜುನ ಮತ್ತು ಶಂಬೂಕ-ಬ್ರಾಹ್ಮಣ-ಶ್ರೀರಾಮನ ಕ್ರೂರ ಕಥನಗಳು ಆಧುನಿಕ ಭಾರತದಲ್ಲಿ ಬಗೆ ಬಗೆಯ ಹೊಸ ವೇಷಗಳನ್ನು ಧರಿಸಿ ಪುನರಾವರ್ತನೆ ಆಗುತ್ತಿವೆ. ಅಕ್ಷರವಂಚನೆಯ ಮೋಸ ಹತ್ತಾರು ರೂಪಗಳಲ್ಲಿ ಮುಂದುವರೆದಿದೆ.

- Advertisement -
- Advertisement -

ವ್ಯವಸ್ಥೆಯ ಅಂಚಿನಲ್ಲಿ ಉಸಿರು ಬಿಗಿಹಿಡಿದು ಬದುಕಿರುವ ನಿರ್ಗತಿಕ ಮತ್ತು ವಂಚಿತ ಸಮುದಾಯಗಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ, ಮೇಲ್ವರ್ಗ-ಮೇಲ್ಜಾತಿಗಳು ಸಾವಿರಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿರುವ ಯಥಾಸ್ಥಿತಿಯ ಅಡಿಪಾಯ ಅಲ್ಲಾಡತೊಡಗುತ್ತದೆ.

ಯಾಕೆಂದರೆ ಮಾತು ಸತ್ತ ಸಮುದಾಯಗಳಿಗೆ ಪದಸಂಪತ್ತು ಸಿಗುತ್ತದೆ, ಮಾತಾಡುವ ಆತ್ಮವಿಶ್ವಾಸ ಮೂಡುತ್ತದೆ.

ಸಮಾನ ಕಲಿಕೆಯ ಹಕ್ಕಿನ ಈ ಹೋರಾಟ ಇಂದು ನಿನ್ನೆಯದಲ್ಲ. ಸ್ವಂತ ಸಾಧನೆಯಿಂದಲೇ ಅರಿವನ್ನು ತನ್ನದಾಗಿಸಿಕೊಂಡ ಶೂದ್ರ ಏಕಲವ್ಯನನ್ನು ಜಾತಿ-ವರ್ಣ ವ್ಯವಸ್ಥೆ ವಂಚಿಸಿ ಸೋಲಿಸಿತು. ತಪಸ್ಸನ್ನು ಆಚರಿಸಲು ಮುಂದಾದ ಶಂಬೂಕನ ತಲೆದಂಡವನ್ನೇ ಪಡೆದು ಇತರೆ ಶೂದ್ರರು-ಅಸ್ಪೃಶ್ಯರು ತಲೆಯೆತ್ತದಂತೆ ಕ್ರೂರ ಶಿಕ್ಷೆ ವಿಧಿಸಿತ್ತು.

ಈ ಏಕಲವ್ಯ-ದ್ರೋಣ-ಅರ್ಜುನ ಮತ್ತು ಶಂಬೂಕ-ಬ್ರಾಹ್ಮಣ-ಶ್ರೀರಾಮನ ಕ್ರೂರ ಕಥನಗಳು ಆಧುನಿಕ ಭಾರತದಲ್ಲಿ ಬಗೆಬಗೆಯ ಹೊಸ ವೇಷಗಳನ್ನು ಧರಿಸಿ ಪುನರಾವರ್ತನೆ ಆಗುತ್ತಿವೆ. ಅಕ್ಷರವಂಚನೆಯ ಮೋಸ ಹತ್ತಾರು ರೂಪಗಳಲ್ಲಿ ಮುಂದುವರೆದಿದೆ.

ಹಣವಂತರು ವರ್ಷಕ್ಕೆ 10-15 ಲಕ್ಷ ತೆತ್ತು ಖಾಸಗಿ ಕಾಲೇಜುಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿದ್ದಾರೆ. ಇಲ್ಲದವರ ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಬಿಸಿಲುಗುದುರೆ ಆಗತೊಡಗಿದೆ.

2016-17ರಲ್ಲಿ ಅಮೆರಿಕೆಯಲ್ಲಿನ ಭಾರತೀಯ ವಿದ್ಯಾರ್ಥಿಗಳು 42,835 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದರು. 2015-16ರಲ್ಲಿ ಮಾಡಿದ್ದ ವೆಚ್ಚಕ್ಕಿಂತ ಶೇ.30ರಷ್ಟು ಹೆಚ್ಚು ಇದು.

ಭಾರತದ ಉನ್ನತ ಶಿಕ್ಷಣದ ಪೂರ್ಣ ಬಜೆಟ್ ಈ ವರ್ಷ 35 ಸಾವಿರ ಕೋಟಿ ರುಪಾಯಿ. ಈ ಬಜೆಟ್ಟಿನ ಒಂದೂವರೆ ಪಟ್ಟು ಹಣವನ್ನು ಭಾರತದ ವಿದ್ಯಾರ್ಥಿಗಳು ಅಮೆರಿಕೆಯಲ್ಲಿ ಹೂಡುತ್ತಿದ್ದಾರೆ. ಹೀಗೆ ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುತ್ತಿರುವವರ ಸಂಖ್ಯೆ ಸುಮಾರು ಐದು ಲಕ್ಷ. ಭಾರತದ ಉನ್ನತ ಶಿಕ್ಷಣ ತಲುಪಿರುವ ಅಧೋಗತಿಯ ಸೂಚಕ ಇದು.

ದೆಹಲಿಯ ವಿಖ್ಯಾತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ‘ರಾಷ್ಟ್ರವಿರೋಧಿ’ ಹಣೆಪಟ್ಟಿ ಹಚ್ಚಿರುವ ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಿಂದ ಅಲ್ಲಿನ ವಿದ್ಯಾರ್ಥಿಗಳ ಪ್ರವೇಶಾವಕಾಶ ಮತ್ತು ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯವನ್ನು ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ತುಳಿದು ಹಾಕುತ್ತಿದೆ.. ದೇಶದ ಮೂಲೆಮೂಲೆಗಳಿಂದ ಇಲ್ಲಿಗೆ ಬರುವ ಬಡ ದಲಿತ-ಆದಿವಾಸಿ ಮಕ್ಕಳಿಗೆ ಜೆ.ಎನ್.ಯು ಬಾಗಿಲು ತೆರೆದಿರುತ್ತಿತ್ತು. ಅವರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿತ್ತು. ಈ ಅವಕಾಶಗಳು ಇದೀಗ ಬತ್ತತೊಡಗಿವೆ.

2017-18ರ ಎಂ.ಫಿಲ್ ಮತ್ತು ಪಿಎಚ್.ಡಿ. ಪ್ರವೇಶದ ಮೀಸಲಾತಿ ವಿವರಗಳು ಈ ಧೋರಣೆಗೆ ಹಿಡಿದ ಪುಟ್ಟ ಕನ್ನಡಿ. ಶೇ.15ರಷ್ಟು ಮೀಸಲಾತಿ ದೊರೆಯಬೇಕಿದ್ದ ಪರಿಶಿಷ್ಟ ಜಾತಿಗಳಿಗೆ ವಾಸ್ತವವಾಗಿ ದೊರೆತದ್ದು ಶೇ.1.3. ಶೇ.ಏಳೂವರೆಯ ಜಾಗದಲ್ಲಿ ಪರಿಶಿಷ್ಟ ಪಂಗಡಗಳಿಗೆ ಸಿಕ್ಕಿದ್ದು ಶೇ.0.6. ಶೇ.27ರಷ್ಟು ದೊರೆಯಬೇಕಿದ್ದ ಓ.ಬಿ.ಸಿ.ಗಳಿಗೆ ದಕ್ಕಿದ್ದು ಶೇ.8.2 ಮಾತ್ರ. ಸೀಟುಗಳ ಸಂಖ್ಯೆಯಲ್ಲಿ ಶೇ.83ರಷ್ಟು ಕಡಿತ ಮಾಡಲಾಗಿದೆ.

ಜೆ.ಎನ್.ಯು ವಿದ್ಯಾರ್ಥಿ ಸಂಘದ ಚುನಾವಣೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಕೂಡ ಬಹುತೇಕ ಅತ್ಯಂತ ತಳವರ್ಗಗಳಿಗೆ ಸೇರಿದವರು. ಕನ್ಹಯ್ಯ ಕುಮಾರ್ ಕೂಡ ಇಂತಹುದೇ ಹಿನ್ನೆಲೆಯಿಂದ ಬಂದಾತ. ಜೆ.ಎನ್.ಯು. ಇತಿಹಾಸದಲ್ಲಿ ಇಂತಹ ನಿದರ್ಶನಗಳು ಹೇರಳ.

29 ವರ್ಷ ವಯಸ್ಸಿನ ಜಿತೇಂದ್ರ ಸೂನ ಹತ್ತು ವರ್ಷಗಳ ಹಿಂದೆ ದಿಲ್ಲಿಯ ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ನಲ್ಲಿ ಗ್ಯಾಸ್ ಸ್ಟೌವ್‍ಗಳನ್ನು ರಿಪೇರಿ ಮಾಡುತ್ತಿದ್ದ. ರಸ್ತೆಯಡಿಗಳ ಪೈಪುಗಳು ಒಡೆದರೆ ಗುಂಡಿ ತೋಡುತ್ತಿದ್ದ. ಒಡಿಶಾದ ಕಾಳಹಂಡಿ ಜಿಲ್ಲೆಯ ಬಡ ತಂದೆತಾಯಿಗಳ ಮಗ. ಎಂಟನೆಯ ತರಗತಿಯಲ್ಲಿದ್ದಾಗ ತಾಯಿ ತೀರಿಹೋದಳು. ಇತರರ ಭತ್ತದ ಗದ್ದೆಗಳಲ್ಲಿ ಕೂಲಿ ಮಾಡಿ ದಿನಕ್ಕೆ 30-40 ರುಪಾಯಿ ಸಂಪಾದಿಸುತ್ತಿದ್ದ. ನರೇಗಾ ಯೋಜನೆಯಡಿ ಉದ್ಯೋಗ ಗಿಟ್ಟಿಸಿ ನೆಲ ಅಗೆದು ದಿನಕ್ಕೆ 100-150 ರುಪಾಯಿ ಕೂಲಿ ಗಳಿಸಿದ್ದ.

ಹೊಟ್ಟೆಪಾಡಿಗೆಂದು ದೆಹಲಿ ತಲುಪಿ ಕೂಲಿನಾಲಿ ಮಾಡುತ್ತಲೇ ಪದವಿ ಗಳಿಸಿದ. 2013ರಲ್ಲಿ ಜೆ.ಎನ್.ಯು ಪ್ರವೇಶ ಪರೀಕ್ಷೆ ಪಾಸು ಮಾಡಿದ. ಇದೀಗ ಪಿಎಚ್.ಡಿ. ಮಾಡುತ್ತಿರುವ ಆತ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹುದ್ದೆಗೆ ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘಟನೆಯಿಂದ (BAPSA) ಸ್ಪರ್ಧಿಸಿದ್ದ. ಬದುಕಿನೊಂದಿಗೆ ಹೋರಾಡಿ ಜೆ.ಎನ್.ಯು. ಪ್ರವೇಶಿಸಿ ಅಕ್ಷರಗಳನ್ನು ಎದೆಗಿಳಿಸಿಕೊಂಡ ಇಂತಹ ಸಾವಿರಾರು ಕತೆಗಳಿವೆ.

ಸಫಾಯಿ ಕರ್ಮಚಾರಿಗಳು, ಕೈಯಿಂದ ಮಾನವ ಮಲ ಬಳಿವವರು, ರಸ್ತೆ ಬದಿಯ ಸಣ್ಣಪುಟ್ಟ ವ್ಯಾಪಾರಿಗಳು, ಕೃಷಿ ಕೂಲಿಕಾರರು, ಅಂಗನವಾಡಿ ಅಮ್ಮಂದಿರ ಬಡಮಕ್ಕಳು ಕಲಿಯಲು ಇಲ್ಲಿಗೆ ಬರುತ್ತಾರೆ. ಮಾಸಿಕ ಆದಾಯ 6000 ರುಪಾಯಿಗಳು ಮತ್ತು ಅದಕ್ಕೂ ಕಮ್ಮಿ ಇರುವ ಆದಾಯವರ್ಗದ ಕುಟುಂಬಗಳಿಂದ ಬರುವ ಇಂತಹ ಮಕ್ಕಳ ಪ್ರಮಾಣ ಶೇ.43. ಮೊನ್ನೆ ಮೊನ್ನೆ ಹಾಸ್ಟೆಲ್ ಮತ್ತು ಕಲಿಕೆಯ ಶುಲ್ಕವನ್ನು ಜೆ.ಎನ್.ಯು ಆಡಳಿತವರ್ಗ ವಾರ್ಷಿಕ 30 ಸಾವಿರ ರುಪಾಯಿಗಳಿಂದ 60 ಸಾವಿರಕ್ಕೆ ಏರಿಸಿದೆ. ಪಾವತಿ ಮಾಡಲಾಗದಿದ್ದರೆ ಇಲ್ಲಿ ಓದುವುದನ್ನು ಬಿಟ್ಟು ಬೇರೆ ಹುಡುಕಿಕೊಳ್ಳಿ ಎಂದು ವಿಶ್ವವಿದ್ಯಾಲಯದ ಆಡಳಿತವರ್ಗ ವಿದ್ಯಾರ್ಥಿಗಳನ್ನು ಜಬರಿಸಿದೆ.

ಕಳೆದ ಐದು ವರ್ಷಗಳಲ್ಲಿ ಐದೂವರೆ ಲಕ್ಷ ಕೋಟಿ ರುಪಾಯಿಗಳಷ್ಟು ಕಾಪೆರ್Çರೇಟು ಸಾಲಗಳನ್ನು ಮನ್ನಾ ಮಾಡಲಾಗಿದೆ. ಸರ್ದಾರ್ ವಲ್ಲಭ ಭಾಯಿ ಪಟೇಲರ ಪ್ರತಿಮೆ ನಿಲ್ಲಿಸಲು 3000 ಕೋಟಿ ರುಪಾಯಿ ವ್ಯಯಿಸಲಾಗಿದೆ. ನೋಟು ರದ್ದು ಮಾಡಿ, ಹೊಸ ನೋಟು ಮುದ್ರಿಸಲು ಮಾಡಲಾದ ವೆಚ್ಚ 13 ಸಾವಿರ ಕೋಟಿ ರುಪಾಯಿಗಳು. ಆಳುವ ಪಕ್ಷದ ಜಾಹೀರಾತುಗಳಿಗೆ ಸಾವಿರಾರು ಕೋಟಿ ರುಪಾಯಿ ಖರ್ಚು ಮಾಡಲಾಗಿದೆ. ಆದರೆ ನಿರ್ಗತಿಕರು ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳ ಪಾಲಿನ ಏಕೈಕ ಅಕ್ಷರಲೋಕ ಜೆ.ಎನ್.ಯು ಬಾಗಿಲನ್ನು ಶುಲ್ಕ ಏರಿಸಿ ಈ ವರ್ಗಗಳಿಗೆ ಮುಚ್ಚಲಾಗುತ್ತಿದೆ.

ಪ್ರತಿಭಟನೆಗೆ ಇಳಿದಿರುವ ವಿದ್ಯಾರ್ಥಿ ಸಮುದಾಯದ ವಿರುದ್ಧ ದಮನಕಾರಿ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಮೊನ್ನೆ ವಕೀಲರ ಜೊತೆಗಿನ ಘರ್ಷಣೆಗಳಲ್ಲಿ ಕುರಿಮರಿಗಳಂತೆ ವರ್ತಿಸಿದ್ದ ದೆಹಲಿ ಪೆÇಲೀಸರು, ಇದೀಗ ಬಡ ವಿದ್ಯಾರ್ಥಿಗಳ ಬುರುಡೆ ಬಿಚ್ಚುತ್ತಿದ್ದಾರೆ.

ಇದೇ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯವೇ ಸ್ಥಾಪಿಸಿದ ವ್ಯವಸ್ಥೆ (National Institutions Ranking Framework) ದೇಶದಲ್ಲೇ ಮೊದಲ ರ್ಯಾಂಕ್ ನೀಡಿತ್ತು. ವಿಶ್ವವಿದ್ಯಾಲಯವೊಂದು ಏಕಕಾಲಕ್ಕೆ ರಾಷ್ಟ್ರವಿರೋಧಿ ಎನಿಸಿಕೊಳ್ಳುವುದು ಮತ್ತು ಅದೇ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದಿಂದ ದೇಶದಲ್ಲಿ ಮೊದಲ ರ್ಯಾಂಕ್ ಪಡೆಯುವುದು ದೊಡ್ಡ ಸೋಜಿಗವೇ ಸರಿ!

ಇದನ್ನು ಓದಿ : JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ಭಿನ್ನಾಭಿಪ್ರಾಯಗಳನ್ನು ತುಳಿಯಲಾಗುತ್ತಿದೆ. ಭಿನ್ನಮತ ಪ್ರದರ್ಶಿಸುವ ವಿದ್ಯಾರ್ಥಿಗಳನ್ನು ದುಬಾರಿ ದಂಡ ಶುಲ್ಕಗಳಿಂದ ದಂಡಿಸಲಾಗುತ್ತಿದೆ. ವಿದ್ಯಾರ್ಥಿಗಳ ಕೈಗೆಟುಕುವ ದರಗಳಲ್ಲಿ ವ್ಯವಹರಿಸುವ ಧಾಬಾಗಳನ್ನು ಮುಚ್ಚಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ರಾತ್ರಿ 11.30ರ ನಂತರ ಕ್ಯಾಂಪಸಿನಲ್ಲಿ ಕಫ್ರ್ಯೂ ವಿಧಿಸಲಾಗಿದೆ. ರಾತ್ರಿಯೆಲ್ಲ ತೆರೆದಿರುತ್ತಿದ್ದ ಗ್ರಂಥಾಲಯವನ್ನು ಮುಚ್ಚಲಾಗುತ್ತಿದೆ.

ಸಾಮಾಜಿಕವಾಗಿ ಎಲ್ಲರನ್ನೂ ಒಳಗೊಳ್ಳುವ, ಜನತಾಂತ್ರಿಕ, ಪ್ರಗತಿಪರ ಹಾಗೂ ಜಾತ್ಯತೀತ ಗುಣಗಳನ್ನು, ವೈಚಾರಿಕ ಸ್ವಾತಂತ್ರ್ಯ ಮತ್ತು ಮುಕ್ತಚಿಂತನೆಯ ಮೌಲ್ಯಗಳು ಜೆ.ಎನ್.ಯುವಿನ ಆತ್ಮ. ಈ ಆತ್ಮವನ್ನೇ ನಾಶ ಮಾಡಲಾಗುತ್ತಿದೆ. ಶಿಕ್ಷಣವನ್ನು ಖಾಸಗೀಕರಿಸಿ ವ್ಯಾಪಾರದ ಸರಕನ್ನಾಗಿಸುವ, ಉಳ್ಳವರ ಏಕಸ್ವಾಮ್ಯ ಆಗಿಸುವ ಹುನ್ನಾರ ಜಾರಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ವರ್ಚಸ್ ಆರೆಸಸ್ ಕೇಂದ್ರ ಸರ್ಕಾರದ ದೂರ್ ನಡಿಯ ದುರ್ನಡತೆ ನನ್ನ ಧಿಕ್ಕಾರ
    ಕಾಂಗ್ರೆಸ್ ಒಂದುರೀತಿ ಅನ್ಯಾಯ ಮಾಡಿದ್ದಾದರೆ ಅವರು 70 ವರ್ಷ ಆಡಳಿತ ಅವಧಿಯಲ್ಲಿ ಹಂತಹಂತವಾಗಿ ತಳ ವರ್ಗದವರಿಗೆ ಅನ್ಯಾಯ ಮಾಡುತ್ತಲೇ ಮುಂದಿರುತ್ತಾರೆ
    ಬಿಜೆಪಿ ಆರನೇ ವರ್ಷ ರನ್ನಿಂಗ್ ಇದೆ ನಿರ್ಗತಿಕರಿಗೆ ಕಾರ್ಮಿಕ ವರ್ಗದವರಿಗೆ ತಿನ್ನಲು ಊಟವೇ ಇಲ್ಲದ ಕಡುಬಡತನ ಹೇರಲಾಗಿದೆ ಇನ್ನು 70ವರ್ಷ ಕಾಂಗ್ರೆಸ್ ಸರ್ಕಾರದ ಅವಧಿ ಬಿಜೆಪಿಗೆ ಸಿಕ್ಕರೆ ಭಾರತದೇಶವೇ ಸಂಪೂರ್ಣ ಮನುವಾದಿಗಳು ವರ್ಚಸ್ ಶೂದ್ರರು ಹೊಡೆದಾಡುವುದು ರಲ್ಲಿ ಮುಲಾಜಿಲ್ಲದೆ ನಡೆಯಬೇಕಾಗುತ್ತದೆ ಮೋದಿಯಂತಹ ದುರ್ದೈವ ಪ್ರಧಾನಿ ಎಂದರೆ ಮತ್ತೊಬ್ಬನಿಲ್ಲ
    ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...