Homeಚಳವಳಿವಂಚಿತರ ಪಾಲಿಗೆ ಮುಚ್ಚತೊಡಗಿದೆ ಜೆ.ಎನ್.ಯು ಬಾಗಿಲು : ಡಿ. ಉಮಾಪತಿ

ವಂಚಿತರ ಪಾಲಿಗೆ ಮುಚ್ಚತೊಡಗಿದೆ ಜೆ.ಎನ್.ಯು ಬಾಗಿಲು : ಡಿ. ಉಮಾಪತಿ

ಏಕಲವ್ಯ-ದ್ರೋಣ-ಅರ್ಜುನ ಮತ್ತು ಶಂಬೂಕ-ಬ್ರಾಹ್ಮಣ-ಶ್ರೀರಾಮನ ಕ್ರೂರ ಕಥನಗಳು ಆಧುನಿಕ ಭಾರತದಲ್ಲಿ ಬಗೆ ಬಗೆಯ ಹೊಸ ವೇಷಗಳನ್ನು ಧರಿಸಿ ಪುನರಾವರ್ತನೆ ಆಗುತ್ತಿವೆ. ಅಕ್ಷರವಂಚನೆಯ ಮೋಸ ಹತ್ತಾರು ರೂಪಗಳಲ್ಲಿ ಮುಂದುವರೆದಿದೆ.

- Advertisement -
- Advertisement -

ವ್ಯವಸ್ಥೆಯ ಅಂಚಿನಲ್ಲಿ ಉಸಿರು ಬಿಗಿಹಿಡಿದು ಬದುಕಿರುವ ನಿರ್ಗತಿಕ ಮತ್ತು ವಂಚಿತ ಸಮುದಾಯಗಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ, ಮೇಲ್ವರ್ಗ-ಮೇಲ್ಜಾತಿಗಳು ಸಾವಿರಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿರುವ ಯಥಾಸ್ಥಿತಿಯ ಅಡಿಪಾಯ ಅಲ್ಲಾಡತೊಡಗುತ್ತದೆ.

ಯಾಕೆಂದರೆ ಮಾತು ಸತ್ತ ಸಮುದಾಯಗಳಿಗೆ ಪದಸಂಪತ್ತು ಸಿಗುತ್ತದೆ, ಮಾತಾಡುವ ಆತ್ಮವಿಶ್ವಾಸ ಮೂಡುತ್ತದೆ.

ಸಮಾನ ಕಲಿಕೆಯ ಹಕ್ಕಿನ ಈ ಹೋರಾಟ ಇಂದು ನಿನ್ನೆಯದಲ್ಲ. ಸ್ವಂತ ಸಾಧನೆಯಿಂದಲೇ ಅರಿವನ್ನು ತನ್ನದಾಗಿಸಿಕೊಂಡ ಶೂದ್ರ ಏಕಲವ್ಯನನ್ನು ಜಾತಿ-ವರ್ಣ ವ್ಯವಸ್ಥೆ ವಂಚಿಸಿ ಸೋಲಿಸಿತು. ತಪಸ್ಸನ್ನು ಆಚರಿಸಲು ಮುಂದಾದ ಶಂಬೂಕನ ತಲೆದಂಡವನ್ನೇ ಪಡೆದು ಇತರೆ ಶೂದ್ರರು-ಅಸ್ಪೃಶ್ಯರು ತಲೆಯೆತ್ತದಂತೆ ಕ್ರೂರ ಶಿಕ್ಷೆ ವಿಧಿಸಿತ್ತು.

ಈ ಏಕಲವ್ಯ-ದ್ರೋಣ-ಅರ್ಜುನ ಮತ್ತು ಶಂಬೂಕ-ಬ್ರಾಹ್ಮಣ-ಶ್ರೀರಾಮನ ಕ್ರೂರ ಕಥನಗಳು ಆಧುನಿಕ ಭಾರತದಲ್ಲಿ ಬಗೆಬಗೆಯ ಹೊಸ ವೇಷಗಳನ್ನು ಧರಿಸಿ ಪುನರಾವರ್ತನೆ ಆಗುತ್ತಿವೆ. ಅಕ್ಷರವಂಚನೆಯ ಮೋಸ ಹತ್ತಾರು ರೂಪಗಳಲ್ಲಿ ಮುಂದುವರೆದಿದೆ.

ಹಣವಂತರು ವರ್ಷಕ್ಕೆ 10-15 ಲಕ್ಷ ತೆತ್ತು ಖಾಸಗಿ ಕಾಲೇಜುಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿದ್ದಾರೆ. ಇಲ್ಲದವರ ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಬಿಸಿಲುಗುದುರೆ ಆಗತೊಡಗಿದೆ.

2016-17ರಲ್ಲಿ ಅಮೆರಿಕೆಯಲ್ಲಿನ ಭಾರತೀಯ ವಿದ್ಯಾರ್ಥಿಗಳು 42,835 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದರು. 2015-16ರಲ್ಲಿ ಮಾಡಿದ್ದ ವೆಚ್ಚಕ್ಕಿಂತ ಶೇ.30ರಷ್ಟು ಹೆಚ್ಚು ಇದು.

ಭಾರತದ ಉನ್ನತ ಶಿಕ್ಷಣದ ಪೂರ್ಣ ಬಜೆಟ್ ಈ ವರ್ಷ 35 ಸಾವಿರ ಕೋಟಿ ರುಪಾಯಿ. ಈ ಬಜೆಟ್ಟಿನ ಒಂದೂವರೆ ಪಟ್ಟು ಹಣವನ್ನು ಭಾರತದ ವಿದ್ಯಾರ್ಥಿಗಳು ಅಮೆರಿಕೆಯಲ್ಲಿ ಹೂಡುತ್ತಿದ್ದಾರೆ. ಹೀಗೆ ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುತ್ತಿರುವವರ ಸಂಖ್ಯೆ ಸುಮಾರು ಐದು ಲಕ್ಷ. ಭಾರತದ ಉನ್ನತ ಶಿಕ್ಷಣ ತಲುಪಿರುವ ಅಧೋಗತಿಯ ಸೂಚಕ ಇದು.

ದೆಹಲಿಯ ವಿಖ್ಯಾತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ‘ರಾಷ್ಟ್ರವಿರೋಧಿ’ ಹಣೆಪಟ್ಟಿ ಹಚ್ಚಿರುವ ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಿಂದ ಅಲ್ಲಿನ ವಿದ್ಯಾರ್ಥಿಗಳ ಪ್ರವೇಶಾವಕಾಶ ಮತ್ತು ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯವನ್ನು ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ತುಳಿದು ಹಾಕುತ್ತಿದೆ.. ದೇಶದ ಮೂಲೆಮೂಲೆಗಳಿಂದ ಇಲ್ಲಿಗೆ ಬರುವ ಬಡ ದಲಿತ-ಆದಿವಾಸಿ ಮಕ್ಕಳಿಗೆ ಜೆ.ಎನ್.ಯು ಬಾಗಿಲು ತೆರೆದಿರುತ್ತಿತ್ತು. ಅವರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿತ್ತು. ಈ ಅವಕಾಶಗಳು ಇದೀಗ ಬತ್ತತೊಡಗಿವೆ.

2017-18ರ ಎಂ.ಫಿಲ್ ಮತ್ತು ಪಿಎಚ್.ಡಿ. ಪ್ರವೇಶದ ಮೀಸಲಾತಿ ವಿವರಗಳು ಈ ಧೋರಣೆಗೆ ಹಿಡಿದ ಪುಟ್ಟ ಕನ್ನಡಿ. ಶೇ.15ರಷ್ಟು ಮೀಸಲಾತಿ ದೊರೆಯಬೇಕಿದ್ದ ಪರಿಶಿಷ್ಟ ಜಾತಿಗಳಿಗೆ ವಾಸ್ತವವಾಗಿ ದೊರೆತದ್ದು ಶೇ.1.3. ಶೇ.ಏಳೂವರೆಯ ಜಾಗದಲ್ಲಿ ಪರಿಶಿಷ್ಟ ಪಂಗಡಗಳಿಗೆ ಸಿಕ್ಕಿದ್ದು ಶೇ.0.6. ಶೇ.27ರಷ್ಟು ದೊರೆಯಬೇಕಿದ್ದ ಓ.ಬಿ.ಸಿ.ಗಳಿಗೆ ದಕ್ಕಿದ್ದು ಶೇ.8.2 ಮಾತ್ರ. ಸೀಟುಗಳ ಸಂಖ್ಯೆಯಲ್ಲಿ ಶೇ.83ರಷ್ಟು ಕಡಿತ ಮಾಡಲಾಗಿದೆ.

ಜೆ.ಎನ್.ಯು ವಿದ್ಯಾರ್ಥಿ ಸಂಘದ ಚುನಾವಣೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಕೂಡ ಬಹುತೇಕ ಅತ್ಯಂತ ತಳವರ್ಗಗಳಿಗೆ ಸೇರಿದವರು. ಕನ್ಹಯ್ಯ ಕುಮಾರ್ ಕೂಡ ಇಂತಹುದೇ ಹಿನ್ನೆಲೆಯಿಂದ ಬಂದಾತ. ಜೆ.ಎನ್.ಯು. ಇತಿಹಾಸದಲ್ಲಿ ಇಂತಹ ನಿದರ್ಶನಗಳು ಹೇರಳ.

29 ವರ್ಷ ವಯಸ್ಸಿನ ಜಿತೇಂದ್ರ ಸೂನ ಹತ್ತು ವರ್ಷಗಳ ಹಿಂದೆ ದಿಲ್ಲಿಯ ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ನಲ್ಲಿ ಗ್ಯಾಸ್ ಸ್ಟೌವ್‍ಗಳನ್ನು ರಿಪೇರಿ ಮಾಡುತ್ತಿದ್ದ. ರಸ್ತೆಯಡಿಗಳ ಪೈಪುಗಳು ಒಡೆದರೆ ಗುಂಡಿ ತೋಡುತ್ತಿದ್ದ. ಒಡಿಶಾದ ಕಾಳಹಂಡಿ ಜಿಲ್ಲೆಯ ಬಡ ತಂದೆತಾಯಿಗಳ ಮಗ. ಎಂಟನೆಯ ತರಗತಿಯಲ್ಲಿದ್ದಾಗ ತಾಯಿ ತೀರಿಹೋದಳು. ಇತರರ ಭತ್ತದ ಗದ್ದೆಗಳಲ್ಲಿ ಕೂಲಿ ಮಾಡಿ ದಿನಕ್ಕೆ 30-40 ರುಪಾಯಿ ಸಂಪಾದಿಸುತ್ತಿದ್ದ. ನರೇಗಾ ಯೋಜನೆಯಡಿ ಉದ್ಯೋಗ ಗಿಟ್ಟಿಸಿ ನೆಲ ಅಗೆದು ದಿನಕ್ಕೆ 100-150 ರುಪಾಯಿ ಕೂಲಿ ಗಳಿಸಿದ್ದ.

ಹೊಟ್ಟೆಪಾಡಿಗೆಂದು ದೆಹಲಿ ತಲುಪಿ ಕೂಲಿನಾಲಿ ಮಾಡುತ್ತಲೇ ಪದವಿ ಗಳಿಸಿದ. 2013ರಲ್ಲಿ ಜೆ.ಎನ್.ಯು ಪ್ರವೇಶ ಪರೀಕ್ಷೆ ಪಾಸು ಮಾಡಿದ. ಇದೀಗ ಪಿಎಚ್.ಡಿ. ಮಾಡುತ್ತಿರುವ ಆತ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹುದ್ದೆಗೆ ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘಟನೆಯಿಂದ (BAPSA) ಸ್ಪರ್ಧಿಸಿದ್ದ. ಬದುಕಿನೊಂದಿಗೆ ಹೋರಾಡಿ ಜೆ.ಎನ್.ಯು. ಪ್ರವೇಶಿಸಿ ಅಕ್ಷರಗಳನ್ನು ಎದೆಗಿಳಿಸಿಕೊಂಡ ಇಂತಹ ಸಾವಿರಾರು ಕತೆಗಳಿವೆ.

ಸಫಾಯಿ ಕರ್ಮಚಾರಿಗಳು, ಕೈಯಿಂದ ಮಾನವ ಮಲ ಬಳಿವವರು, ರಸ್ತೆ ಬದಿಯ ಸಣ್ಣಪುಟ್ಟ ವ್ಯಾಪಾರಿಗಳು, ಕೃಷಿ ಕೂಲಿಕಾರರು, ಅಂಗನವಾಡಿ ಅಮ್ಮಂದಿರ ಬಡಮಕ್ಕಳು ಕಲಿಯಲು ಇಲ್ಲಿಗೆ ಬರುತ್ತಾರೆ. ಮಾಸಿಕ ಆದಾಯ 6000 ರುಪಾಯಿಗಳು ಮತ್ತು ಅದಕ್ಕೂ ಕಮ್ಮಿ ಇರುವ ಆದಾಯವರ್ಗದ ಕುಟುಂಬಗಳಿಂದ ಬರುವ ಇಂತಹ ಮಕ್ಕಳ ಪ್ರಮಾಣ ಶೇ.43. ಮೊನ್ನೆ ಮೊನ್ನೆ ಹಾಸ್ಟೆಲ್ ಮತ್ತು ಕಲಿಕೆಯ ಶುಲ್ಕವನ್ನು ಜೆ.ಎನ್.ಯು ಆಡಳಿತವರ್ಗ ವಾರ್ಷಿಕ 30 ಸಾವಿರ ರುಪಾಯಿಗಳಿಂದ 60 ಸಾವಿರಕ್ಕೆ ಏರಿಸಿದೆ. ಪಾವತಿ ಮಾಡಲಾಗದಿದ್ದರೆ ಇಲ್ಲಿ ಓದುವುದನ್ನು ಬಿಟ್ಟು ಬೇರೆ ಹುಡುಕಿಕೊಳ್ಳಿ ಎಂದು ವಿಶ್ವವಿದ್ಯಾಲಯದ ಆಡಳಿತವರ್ಗ ವಿದ್ಯಾರ್ಥಿಗಳನ್ನು ಜಬರಿಸಿದೆ.

ಕಳೆದ ಐದು ವರ್ಷಗಳಲ್ಲಿ ಐದೂವರೆ ಲಕ್ಷ ಕೋಟಿ ರುಪಾಯಿಗಳಷ್ಟು ಕಾಪೆರ್Çರೇಟು ಸಾಲಗಳನ್ನು ಮನ್ನಾ ಮಾಡಲಾಗಿದೆ. ಸರ್ದಾರ್ ವಲ್ಲಭ ಭಾಯಿ ಪಟೇಲರ ಪ್ರತಿಮೆ ನಿಲ್ಲಿಸಲು 3000 ಕೋಟಿ ರುಪಾಯಿ ವ್ಯಯಿಸಲಾಗಿದೆ. ನೋಟು ರದ್ದು ಮಾಡಿ, ಹೊಸ ನೋಟು ಮುದ್ರಿಸಲು ಮಾಡಲಾದ ವೆಚ್ಚ 13 ಸಾವಿರ ಕೋಟಿ ರುಪಾಯಿಗಳು. ಆಳುವ ಪಕ್ಷದ ಜಾಹೀರಾತುಗಳಿಗೆ ಸಾವಿರಾರು ಕೋಟಿ ರುಪಾಯಿ ಖರ್ಚು ಮಾಡಲಾಗಿದೆ. ಆದರೆ ನಿರ್ಗತಿಕರು ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳ ಪಾಲಿನ ಏಕೈಕ ಅಕ್ಷರಲೋಕ ಜೆ.ಎನ್.ಯು ಬಾಗಿಲನ್ನು ಶುಲ್ಕ ಏರಿಸಿ ಈ ವರ್ಗಗಳಿಗೆ ಮುಚ್ಚಲಾಗುತ್ತಿದೆ.

ಪ್ರತಿಭಟನೆಗೆ ಇಳಿದಿರುವ ವಿದ್ಯಾರ್ಥಿ ಸಮುದಾಯದ ವಿರುದ್ಧ ದಮನಕಾರಿ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಮೊನ್ನೆ ವಕೀಲರ ಜೊತೆಗಿನ ಘರ್ಷಣೆಗಳಲ್ಲಿ ಕುರಿಮರಿಗಳಂತೆ ವರ್ತಿಸಿದ್ದ ದೆಹಲಿ ಪೆÇಲೀಸರು, ಇದೀಗ ಬಡ ವಿದ್ಯಾರ್ಥಿಗಳ ಬುರುಡೆ ಬಿಚ್ಚುತ್ತಿದ್ದಾರೆ.

ಇದೇ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯವೇ ಸ್ಥಾಪಿಸಿದ ವ್ಯವಸ್ಥೆ (National Institutions Ranking Framework) ದೇಶದಲ್ಲೇ ಮೊದಲ ರ್ಯಾಂಕ್ ನೀಡಿತ್ತು. ವಿಶ್ವವಿದ್ಯಾಲಯವೊಂದು ಏಕಕಾಲಕ್ಕೆ ರಾಷ್ಟ್ರವಿರೋಧಿ ಎನಿಸಿಕೊಳ್ಳುವುದು ಮತ್ತು ಅದೇ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದಿಂದ ದೇಶದಲ್ಲಿ ಮೊದಲ ರ್ಯಾಂಕ್ ಪಡೆಯುವುದು ದೊಡ್ಡ ಸೋಜಿಗವೇ ಸರಿ!

ಇದನ್ನು ಓದಿ : JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ಭಿನ್ನಾಭಿಪ್ರಾಯಗಳನ್ನು ತುಳಿಯಲಾಗುತ್ತಿದೆ. ಭಿನ್ನಮತ ಪ್ರದರ್ಶಿಸುವ ವಿದ್ಯಾರ್ಥಿಗಳನ್ನು ದುಬಾರಿ ದಂಡ ಶುಲ್ಕಗಳಿಂದ ದಂಡಿಸಲಾಗುತ್ತಿದೆ. ವಿದ್ಯಾರ್ಥಿಗಳ ಕೈಗೆಟುಕುವ ದರಗಳಲ್ಲಿ ವ್ಯವಹರಿಸುವ ಧಾಬಾಗಳನ್ನು ಮುಚ್ಚಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ರಾತ್ರಿ 11.30ರ ನಂತರ ಕ್ಯಾಂಪಸಿನಲ್ಲಿ ಕಫ್ರ್ಯೂ ವಿಧಿಸಲಾಗಿದೆ. ರಾತ್ರಿಯೆಲ್ಲ ತೆರೆದಿರುತ್ತಿದ್ದ ಗ್ರಂಥಾಲಯವನ್ನು ಮುಚ್ಚಲಾಗುತ್ತಿದೆ.

ಸಾಮಾಜಿಕವಾಗಿ ಎಲ್ಲರನ್ನೂ ಒಳಗೊಳ್ಳುವ, ಜನತಾಂತ್ರಿಕ, ಪ್ರಗತಿಪರ ಹಾಗೂ ಜಾತ್ಯತೀತ ಗುಣಗಳನ್ನು, ವೈಚಾರಿಕ ಸ್ವಾತಂತ್ರ್ಯ ಮತ್ತು ಮುಕ್ತಚಿಂತನೆಯ ಮೌಲ್ಯಗಳು ಜೆ.ಎನ್.ಯುವಿನ ಆತ್ಮ. ಈ ಆತ್ಮವನ್ನೇ ನಾಶ ಮಾಡಲಾಗುತ್ತಿದೆ. ಶಿಕ್ಷಣವನ್ನು ಖಾಸಗೀಕರಿಸಿ ವ್ಯಾಪಾರದ ಸರಕನ್ನಾಗಿಸುವ, ಉಳ್ಳವರ ಏಕಸ್ವಾಮ್ಯ ಆಗಿಸುವ ಹುನ್ನಾರ ಜಾರಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ವರ್ಚಸ್ ಆರೆಸಸ್ ಕೇಂದ್ರ ಸರ್ಕಾರದ ದೂರ್ ನಡಿಯ ದುರ್ನಡತೆ ನನ್ನ ಧಿಕ್ಕಾರ
    ಕಾಂಗ್ರೆಸ್ ಒಂದುರೀತಿ ಅನ್ಯಾಯ ಮಾಡಿದ್ದಾದರೆ ಅವರು 70 ವರ್ಷ ಆಡಳಿತ ಅವಧಿಯಲ್ಲಿ ಹಂತಹಂತವಾಗಿ ತಳ ವರ್ಗದವರಿಗೆ ಅನ್ಯಾಯ ಮಾಡುತ್ತಲೇ ಮುಂದಿರುತ್ತಾರೆ
    ಬಿಜೆಪಿ ಆರನೇ ವರ್ಷ ರನ್ನಿಂಗ್ ಇದೆ ನಿರ್ಗತಿಕರಿಗೆ ಕಾರ್ಮಿಕ ವರ್ಗದವರಿಗೆ ತಿನ್ನಲು ಊಟವೇ ಇಲ್ಲದ ಕಡುಬಡತನ ಹೇರಲಾಗಿದೆ ಇನ್ನು 70ವರ್ಷ ಕಾಂಗ್ರೆಸ್ ಸರ್ಕಾರದ ಅವಧಿ ಬಿಜೆಪಿಗೆ ಸಿಕ್ಕರೆ ಭಾರತದೇಶವೇ ಸಂಪೂರ್ಣ ಮನುವಾದಿಗಳು ವರ್ಚಸ್ ಶೂದ್ರರು ಹೊಡೆದಾಡುವುದು ರಲ್ಲಿ ಮುಲಾಜಿಲ್ಲದೆ ನಡೆಯಬೇಕಾಗುತ್ತದೆ ಮೋದಿಯಂತಹ ದುರ್ದೈವ ಪ್ರಧಾನಿ ಎಂದರೆ ಮತ್ತೊಬ್ಬನಿಲ್ಲ
    ಜೈ ಭೀಮ್ ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...