Homeಮುಖಪುಟಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

ಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

- Advertisement -
- Advertisement -

ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾದ ಮೇಲೆ ವೈಮಾನಿಕ ದಾಳಿ ಆರಂಭಿಸಿದ ಬಳಿಕ ಗಾಝಾದಲ್ಲಿ 53 ಪತ್ರಕರ್ತರು ಕೊಲ್ಲಲ್ಪಟ್ಟಿದ್ದು, ಪ್ಯಾಲೆಸ್ತೀನ್‌ನ ಅಮಾಯಕ ನಾಗರಿಕರ ಜೊತೆಗೆ ಪತ್ರಕರ್ತರ ಕೂಡ ಹತ್ಯಾಕಾಂಡ ನಡೆದಿದೆ.

ಅ.7ರ ಹಮಾಸ್ ದಾಳಿಯ ನಂತರ ಇಸ್ರೇಲ್‌ ಸೈನ್ಯವು ಪಟ್ಟುಬಿಡದೆ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿತ್ತು. ವಿದ್ಯುತ್‌, ನೀರಾವರಿ ಸಂಪರ್ಕಗಳನ್ನು ಕಡಿತಗೊಳಿಸಿತ್ತು. ಇಸ್ರೇಲ್‌ ನಡೆಸಿದ ದಾಳಿಗೆ 15,000ಕ್ಕೂ ಅಧಿಕ ಮಂದಿ ನಾಗರಿಕರು ಗಾಝಾದಲ್ಲಿ ಮೃತಪಟ್ಟಿದ್ದರು. 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಗಾಝಾ ನಿವಾಸಿಗಳು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮನೆಗಳು, ವಾಣಿಜ್ಯ ಕಟ್ಟಡಗಳು, ಆಸ್ಪತ್ರೆಗಳು ಇಸ್ರೇಲ್ ಬಾಂಬ್‌ ದಾಳಿಗೆ ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಹಮಾಸ್‌ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನ ಎಂದು ಹೇಳಿಕೊಂಡಿದೆ. ಆದರೆ ಯುದ್ಧದಲ್ಲಿ 40% ಮಕ್ಕಳು, ಮಹಿಳೆಯರು, ಪತ್ರಕರ್ತರ ಜೀವಗಳನ್ನು ಬಲಿತೆಗೆದುಕೊಂಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಸಮರ್ಥನೆಯ ಬಗ್ಗೆ ಟೀಕೆಗೆ ಗುರಿಯಾಗಿದೆ.

ಗಾಝಾದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಈ ಮೊದಲು ಇಸ್ರೇಲ್ ರಾಯಿಟರ್ಸ್ ಮತ್ತು ಎಎಫ್‌ಪಿಗೆ ಸ್ಪಷ್ಟವಾಗಿ ಹೇಳಿತ್ತು. ಇಸ್ರೇಲ್‌ ರಕ್ಷಣಾ ಪಡೆಯ ಕೈಯಲ್ಲಿ 20 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನ ಕೊಲೆಗಳು ಗಾಝಾದಲ್ಲಿ ಸಂಭವಿಸಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿ (CPJ) ನ.22ಕ್ಕೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಇಸ್ರೇಲ್‌ ಮಿಲಿಟರಿ ಪಡೆಯ ಕೈಯಲ್ಲಿ 53 ಪತ್ರಕರ್ತರು ಸಾವನ್ನಪ್ಪಿದ್ದಾರೆ. 37 ಪ್ಯಾಲೆಸ್ತೀನ್‌ ಪತ್ರಕರ್ತರು, ನಾಲ್ವರು ಇಸ್ರೇಲ್‌ ಮತ್ತು ಓರ್ವ ಲೆಬನಾನ್‌ನ ಪತ್ರಕರ್ತ ಮೃತಪಟ್ಟಿದ್ದಾರೆ. 11 ಪತ್ರಕರ್ತರು ಗಾಯಗೊಂಡಿದ್ದಾರೆ. ಮೂವರು ಪತ್ರಕರ್ತರು ನಾಪತ್ತೆಯಾಗಿದ್ದಾರೆ. 18 ಪತ್ರಕರ್ತರನ್ನು ಬಂಧಿಸಲಾಗಿದೆ ಎಂದು ಸಿಪಿಜೆ ವರದಿ ತಿಳಿಸಿದೆ.

ಪತ್ರಕರ್ತರ ಕುಟುಂಬದ ಸದಸ್ಯರ ಮೇಲೆ ದಾಳಿಗಳು ನಡೆದಿದೆ. ಬೆದರಿಕೆಗಳು ಹಾಕಲಾಗಿದೆ. ಪತ್ರಕರ್ತರ ಕುಟುಂಬಸ್ಥರನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಗಾಝಾ ನಗರದಲ್ಲಿನ ಖಾನ್ ಯೂನಿಸ್‌ ನಗರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಫೆಲಸ್ತೀನ್‌ ಚಾನಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್‌ ಮತ್ತು ಅವರ ಕುಟುಂಬದ 11 ಮಂದಿ ಬಲಿಯಾಗಿದ್ದರು.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್ ಜಝೀರಾ ಅರೇಬಿಕ್ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಅವರ ಪತ್ನಿ, ಮಗ, ಮಗಳು ಮತ್ತು ಮೊಮ್ಮಗ ಸಾವನ್ನಪ್ಪಿದ್ದರು.

ಪತ್ರಿಕಾ ಸ್ವಾತಂತ್ರ್ಯದ ವಿಚಾರದಲ್ಲಿ ಇಸ್ರೇಲ್‌ನ ನಡೆಯು ಏಕಪಕ್ಷೀಯವಾಗಿದೆ. ಎಲ್ಲಾ ಪತ್ರಕರ್ತರನ್ನು ರಕ್ಷಿಸುವ ಅಗತ್ಯವನ್ನು ಇಸ್ರೇಲ್‌ ನಿರ್ಲಕ್ಷಿಸಿದೆ. ಇಸ್ರೇಲ್‌ನ ಸಂಪೂರ್ಣ ನಿಷ್ಕ್ರಿಯತೆಯು ಪತ್ರಿಕಾ ಸ್ವಾತಂತ್ರ್ಯವನ್ನು ನಿಸ್ಸಂಶಯವಾಗಿ ದುರ್ಬಲಗೊಳಿಸುತ್ತದೆ. ಇಸ್ರೇಲ್‌ ನಡೆಯು ಕನಿಷ್ಟ ಪಕ್ಷ ಇಸ್ರೇಲ್‌ ಪಡೆಯಿಂದ ಹತ್ಯೆಯಾದ ಪತ್ರಕರ್ತರು ನ್ಯಾಯಕ್ಕೆ ಯೋಗ್ಯವಾಗಿಲ್ಲ ಎಂಬುವುದನ್ನು ಸೂಚಿಸುತ್ತಿದೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...