Homeಕರ್ನಾಟಕನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ..

- Advertisement -
- Advertisement -

ಕನ್ನಡದ ಜನಪರ ನಟ ಚೇತನ್ ಟ್ವೀಟ್‌ನಲ್ಲಿ ಹೊಸದೇನನ್ನೂ ಹೇಳಿಲ್ಲ. ಆದರೆ ಅವರು ಬ್ರಾಹ್ಮಣ್ಯದ ವಿರುದ್ಧ ಸದಾ ದನಿಯೆತ್ತುತ್ತಿದ್ದರು. ಹಾಗಾಗಿ ಅವರ ಮೇಲೆ ಸುಳ್ಳು ಸಾಕ್ಷಿ ಸೃಷ್ಟಿಸಿ, ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಸಲಾಗಿದೆ. ಏಕೆಂದರೆ ಕೇಶವ ಕೃಪಾದ ನೆರಳೂ ನ್ಯಾಯಾಂಗದ ಮೇಲೆಯೂ ಬಿದ್ದಿದೆ. ಕೋರ್ಟುಗಳು ಜನರ ವೈರಿಗಳಾಗುತ್ತಿವೆ ಮತ್ತು ಕೋರ್ಟುಗಳು ಜನರನ್ನು ಹಾಗೂ ಸಂವಿಧಾನವನ್ನು ನಿಂದನೆ ಮಾಡುತ್ತಿವೆ. ಚೇತನ್ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕೂಡಲೆ ಅವರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕು ಮತ್ತು ಸುಳ್ಳು ಸಾಕ್ಷಿ ಸೃಷ್ಟಿ ಮಾಡಿದ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು. ಇದಕ್ಕಾಗಿ ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗೋಣ”. ಇವಿಷ್ಟು ನಟ ಚೇತನ್ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರಿನ ಅಲುಮ್ನಿ ಸಭಾಂಗಣದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳು ಮತ್ತು ಹಕ್ಕೊತ್ತಾಯಗಳು.

ಹಿರಿಯ ವಕೀಲ್ ಎಸ್. ಬಾಲನ್ ಮಾತನಾಡಿ, “ಟ್ವೀಟ್ ಮಾಡಿದ ಕಾರಣಕ್ಕೆ ಈ ದೇಶದಲ್ಲಿ ಹಲವಾರು ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಿವೆ. ಆದರೆ ಚೇತನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿ ಪೆರಿಯಾರ್ ವಿರುದ್ಧ ಸಹ ಈ ಪ್ರಕರಣ ದಾಖಲಿಸಲಾಗಿತ್ತು. ಈಗ ಚೇತನ್ ಕರ್ನಾಟಕದ ಪೆರಿಯಾರ್ ಆಗಿದ್ದಾರೆ. ಅವರನ್ನು ಯಾವುದೇ ಕಾನೂನುಗಳನ್ನು ಪಾಲಿಸದೇ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ದೂರದಾರ ಇನ್ಸ್‌ಪೆಕ್ಟರ್ ತಾನೇ ಬಂಧಿಸಿ, ತಾನೇ ವಿಚಾರಣೆ ನಡೆಸಿರುವುದು ಕಾನೂನಿನ ಉಲ್ಲಂಘನೆ. ಮನೆಯವರಿಗೂ ತಿಳಿಸದೆ ಅಕ್ರಮವಾಗಿ ಬಂಧಿಸಿ ಯಾರಿಗೂ ತಿಳಿಯದ ಸ್ಥಳದಲ್ಲಿಟ್ಟು ಕಾನೂನು ಉಲ್ಲಂಘಿಸಿದ್ದಾರೆ. ಅವರಿಗೆ ತಡವಾಗಿ ಜಾಮೀನು ಸಿಗುವಂತೆ, ಸಿಕ್ಕರೂ ಬಿಡುಗಡೆ ಮಾಡದಂತೆ ಷಡ್ಯಂತ್ರ ಹೆಣೆಯಲಾಗಿದೆ. ಇದೆಲ್ಲವೂ ಜನಪರ ಚಳವಳಿಗಳನ್ನು ಬೆದರಿಸುವ ಭಾಗವಾಗಿದೆ” ಎಂದರು.

ನಾಳೆ ಚೇತನ್ ಬಿಡುಗಡೆಯಾದ ನಂತರ ಅವರ ಮೇಲಿನ ಸುಳ್ಳು ಬಂಧನ ಮತ್ತು ಅಕ್ರಮ ಬಂಧನದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬೇಕು. ಎರಡನೇಯದಾಗಿ ಕಾನೂನು ಉಲ್ಲಂಘನೆ ಮಾಡಿರುವ ಇನ್ಸ್‌ಪೆಕ್ಟರ್ ರವಿ ವಿರುದ್ದ ಕಮಿಷನರ್‌ಗೆ ದೂರು ದಾಖಲಿಸಿ ಬೇರೆ ಪೊಲೀಸ್ ಠಾಣೆಯಿಂದ ಸ್ವತಂತ್ರ ತನಿಖೆಗೆ ಒತ್ತಾಯಿಸಬೇಕು. ಮೂರನೇಯದಾಗಿ ಹೈಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಬೇಕು. ಈ ಪ್ರಕರಣದಲ್ಲಿ ರಾಜ್ಯವು ಸುಳ್ಳು ದೂರು ದಾಖಲಿಸಿರುವುದರಿಂದ ರಾಜ್ಯವೇ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಬೇಕು ಎಂದರು.

ಹಿರಿಯ ದಲಿತ ಮುಖಂಡರಾದ ಗೋಪಾಲ್‌ರವರು ಮಾತನಾಡಿ, “ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ” ಎಂದರು.

ಚಿಂತಕರಾದ ಶಿವಸುಂದರ್ ಮಾತನಾಡಿ, “ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ 17 ಜನ ಸಾಮಾಜಿಕ ಕಾರ್ಯಕರ್ತರು ಮತ್ತು 21 ಸಂಘಟನೆಗಳು ಹೈಕೋರ್ಟ್‌ಗೆ ಪತ್ರ ಬರೆದಿದ್ದವು. ತದನಂತರ ಅಪರ್ಣ ಭಟ್ ಎಂಬುವವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಮತ್ತು ಮಹಿಳಾ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ಒಂದು ಬಹಿರಂಗ ಪತ್ರ ಬರೆದರು. ಆಗ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ಗೆ ಒಂದು ಪತ್ರ ಬರೆಯಲಾಯಿತು. ಆಗ ಕರ್ನಾಟಕ ಸರ್ಕಾರವೇ ಅರ್ಜಿ ಹಾಕಿ ಕೃಷ್ಣ ದೀಕ್ಷಿತ್ ಅವರ ಹೇಳಿಕೆಗಳನ್ನು ತೆಗೆಯಲು ಮನವಿ ಮಾಡಿತ್ತು. ಅದನ್ನು ತೆಗೆಯಲಾಗಿದೆ. ಹೀಗಿರುವಾಗ ಆ ಕುರಿತು ಟ್ವೀಟ್ ಮಾಡಿದ್ದ ಚೇತನ್‌ ಮೇಲೆ ಎರಡು ವರ್ಷದ ನಂತರ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಿರುವುದು ಜನಪರ ದನಿಗಳನ್ನು ಹತ್ತಿಕ್ಕುವ ಸ್ಪಷ್ಟ ಎಚ್ಚರಿಕೆ ಬಿಟ್ಟರೆ ಬೇರೇನೂ ಅಲ್ಲ” ಎಂದರು.

“ಇಂಗ್ಲೆಂಡ್‌ನಲ್ಲಿನ ಕೆಲ ಪತ್ರಿಕೆಗಳು ನ್ಯಾಯಾಧೀಶರ ಕುರಿತು ಯು ಓಲ್ಡ್ ಫೂಲ್ (ಮುದುಕ ಮೂರ್ಖರು ನೀವು), ಎನಿಮೀಸ್ ಆಫ್ ದಿ ಪೀಪಲ್ (ಜನರ ಶತ್ರುಗಳು) ಎಂದು ಬರೆದಿದ್ದಾಗಲೇ ಅವುಗಳ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ. ಆದರೆ ಭಾರತದಲ್ಲಿ ಜನಪರ ಹೋರಾಟಗಾರರ ಮೇಲೆ ಅದನ್ನು ಬೇಕಾಬಿಟ್ಟಿ ಬಳಸಲಾಗುತ್ತಿದೆ. ಇನ್ನೊಂದೆಡೆ ಸ್ವದೇಶಿ ಜಾಗರಣ್ ಮಂಚ್‌ನ ಅಧ್ಯಕ್ಷ ಎಸ್ ಗುರುಮೂರ್ತಿಯಂತವರು, ಅರುಣ್ ಜೇಟ್ಲಿಯಂತವರು ಮತ್ತು ವಿವೇಕ್ ಅಗ್ನಿಹೋತ್ರಿಯಂತಹ ಸಂಘ ಪರಿವಾರದ ಮುಖಂಡರು ನೇರಾನೇರ ಕೋರ್ಟ್‌ಗಳನ್ನು ಬೈಯ್ದಿದ್ದಾರೆ. ಕೋರ್ಟ್‌ಗಳ ಮೇಲೆ ಆರೋಪ ಮಾಡಿದ್ದಾರೆ. ಆದರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಇಂದು ನ್ಯಾಯಾಂಗವೂ ಕೇಸರಿಕರಣಗೊಂಡಿದೆ” ಎಂದು ಆತಂಕ ವ್ಯಕ್ತಪಡಿಸಿದ ಅವರು ನಾವು ಹೆಚ್ಚು ಹೆಚ್ಚು ಮಾತನಾಡಬೇಕು, ಹೆಚ್ಚು ಹೆಚ್ಚು ಜೈಲಿಗೆ ಹೋಗಲು ಸಿದ್ಧರಾಗಬೇಕು. ಇದು ಮಾತ್ರವೇ ನಮ್ಮ ಮುಂದಿರುವ ಪರಿಹಾರವಾಗಿದೆ ಎಂದರು.

ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮಾತನಾಡಿ, “ಇಂದು ರಾಜ್ಯದಲ್ಲಿ ಮೊದಲ ತಲೆಮಾರಿನ ಮತಗಳನ್ನು ಬಾಚಿಕೊಳ್ಳಲು ಇಲ್ಲದ ಹಿಜಾಬ್ ವಿವಾದವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲೆಡೆ ಕೋಮು ದಳ್ಳೂರಿಗಳನ್ನು ಬಿತ್ತಲಾಗುತ್ತಿದೆ. ನಮ್ಮ ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾಡಲು ಯತ್ನಿಸಲಾಗುತ್ತಿದೆ. ಇದರ ಭಾಗವಾಗಿ ಚೇತನ್‌ ರಂತೆ ಬ್ರಾಹ್ಮಣ್ಯದ ವಿರುದ್ಧ ಮಾತನಾಡುವವರನ್ನು, ಸತ್ಯ ಹೇಳುವವರನ್ನು ಜೈಲಿಗೆ ಹಾಕಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಬೇಕಿದೆ. ಹಾಗಾಗಿ ರಾಜ್ಯದ ಎಲ್ಲಾ ಎಲ್ಲಾ ಸಚಿವರನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಒತ್ತಡ ಹೇರಬೇಕಿದೆ. ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟವನ್ನು ಉಳಿಸಿಕೊಳ್ಳಲು ಒಗ್ಗಟ್ಟಿನ ಪ್ರಯತ್ನ ಮಾಡೋಣ ಎಂದರು.

ಒಟ್ಟಾರೆ ಸಭೆಯಲ್ಲಿ “ಚೇತನ್ ಬಂಧನ ಬಹಳ ಆಘಾತಕಾರಿಯಾಗಿದ್ದು, ಕರ್ನಾಟಕದಲ್ಲಿರುವ ದಲಿತ, ಬಹುಜನರ ಪರವಾಗಿರುವ ದನಿಗಳನ್ನು ಅಡಗಿಸುವ ಪ್ರಯತ್ನವಾಗಿದೆ. ಇದರ ವಿರುದ್ಧ ಎಲ್ಲಾ ಜನಪರ ಸಂಘಟನೆ, ವ್ಯಕ್ತಿಗಳು ಸೇರಿ ಒಗ್ಗೂಡಿ ಚೇತನ್ ಮೇಲಿನ ಪ್ರಕರಣವನ್ನು ಬೇಷರತ್ ಆಗಿ ಸರ್ಕಾರ ವಾಪಸ್ ಪಡೆಯಬೇಕೆಂದು ಆಗ್ರಹ ಹೇರಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಉನ್ನತ ಮಟ್ಟದ ಗಣ್ಯ ಹೋರಾಟಗಾರರ ಸಮಿತಿ ಮಾಡಲು ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಮೇಘ, ಜ್ಯೋತಿ ಅನಂತ ಸುಬ್ಬರಾವ್, ಹೋರಾಟಗಾರರಾದ ಡಿ.ರಾಜಗೋಪಾಲ್, ವಕೀಲರಾದ ನರಸಿಂಹಮೂರ್ತಿ, ಅನಂತ್ ನಾಯಕ್, ಪತ್ರಕರ್ತರಾದ ನವೀನ್ ಸೂರಿಂಜೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಸೇರಿದಂತೆ ಹಲವರಿದ್ದರು.


ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...