Homeಮುಖಪುಟಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

ಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

- Advertisement -
- Advertisement -

ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾದ ಮೇಲೆ ವೈಮಾನಿಕ ದಾಳಿ ಆರಂಭಿಸಿದ ಬಳಿಕ ಗಾಝಾದಲ್ಲಿ 53 ಪತ್ರಕರ್ತರು ಕೊಲ್ಲಲ್ಪಟ್ಟಿದ್ದು, ಪ್ಯಾಲೆಸ್ತೀನ್‌ನ ಅಮಾಯಕ ನಾಗರಿಕರ ಜೊತೆಗೆ ಪತ್ರಕರ್ತರ ಕೂಡ ಹತ್ಯಾಕಾಂಡ ನಡೆದಿದೆ.

ಅ.7ರ ಹಮಾಸ್ ದಾಳಿಯ ನಂತರ ಇಸ್ರೇಲ್‌ ಸೈನ್ಯವು ಪಟ್ಟುಬಿಡದೆ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿತ್ತು. ವಿದ್ಯುತ್‌, ನೀರಾವರಿ ಸಂಪರ್ಕಗಳನ್ನು ಕಡಿತಗೊಳಿಸಿತ್ತು. ಇಸ್ರೇಲ್‌ ನಡೆಸಿದ ದಾಳಿಗೆ 15,000ಕ್ಕೂ ಅಧಿಕ ಮಂದಿ ನಾಗರಿಕರು ಗಾಝಾದಲ್ಲಿ ಮೃತಪಟ್ಟಿದ್ದರು. 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಗಾಝಾ ನಿವಾಸಿಗಳು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮನೆಗಳು, ವಾಣಿಜ್ಯ ಕಟ್ಟಡಗಳು, ಆಸ್ಪತ್ರೆಗಳು ಇಸ್ರೇಲ್ ಬಾಂಬ್‌ ದಾಳಿಗೆ ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಹಮಾಸ್‌ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನ ಎಂದು ಹೇಳಿಕೊಂಡಿದೆ. ಆದರೆ ಯುದ್ಧದಲ್ಲಿ 40% ಮಕ್ಕಳು, ಮಹಿಳೆಯರು, ಪತ್ರಕರ್ತರ ಜೀವಗಳನ್ನು ಬಲಿತೆಗೆದುಕೊಂಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಸಮರ್ಥನೆಯ ಬಗ್ಗೆ ಟೀಕೆಗೆ ಗುರಿಯಾಗಿದೆ.

ಗಾಝಾದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಈ ಮೊದಲು ಇಸ್ರೇಲ್ ರಾಯಿಟರ್ಸ್ ಮತ್ತು ಎಎಫ್‌ಪಿಗೆ ಸ್ಪಷ್ಟವಾಗಿ ಹೇಳಿತ್ತು. ಇಸ್ರೇಲ್‌ ರಕ್ಷಣಾ ಪಡೆಯ ಕೈಯಲ್ಲಿ 20 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನ ಕೊಲೆಗಳು ಗಾಝಾದಲ್ಲಿ ಸಂಭವಿಸಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿ (CPJ) ನ.22ಕ್ಕೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಇಸ್ರೇಲ್‌ ಮಿಲಿಟರಿ ಪಡೆಯ ಕೈಯಲ್ಲಿ 53 ಪತ್ರಕರ್ತರು ಸಾವನ್ನಪ್ಪಿದ್ದಾರೆ. 37 ಪ್ಯಾಲೆಸ್ತೀನ್‌ ಪತ್ರಕರ್ತರು, ನಾಲ್ವರು ಇಸ್ರೇಲ್‌ ಮತ್ತು ಓರ್ವ ಲೆಬನಾನ್‌ನ ಪತ್ರಕರ್ತ ಮೃತಪಟ್ಟಿದ್ದಾರೆ. 11 ಪತ್ರಕರ್ತರು ಗಾಯಗೊಂಡಿದ್ದಾರೆ. ಮೂವರು ಪತ್ರಕರ್ತರು ನಾಪತ್ತೆಯಾಗಿದ್ದಾರೆ. 18 ಪತ್ರಕರ್ತರನ್ನು ಬಂಧಿಸಲಾಗಿದೆ ಎಂದು ಸಿಪಿಜೆ ವರದಿ ತಿಳಿಸಿದೆ.

ಪತ್ರಕರ್ತರ ಕುಟುಂಬದ ಸದಸ್ಯರ ಮೇಲೆ ದಾಳಿಗಳು ನಡೆದಿದೆ. ಬೆದರಿಕೆಗಳು ಹಾಕಲಾಗಿದೆ. ಪತ್ರಕರ್ತರ ಕುಟುಂಬಸ್ಥರನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಗಾಝಾ ನಗರದಲ್ಲಿನ ಖಾನ್ ಯೂನಿಸ್‌ ನಗರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಫೆಲಸ್ತೀನ್‌ ಚಾನಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್‌ ಮತ್ತು ಅವರ ಕುಟುಂಬದ 11 ಮಂದಿ ಬಲಿಯಾಗಿದ್ದರು.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್ ಜಝೀರಾ ಅರೇಬಿಕ್ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಅವರ ಪತ್ನಿ, ಮಗ, ಮಗಳು ಮತ್ತು ಮೊಮ್ಮಗ ಸಾವನ್ನಪ್ಪಿದ್ದರು.

ಪತ್ರಿಕಾ ಸ್ವಾತಂತ್ರ್ಯದ ವಿಚಾರದಲ್ಲಿ ಇಸ್ರೇಲ್‌ನ ನಡೆಯು ಏಕಪಕ್ಷೀಯವಾಗಿದೆ. ಎಲ್ಲಾ ಪತ್ರಕರ್ತರನ್ನು ರಕ್ಷಿಸುವ ಅಗತ್ಯವನ್ನು ಇಸ್ರೇಲ್‌ ನಿರ್ಲಕ್ಷಿಸಿದೆ. ಇಸ್ರೇಲ್‌ನ ಸಂಪೂರ್ಣ ನಿಷ್ಕ್ರಿಯತೆಯು ಪತ್ರಿಕಾ ಸ್ವಾತಂತ್ರ್ಯವನ್ನು ನಿಸ್ಸಂಶಯವಾಗಿ ದುರ್ಬಲಗೊಳಿಸುತ್ತದೆ. ಇಸ್ರೇಲ್‌ ನಡೆಯು ಕನಿಷ್ಟ ಪಕ್ಷ ಇಸ್ರೇಲ್‌ ಪಡೆಯಿಂದ ಹತ್ಯೆಯಾದ ಪತ್ರಕರ್ತರು ನ್ಯಾಯಕ್ಕೆ ಯೋಗ್ಯವಾಗಿಲ್ಲ ಎಂಬುವುದನ್ನು ಸೂಚಿಸುತ್ತಿದೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...

ಮೀರತ್| ದಲಿತ ಮಹಿಳೆ ಕೊಲೆ-ಮಗಳ ಅಪಹರಣ; ಸಂತ್ರಸ್ತ ಕುಟುಂಬವನ್ನು ಸಾರ್ವಜನಿಕ ಸಂಪರ್ಕದಿಂದ ದೂರವಿಟ್ಟ ಪೊಲೀಸರು

ಮೀರತ್‌ನಲ್ಲಿ ಪ್ರಬಲ ಜಾತಿ ಪುರುಷರ ಗುಂಪೊಂದು ದಲಿತ ಮಹಿಳೆಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, "ಪೊಲೀಸರು ಮತ್ತು ಬಿಜೆಪಿ ಮುಖಂಡರು ತಮ್ಮನ್ನು ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ, ಪ್ರಮುಖ...

ಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

ರಾಷ್ಟ್ರ ರಾಜಧಾನಿಯಲ್ಲಿ ಮಸೀದಿ ಮತ್ತು ದರ್ಗಾಗಳು ಅತಿಕ್ರಮಣ ಮಾಡುತ್ತಿವೆ ಎಂದು ಆರೋಪಿಸಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಬುಧವಾರ...

ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ...

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...