Homeಕರ್ನಾಟಕನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ..

- Advertisement -
- Advertisement -

ಕನ್ನಡದ ಜನಪರ ನಟ ಚೇತನ್ ಟ್ವೀಟ್‌ನಲ್ಲಿ ಹೊಸದೇನನ್ನೂ ಹೇಳಿಲ್ಲ. ಆದರೆ ಅವರು ಬ್ರಾಹ್ಮಣ್ಯದ ವಿರುದ್ಧ ಸದಾ ದನಿಯೆತ್ತುತ್ತಿದ್ದರು. ಹಾಗಾಗಿ ಅವರ ಮೇಲೆ ಸುಳ್ಳು ಸಾಕ್ಷಿ ಸೃಷ್ಟಿಸಿ, ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಸಲಾಗಿದೆ. ಏಕೆಂದರೆ ಕೇಶವ ಕೃಪಾದ ನೆರಳೂ ನ್ಯಾಯಾಂಗದ ಮೇಲೆಯೂ ಬಿದ್ದಿದೆ. ಕೋರ್ಟುಗಳು ಜನರ ವೈರಿಗಳಾಗುತ್ತಿವೆ ಮತ್ತು ಕೋರ್ಟುಗಳು ಜನರನ್ನು ಹಾಗೂ ಸಂವಿಧಾನವನ್ನು ನಿಂದನೆ ಮಾಡುತ್ತಿವೆ. ಚೇತನ್ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕೂಡಲೆ ಅವರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕು ಮತ್ತು ಸುಳ್ಳು ಸಾಕ್ಷಿ ಸೃಷ್ಟಿ ಮಾಡಿದ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು. ಇದಕ್ಕಾಗಿ ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗೋಣ”. ಇವಿಷ್ಟು ನಟ ಚೇತನ್ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರಿನ ಅಲುಮ್ನಿ ಸಭಾಂಗಣದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳು ಮತ್ತು ಹಕ್ಕೊತ್ತಾಯಗಳು.

ಹಿರಿಯ ವಕೀಲ್ ಎಸ್. ಬಾಲನ್ ಮಾತನಾಡಿ, “ಟ್ವೀಟ್ ಮಾಡಿದ ಕಾರಣಕ್ಕೆ ಈ ದೇಶದಲ್ಲಿ ಹಲವಾರು ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಿವೆ. ಆದರೆ ಚೇತನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿ ಪೆರಿಯಾರ್ ವಿರುದ್ಧ ಸಹ ಈ ಪ್ರಕರಣ ದಾಖಲಿಸಲಾಗಿತ್ತು. ಈಗ ಚೇತನ್ ಕರ್ನಾಟಕದ ಪೆರಿಯಾರ್ ಆಗಿದ್ದಾರೆ. ಅವರನ್ನು ಯಾವುದೇ ಕಾನೂನುಗಳನ್ನು ಪಾಲಿಸದೇ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ದೂರದಾರ ಇನ್ಸ್‌ಪೆಕ್ಟರ್ ತಾನೇ ಬಂಧಿಸಿ, ತಾನೇ ವಿಚಾರಣೆ ನಡೆಸಿರುವುದು ಕಾನೂನಿನ ಉಲ್ಲಂಘನೆ. ಮನೆಯವರಿಗೂ ತಿಳಿಸದೆ ಅಕ್ರಮವಾಗಿ ಬಂಧಿಸಿ ಯಾರಿಗೂ ತಿಳಿಯದ ಸ್ಥಳದಲ್ಲಿಟ್ಟು ಕಾನೂನು ಉಲ್ಲಂಘಿಸಿದ್ದಾರೆ. ಅವರಿಗೆ ತಡವಾಗಿ ಜಾಮೀನು ಸಿಗುವಂತೆ, ಸಿಕ್ಕರೂ ಬಿಡುಗಡೆ ಮಾಡದಂತೆ ಷಡ್ಯಂತ್ರ ಹೆಣೆಯಲಾಗಿದೆ. ಇದೆಲ್ಲವೂ ಜನಪರ ಚಳವಳಿಗಳನ್ನು ಬೆದರಿಸುವ ಭಾಗವಾಗಿದೆ” ಎಂದರು.

ನಾಳೆ ಚೇತನ್ ಬಿಡುಗಡೆಯಾದ ನಂತರ ಅವರ ಮೇಲಿನ ಸುಳ್ಳು ಬಂಧನ ಮತ್ತು ಅಕ್ರಮ ಬಂಧನದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬೇಕು. ಎರಡನೇಯದಾಗಿ ಕಾನೂನು ಉಲ್ಲಂಘನೆ ಮಾಡಿರುವ ಇನ್ಸ್‌ಪೆಕ್ಟರ್ ರವಿ ವಿರುದ್ದ ಕಮಿಷನರ್‌ಗೆ ದೂರು ದಾಖಲಿಸಿ ಬೇರೆ ಪೊಲೀಸ್ ಠಾಣೆಯಿಂದ ಸ್ವತಂತ್ರ ತನಿಖೆಗೆ ಒತ್ತಾಯಿಸಬೇಕು. ಮೂರನೇಯದಾಗಿ ಹೈಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಬೇಕು. ಈ ಪ್ರಕರಣದಲ್ಲಿ ರಾಜ್ಯವು ಸುಳ್ಳು ದೂರು ದಾಖಲಿಸಿರುವುದರಿಂದ ರಾಜ್ಯವೇ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಬೇಕು ಎಂದರು.

ಹಿರಿಯ ದಲಿತ ಮುಖಂಡರಾದ ಗೋಪಾಲ್‌ರವರು ಮಾತನಾಡಿ, “ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ” ಎಂದರು.

ಚಿಂತಕರಾದ ಶಿವಸುಂದರ್ ಮಾತನಾಡಿ, “ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ 17 ಜನ ಸಾಮಾಜಿಕ ಕಾರ್ಯಕರ್ತರು ಮತ್ತು 21 ಸಂಘಟನೆಗಳು ಹೈಕೋರ್ಟ್‌ಗೆ ಪತ್ರ ಬರೆದಿದ್ದವು. ತದನಂತರ ಅಪರ್ಣ ಭಟ್ ಎಂಬುವವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಮತ್ತು ಮಹಿಳಾ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ಒಂದು ಬಹಿರಂಗ ಪತ್ರ ಬರೆದರು. ಆಗ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ಗೆ ಒಂದು ಪತ್ರ ಬರೆಯಲಾಯಿತು. ಆಗ ಕರ್ನಾಟಕ ಸರ್ಕಾರವೇ ಅರ್ಜಿ ಹಾಕಿ ಕೃಷ್ಣ ದೀಕ್ಷಿತ್ ಅವರ ಹೇಳಿಕೆಗಳನ್ನು ತೆಗೆಯಲು ಮನವಿ ಮಾಡಿತ್ತು. ಅದನ್ನು ತೆಗೆಯಲಾಗಿದೆ. ಹೀಗಿರುವಾಗ ಆ ಕುರಿತು ಟ್ವೀಟ್ ಮಾಡಿದ್ದ ಚೇತನ್‌ ಮೇಲೆ ಎರಡು ವರ್ಷದ ನಂತರ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಿರುವುದು ಜನಪರ ದನಿಗಳನ್ನು ಹತ್ತಿಕ್ಕುವ ಸ್ಪಷ್ಟ ಎಚ್ಚರಿಕೆ ಬಿಟ್ಟರೆ ಬೇರೇನೂ ಅಲ್ಲ” ಎಂದರು.

“ಇಂಗ್ಲೆಂಡ್‌ನಲ್ಲಿನ ಕೆಲ ಪತ್ರಿಕೆಗಳು ನ್ಯಾಯಾಧೀಶರ ಕುರಿತು ಯು ಓಲ್ಡ್ ಫೂಲ್ (ಮುದುಕ ಮೂರ್ಖರು ನೀವು), ಎನಿಮೀಸ್ ಆಫ್ ದಿ ಪೀಪಲ್ (ಜನರ ಶತ್ರುಗಳು) ಎಂದು ಬರೆದಿದ್ದಾಗಲೇ ಅವುಗಳ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ. ಆದರೆ ಭಾರತದಲ್ಲಿ ಜನಪರ ಹೋರಾಟಗಾರರ ಮೇಲೆ ಅದನ್ನು ಬೇಕಾಬಿಟ್ಟಿ ಬಳಸಲಾಗುತ್ತಿದೆ. ಇನ್ನೊಂದೆಡೆ ಸ್ವದೇಶಿ ಜಾಗರಣ್ ಮಂಚ್‌ನ ಅಧ್ಯಕ್ಷ ಎಸ್ ಗುರುಮೂರ್ತಿಯಂತವರು, ಅರುಣ್ ಜೇಟ್ಲಿಯಂತವರು ಮತ್ತು ವಿವೇಕ್ ಅಗ್ನಿಹೋತ್ರಿಯಂತಹ ಸಂಘ ಪರಿವಾರದ ಮುಖಂಡರು ನೇರಾನೇರ ಕೋರ್ಟ್‌ಗಳನ್ನು ಬೈಯ್ದಿದ್ದಾರೆ. ಕೋರ್ಟ್‌ಗಳ ಮೇಲೆ ಆರೋಪ ಮಾಡಿದ್ದಾರೆ. ಆದರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಇಂದು ನ್ಯಾಯಾಂಗವೂ ಕೇಸರಿಕರಣಗೊಂಡಿದೆ” ಎಂದು ಆತಂಕ ವ್ಯಕ್ತಪಡಿಸಿದ ಅವರು ನಾವು ಹೆಚ್ಚು ಹೆಚ್ಚು ಮಾತನಾಡಬೇಕು, ಹೆಚ್ಚು ಹೆಚ್ಚು ಜೈಲಿಗೆ ಹೋಗಲು ಸಿದ್ಧರಾಗಬೇಕು. ಇದು ಮಾತ್ರವೇ ನಮ್ಮ ಮುಂದಿರುವ ಪರಿಹಾರವಾಗಿದೆ ಎಂದರು.

ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮಾತನಾಡಿ, “ಇಂದು ರಾಜ್ಯದಲ್ಲಿ ಮೊದಲ ತಲೆಮಾರಿನ ಮತಗಳನ್ನು ಬಾಚಿಕೊಳ್ಳಲು ಇಲ್ಲದ ಹಿಜಾಬ್ ವಿವಾದವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲೆಡೆ ಕೋಮು ದಳ್ಳೂರಿಗಳನ್ನು ಬಿತ್ತಲಾಗುತ್ತಿದೆ. ನಮ್ಮ ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾಡಲು ಯತ್ನಿಸಲಾಗುತ್ತಿದೆ. ಇದರ ಭಾಗವಾಗಿ ಚೇತನ್‌ ರಂತೆ ಬ್ರಾಹ್ಮಣ್ಯದ ವಿರುದ್ಧ ಮಾತನಾಡುವವರನ್ನು, ಸತ್ಯ ಹೇಳುವವರನ್ನು ಜೈಲಿಗೆ ಹಾಕಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಬೇಕಿದೆ. ಹಾಗಾಗಿ ರಾಜ್ಯದ ಎಲ್ಲಾ ಎಲ್ಲಾ ಸಚಿವರನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಒತ್ತಡ ಹೇರಬೇಕಿದೆ. ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟವನ್ನು ಉಳಿಸಿಕೊಳ್ಳಲು ಒಗ್ಗಟ್ಟಿನ ಪ್ರಯತ್ನ ಮಾಡೋಣ ಎಂದರು.

ಒಟ್ಟಾರೆ ಸಭೆಯಲ್ಲಿ “ಚೇತನ್ ಬಂಧನ ಬಹಳ ಆಘಾತಕಾರಿಯಾಗಿದ್ದು, ಕರ್ನಾಟಕದಲ್ಲಿರುವ ದಲಿತ, ಬಹುಜನರ ಪರವಾಗಿರುವ ದನಿಗಳನ್ನು ಅಡಗಿಸುವ ಪ್ರಯತ್ನವಾಗಿದೆ. ಇದರ ವಿರುದ್ಧ ಎಲ್ಲಾ ಜನಪರ ಸಂಘಟನೆ, ವ್ಯಕ್ತಿಗಳು ಸೇರಿ ಒಗ್ಗೂಡಿ ಚೇತನ್ ಮೇಲಿನ ಪ್ರಕರಣವನ್ನು ಬೇಷರತ್ ಆಗಿ ಸರ್ಕಾರ ವಾಪಸ್ ಪಡೆಯಬೇಕೆಂದು ಆಗ್ರಹ ಹೇರಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಉನ್ನತ ಮಟ್ಟದ ಗಣ್ಯ ಹೋರಾಟಗಾರರ ಸಮಿತಿ ಮಾಡಲು ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಮೇಘ, ಜ್ಯೋತಿ ಅನಂತ ಸುಬ್ಬರಾವ್, ಹೋರಾಟಗಾರರಾದ ಡಿ.ರಾಜಗೋಪಾಲ್, ವಕೀಲರಾದ ನರಸಿಂಹಮೂರ್ತಿ, ಅನಂತ್ ನಾಯಕ್, ಪತ್ರಕರ್ತರಾದ ನವೀನ್ ಸೂರಿಂಜೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಸೇರಿದಂತೆ ಹಲವರಿದ್ದರು.


ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...