Homeಕರ್ನಾಟಕನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ..

- Advertisement -
- Advertisement -

ಕನ್ನಡದ ಜನಪರ ನಟ ಚೇತನ್ ಟ್ವೀಟ್‌ನಲ್ಲಿ ಹೊಸದೇನನ್ನೂ ಹೇಳಿಲ್ಲ. ಆದರೆ ಅವರು ಬ್ರಾಹ್ಮಣ್ಯದ ವಿರುದ್ಧ ಸದಾ ದನಿಯೆತ್ತುತ್ತಿದ್ದರು. ಹಾಗಾಗಿ ಅವರ ಮೇಲೆ ಸುಳ್ಳು ಸಾಕ್ಷಿ ಸೃಷ್ಟಿಸಿ, ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಸಲಾಗಿದೆ. ಏಕೆಂದರೆ ಕೇಶವ ಕೃಪಾದ ನೆರಳೂ ನ್ಯಾಯಾಂಗದ ಮೇಲೆಯೂ ಬಿದ್ದಿದೆ. ಕೋರ್ಟುಗಳು ಜನರ ವೈರಿಗಳಾಗುತ್ತಿವೆ ಮತ್ತು ಕೋರ್ಟುಗಳು ಜನರನ್ನು ಹಾಗೂ ಸಂವಿಧಾನವನ್ನು ನಿಂದನೆ ಮಾಡುತ್ತಿವೆ. ಚೇತನ್ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕೂಡಲೆ ಅವರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕು ಮತ್ತು ಸುಳ್ಳು ಸಾಕ್ಷಿ ಸೃಷ್ಟಿ ಮಾಡಿದ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು. ಇದಕ್ಕಾಗಿ ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗೋಣ”. ಇವಿಷ್ಟು ನಟ ಚೇತನ್ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರಿನ ಅಲುಮ್ನಿ ಸಭಾಂಗಣದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳು ಮತ್ತು ಹಕ್ಕೊತ್ತಾಯಗಳು.

ಹಿರಿಯ ವಕೀಲ್ ಎಸ್. ಬಾಲನ್ ಮಾತನಾಡಿ, “ಟ್ವೀಟ್ ಮಾಡಿದ ಕಾರಣಕ್ಕೆ ಈ ದೇಶದಲ್ಲಿ ಹಲವಾರು ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಿವೆ. ಆದರೆ ಚೇತನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿ ಪೆರಿಯಾರ್ ವಿರುದ್ಧ ಸಹ ಈ ಪ್ರಕರಣ ದಾಖಲಿಸಲಾಗಿತ್ತು. ಈಗ ಚೇತನ್ ಕರ್ನಾಟಕದ ಪೆರಿಯಾರ್ ಆಗಿದ್ದಾರೆ. ಅವರನ್ನು ಯಾವುದೇ ಕಾನೂನುಗಳನ್ನು ಪಾಲಿಸದೇ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ದೂರದಾರ ಇನ್ಸ್‌ಪೆಕ್ಟರ್ ತಾನೇ ಬಂಧಿಸಿ, ತಾನೇ ವಿಚಾರಣೆ ನಡೆಸಿರುವುದು ಕಾನೂನಿನ ಉಲ್ಲಂಘನೆ. ಮನೆಯವರಿಗೂ ತಿಳಿಸದೆ ಅಕ್ರಮವಾಗಿ ಬಂಧಿಸಿ ಯಾರಿಗೂ ತಿಳಿಯದ ಸ್ಥಳದಲ್ಲಿಟ್ಟು ಕಾನೂನು ಉಲ್ಲಂಘಿಸಿದ್ದಾರೆ. ಅವರಿಗೆ ತಡವಾಗಿ ಜಾಮೀನು ಸಿಗುವಂತೆ, ಸಿಕ್ಕರೂ ಬಿಡುಗಡೆ ಮಾಡದಂತೆ ಷಡ್ಯಂತ್ರ ಹೆಣೆಯಲಾಗಿದೆ. ಇದೆಲ್ಲವೂ ಜನಪರ ಚಳವಳಿಗಳನ್ನು ಬೆದರಿಸುವ ಭಾಗವಾಗಿದೆ” ಎಂದರು.

ನಾಳೆ ಚೇತನ್ ಬಿಡುಗಡೆಯಾದ ನಂತರ ಅವರ ಮೇಲಿನ ಸುಳ್ಳು ಬಂಧನ ಮತ್ತು ಅಕ್ರಮ ಬಂಧನದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬೇಕು. ಎರಡನೇಯದಾಗಿ ಕಾನೂನು ಉಲ್ಲಂಘನೆ ಮಾಡಿರುವ ಇನ್ಸ್‌ಪೆಕ್ಟರ್ ರವಿ ವಿರುದ್ದ ಕಮಿಷನರ್‌ಗೆ ದೂರು ದಾಖಲಿಸಿ ಬೇರೆ ಪೊಲೀಸ್ ಠಾಣೆಯಿಂದ ಸ್ವತಂತ್ರ ತನಿಖೆಗೆ ಒತ್ತಾಯಿಸಬೇಕು. ಮೂರನೇಯದಾಗಿ ಹೈಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಬೇಕು. ಈ ಪ್ರಕರಣದಲ್ಲಿ ರಾಜ್ಯವು ಸುಳ್ಳು ದೂರು ದಾಖಲಿಸಿರುವುದರಿಂದ ರಾಜ್ಯವೇ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಬೇಕು ಎಂದರು.

ಹಿರಿಯ ದಲಿತ ಮುಖಂಡರಾದ ಗೋಪಾಲ್‌ರವರು ಮಾತನಾಡಿ, “ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ” ಎಂದರು.

ಚಿಂತಕರಾದ ಶಿವಸುಂದರ್ ಮಾತನಾಡಿ, “ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ 17 ಜನ ಸಾಮಾಜಿಕ ಕಾರ್ಯಕರ್ತರು ಮತ್ತು 21 ಸಂಘಟನೆಗಳು ಹೈಕೋರ್ಟ್‌ಗೆ ಪತ್ರ ಬರೆದಿದ್ದವು. ತದನಂತರ ಅಪರ್ಣ ಭಟ್ ಎಂಬುವವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಮತ್ತು ಮಹಿಳಾ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ಒಂದು ಬಹಿರಂಗ ಪತ್ರ ಬರೆದರು. ಆಗ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ಗೆ ಒಂದು ಪತ್ರ ಬರೆಯಲಾಯಿತು. ಆಗ ಕರ್ನಾಟಕ ಸರ್ಕಾರವೇ ಅರ್ಜಿ ಹಾಕಿ ಕೃಷ್ಣ ದೀಕ್ಷಿತ್ ಅವರ ಹೇಳಿಕೆಗಳನ್ನು ತೆಗೆಯಲು ಮನವಿ ಮಾಡಿತ್ತು. ಅದನ್ನು ತೆಗೆಯಲಾಗಿದೆ. ಹೀಗಿರುವಾಗ ಆ ಕುರಿತು ಟ್ವೀಟ್ ಮಾಡಿದ್ದ ಚೇತನ್‌ ಮೇಲೆ ಎರಡು ವರ್ಷದ ನಂತರ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಿರುವುದು ಜನಪರ ದನಿಗಳನ್ನು ಹತ್ತಿಕ್ಕುವ ಸ್ಪಷ್ಟ ಎಚ್ಚರಿಕೆ ಬಿಟ್ಟರೆ ಬೇರೇನೂ ಅಲ್ಲ” ಎಂದರು.

“ಇಂಗ್ಲೆಂಡ್‌ನಲ್ಲಿನ ಕೆಲ ಪತ್ರಿಕೆಗಳು ನ್ಯಾಯಾಧೀಶರ ಕುರಿತು ಯು ಓಲ್ಡ್ ಫೂಲ್ (ಮುದುಕ ಮೂರ್ಖರು ನೀವು), ಎನಿಮೀಸ್ ಆಫ್ ದಿ ಪೀಪಲ್ (ಜನರ ಶತ್ರುಗಳು) ಎಂದು ಬರೆದಿದ್ದಾಗಲೇ ಅವುಗಳ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ. ಆದರೆ ಭಾರತದಲ್ಲಿ ಜನಪರ ಹೋರಾಟಗಾರರ ಮೇಲೆ ಅದನ್ನು ಬೇಕಾಬಿಟ್ಟಿ ಬಳಸಲಾಗುತ್ತಿದೆ. ಇನ್ನೊಂದೆಡೆ ಸ್ವದೇಶಿ ಜಾಗರಣ್ ಮಂಚ್‌ನ ಅಧ್ಯಕ್ಷ ಎಸ್ ಗುರುಮೂರ್ತಿಯಂತವರು, ಅರುಣ್ ಜೇಟ್ಲಿಯಂತವರು ಮತ್ತು ವಿವೇಕ್ ಅಗ್ನಿಹೋತ್ರಿಯಂತಹ ಸಂಘ ಪರಿವಾರದ ಮುಖಂಡರು ನೇರಾನೇರ ಕೋರ್ಟ್‌ಗಳನ್ನು ಬೈಯ್ದಿದ್ದಾರೆ. ಕೋರ್ಟ್‌ಗಳ ಮೇಲೆ ಆರೋಪ ಮಾಡಿದ್ದಾರೆ. ಆದರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಇಂದು ನ್ಯಾಯಾಂಗವೂ ಕೇಸರಿಕರಣಗೊಂಡಿದೆ” ಎಂದು ಆತಂಕ ವ್ಯಕ್ತಪಡಿಸಿದ ಅವರು ನಾವು ಹೆಚ್ಚು ಹೆಚ್ಚು ಮಾತನಾಡಬೇಕು, ಹೆಚ್ಚು ಹೆಚ್ಚು ಜೈಲಿಗೆ ಹೋಗಲು ಸಿದ್ಧರಾಗಬೇಕು. ಇದು ಮಾತ್ರವೇ ನಮ್ಮ ಮುಂದಿರುವ ಪರಿಹಾರವಾಗಿದೆ ಎಂದರು.

ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮಾತನಾಡಿ, “ಇಂದು ರಾಜ್ಯದಲ್ಲಿ ಮೊದಲ ತಲೆಮಾರಿನ ಮತಗಳನ್ನು ಬಾಚಿಕೊಳ್ಳಲು ಇಲ್ಲದ ಹಿಜಾಬ್ ವಿವಾದವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲೆಡೆ ಕೋಮು ದಳ್ಳೂರಿಗಳನ್ನು ಬಿತ್ತಲಾಗುತ್ತಿದೆ. ನಮ್ಮ ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾಡಲು ಯತ್ನಿಸಲಾಗುತ್ತಿದೆ. ಇದರ ಭಾಗವಾಗಿ ಚೇತನ್‌ ರಂತೆ ಬ್ರಾಹ್ಮಣ್ಯದ ವಿರುದ್ಧ ಮಾತನಾಡುವವರನ್ನು, ಸತ್ಯ ಹೇಳುವವರನ್ನು ಜೈಲಿಗೆ ಹಾಕಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಬೇಕಿದೆ. ಹಾಗಾಗಿ ರಾಜ್ಯದ ಎಲ್ಲಾ ಎಲ್ಲಾ ಸಚಿವರನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಒತ್ತಡ ಹೇರಬೇಕಿದೆ. ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟವನ್ನು ಉಳಿಸಿಕೊಳ್ಳಲು ಒಗ್ಗಟ್ಟಿನ ಪ್ರಯತ್ನ ಮಾಡೋಣ ಎಂದರು.

ಒಟ್ಟಾರೆ ಸಭೆಯಲ್ಲಿ “ಚೇತನ್ ಬಂಧನ ಬಹಳ ಆಘಾತಕಾರಿಯಾಗಿದ್ದು, ಕರ್ನಾಟಕದಲ್ಲಿರುವ ದಲಿತ, ಬಹುಜನರ ಪರವಾಗಿರುವ ದನಿಗಳನ್ನು ಅಡಗಿಸುವ ಪ್ರಯತ್ನವಾಗಿದೆ. ಇದರ ವಿರುದ್ಧ ಎಲ್ಲಾ ಜನಪರ ಸಂಘಟನೆ, ವ್ಯಕ್ತಿಗಳು ಸೇರಿ ಒಗ್ಗೂಡಿ ಚೇತನ್ ಮೇಲಿನ ಪ್ರಕರಣವನ್ನು ಬೇಷರತ್ ಆಗಿ ಸರ್ಕಾರ ವಾಪಸ್ ಪಡೆಯಬೇಕೆಂದು ಆಗ್ರಹ ಹೇರಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಉನ್ನತ ಮಟ್ಟದ ಗಣ್ಯ ಹೋರಾಟಗಾರರ ಸಮಿತಿ ಮಾಡಲು ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಮೇಘ, ಜ್ಯೋತಿ ಅನಂತ ಸುಬ್ಬರಾವ್, ಹೋರಾಟಗಾರರಾದ ಡಿ.ರಾಜಗೋಪಾಲ್, ವಕೀಲರಾದ ನರಸಿಂಹಮೂರ್ತಿ, ಅನಂತ್ ನಾಯಕ್, ಪತ್ರಕರ್ತರಾದ ನವೀನ್ ಸೂರಿಂಜೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಸೇರಿದಂತೆ ಹಲವರಿದ್ದರು.


ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...