Homeಕರ್ನಾಟಕನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ..

- Advertisement -
- Advertisement -

ಕನ್ನಡದ ಜನಪರ ನಟ ಚೇತನ್ ಟ್ವೀಟ್‌ನಲ್ಲಿ ಹೊಸದೇನನ್ನೂ ಹೇಳಿಲ್ಲ. ಆದರೆ ಅವರು ಬ್ರಾಹ್ಮಣ್ಯದ ವಿರುದ್ಧ ಸದಾ ದನಿಯೆತ್ತುತ್ತಿದ್ದರು. ಹಾಗಾಗಿ ಅವರ ಮೇಲೆ ಸುಳ್ಳು ಸಾಕ್ಷಿ ಸೃಷ್ಟಿಸಿ, ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಸಲಾಗಿದೆ. ಏಕೆಂದರೆ ಕೇಶವ ಕೃಪಾದ ನೆರಳೂ ನ್ಯಾಯಾಂಗದ ಮೇಲೆಯೂ ಬಿದ್ದಿದೆ. ಕೋರ್ಟುಗಳು ಜನರ ವೈರಿಗಳಾಗುತ್ತಿವೆ ಮತ್ತು ಕೋರ್ಟುಗಳು ಜನರನ್ನು ಹಾಗೂ ಸಂವಿಧಾನವನ್ನು ನಿಂದನೆ ಮಾಡುತ್ತಿವೆ. ಚೇತನ್ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕೂಡಲೆ ಅವರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕು ಮತ್ತು ಸುಳ್ಳು ಸಾಕ್ಷಿ ಸೃಷ್ಟಿ ಮಾಡಿದ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು. ಇದಕ್ಕಾಗಿ ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗೋಣ”. ಇವಿಷ್ಟು ನಟ ಚೇತನ್ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರಿನ ಅಲುಮ್ನಿ ಸಭಾಂಗಣದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳು ಮತ್ತು ಹಕ್ಕೊತ್ತಾಯಗಳು.

ಹಿರಿಯ ವಕೀಲ್ ಎಸ್. ಬಾಲನ್ ಮಾತನಾಡಿ, “ಟ್ವೀಟ್ ಮಾಡಿದ ಕಾರಣಕ್ಕೆ ಈ ದೇಶದಲ್ಲಿ ಹಲವಾರು ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಿವೆ. ಆದರೆ ಚೇತನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿ ಪೆರಿಯಾರ್ ವಿರುದ್ಧ ಸಹ ಈ ಪ್ರಕರಣ ದಾಖಲಿಸಲಾಗಿತ್ತು. ಈಗ ಚೇತನ್ ಕರ್ನಾಟಕದ ಪೆರಿಯಾರ್ ಆಗಿದ್ದಾರೆ. ಅವರನ್ನು ಯಾವುದೇ ಕಾನೂನುಗಳನ್ನು ಪಾಲಿಸದೇ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ದೂರದಾರ ಇನ್ಸ್‌ಪೆಕ್ಟರ್ ತಾನೇ ಬಂಧಿಸಿ, ತಾನೇ ವಿಚಾರಣೆ ನಡೆಸಿರುವುದು ಕಾನೂನಿನ ಉಲ್ಲಂಘನೆ. ಮನೆಯವರಿಗೂ ತಿಳಿಸದೆ ಅಕ್ರಮವಾಗಿ ಬಂಧಿಸಿ ಯಾರಿಗೂ ತಿಳಿಯದ ಸ್ಥಳದಲ್ಲಿಟ್ಟು ಕಾನೂನು ಉಲ್ಲಂಘಿಸಿದ್ದಾರೆ. ಅವರಿಗೆ ತಡವಾಗಿ ಜಾಮೀನು ಸಿಗುವಂತೆ, ಸಿಕ್ಕರೂ ಬಿಡುಗಡೆ ಮಾಡದಂತೆ ಷಡ್ಯಂತ್ರ ಹೆಣೆಯಲಾಗಿದೆ. ಇದೆಲ್ಲವೂ ಜನಪರ ಚಳವಳಿಗಳನ್ನು ಬೆದರಿಸುವ ಭಾಗವಾಗಿದೆ” ಎಂದರು.

ನಾಳೆ ಚೇತನ್ ಬಿಡುಗಡೆಯಾದ ನಂತರ ಅವರ ಮೇಲಿನ ಸುಳ್ಳು ಬಂಧನ ಮತ್ತು ಅಕ್ರಮ ಬಂಧನದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬೇಕು. ಎರಡನೇಯದಾಗಿ ಕಾನೂನು ಉಲ್ಲಂಘನೆ ಮಾಡಿರುವ ಇನ್ಸ್‌ಪೆಕ್ಟರ್ ರವಿ ವಿರುದ್ದ ಕಮಿಷನರ್‌ಗೆ ದೂರು ದಾಖಲಿಸಿ ಬೇರೆ ಪೊಲೀಸ್ ಠಾಣೆಯಿಂದ ಸ್ವತಂತ್ರ ತನಿಖೆಗೆ ಒತ್ತಾಯಿಸಬೇಕು. ಮೂರನೇಯದಾಗಿ ಹೈಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಬೇಕು. ಈ ಪ್ರಕರಣದಲ್ಲಿ ರಾಜ್ಯವು ಸುಳ್ಳು ದೂರು ದಾಖಲಿಸಿರುವುದರಿಂದ ರಾಜ್ಯವೇ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಬೇಕು ಎಂದರು.

ಹಿರಿಯ ದಲಿತ ಮುಖಂಡರಾದ ಗೋಪಾಲ್‌ರವರು ಮಾತನಾಡಿ, “ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ” ಎಂದರು.

ಚಿಂತಕರಾದ ಶಿವಸುಂದರ್ ಮಾತನಾಡಿ, “ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ 17 ಜನ ಸಾಮಾಜಿಕ ಕಾರ್ಯಕರ್ತರು ಮತ್ತು 21 ಸಂಘಟನೆಗಳು ಹೈಕೋರ್ಟ್‌ಗೆ ಪತ್ರ ಬರೆದಿದ್ದವು. ತದನಂತರ ಅಪರ್ಣ ಭಟ್ ಎಂಬುವವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಮತ್ತು ಮಹಿಳಾ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ಒಂದು ಬಹಿರಂಗ ಪತ್ರ ಬರೆದರು. ಆಗ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ಗೆ ಒಂದು ಪತ್ರ ಬರೆಯಲಾಯಿತು. ಆಗ ಕರ್ನಾಟಕ ಸರ್ಕಾರವೇ ಅರ್ಜಿ ಹಾಕಿ ಕೃಷ್ಣ ದೀಕ್ಷಿತ್ ಅವರ ಹೇಳಿಕೆಗಳನ್ನು ತೆಗೆಯಲು ಮನವಿ ಮಾಡಿತ್ತು. ಅದನ್ನು ತೆಗೆಯಲಾಗಿದೆ. ಹೀಗಿರುವಾಗ ಆ ಕುರಿತು ಟ್ವೀಟ್ ಮಾಡಿದ್ದ ಚೇತನ್‌ ಮೇಲೆ ಎರಡು ವರ್ಷದ ನಂತರ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಿರುವುದು ಜನಪರ ದನಿಗಳನ್ನು ಹತ್ತಿಕ್ಕುವ ಸ್ಪಷ್ಟ ಎಚ್ಚರಿಕೆ ಬಿಟ್ಟರೆ ಬೇರೇನೂ ಅಲ್ಲ” ಎಂದರು.

“ಇಂಗ್ಲೆಂಡ್‌ನಲ್ಲಿನ ಕೆಲ ಪತ್ರಿಕೆಗಳು ನ್ಯಾಯಾಧೀಶರ ಕುರಿತು ಯು ಓಲ್ಡ್ ಫೂಲ್ (ಮುದುಕ ಮೂರ್ಖರು ನೀವು), ಎನಿಮೀಸ್ ಆಫ್ ದಿ ಪೀಪಲ್ (ಜನರ ಶತ್ರುಗಳು) ಎಂದು ಬರೆದಿದ್ದಾಗಲೇ ಅವುಗಳ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ. ಆದರೆ ಭಾರತದಲ್ಲಿ ಜನಪರ ಹೋರಾಟಗಾರರ ಮೇಲೆ ಅದನ್ನು ಬೇಕಾಬಿಟ್ಟಿ ಬಳಸಲಾಗುತ್ತಿದೆ. ಇನ್ನೊಂದೆಡೆ ಸ್ವದೇಶಿ ಜಾಗರಣ್ ಮಂಚ್‌ನ ಅಧ್ಯಕ್ಷ ಎಸ್ ಗುರುಮೂರ್ತಿಯಂತವರು, ಅರುಣ್ ಜೇಟ್ಲಿಯಂತವರು ಮತ್ತು ವಿವೇಕ್ ಅಗ್ನಿಹೋತ್ರಿಯಂತಹ ಸಂಘ ಪರಿವಾರದ ಮುಖಂಡರು ನೇರಾನೇರ ಕೋರ್ಟ್‌ಗಳನ್ನು ಬೈಯ್ದಿದ್ದಾರೆ. ಕೋರ್ಟ್‌ಗಳ ಮೇಲೆ ಆರೋಪ ಮಾಡಿದ್ದಾರೆ. ಆದರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಇಂದು ನ್ಯಾಯಾಂಗವೂ ಕೇಸರಿಕರಣಗೊಂಡಿದೆ” ಎಂದು ಆತಂಕ ವ್ಯಕ್ತಪಡಿಸಿದ ಅವರು ನಾವು ಹೆಚ್ಚು ಹೆಚ್ಚು ಮಾತನಾಡಬೇಕು, ಹೆಚ್ಚು ಹೆಚ್ಚು ಜೈಲಿಗೆ ಹೋಗಲು ಸಿದ್ಧರಾಗಬೇಕು. ಇದು ಮಾತ್ರವೇ ನಮ್ಮ ಮುಂದಿರುವ ಪರಿಹಾರವಾಗಿದೆ ಎಂದರು.

ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮಾತನಾಡಿ, “ಇಂದು ರಾಜ್ಯದಲ್ಲಿ ಮೊದಲ ತಲೆಮಾರಿನ ಮತಗಳನ್ನು ಬಾಚಿಕೊಳ್ಳಲು ಇಲ್ಲದ ಹಿಜಾಬ್ ವಿವಾದವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲೆಡೆ ಕೋಮು ದಳ್ಳೂರಿಗಳನ್ನು ಬಿತ್ತಲಾಗುತ್ತಿದೆ. ನಮ್ಮ ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾಡಲು ಯತ್ನಿಸಲಾಗುತ್ತಿದೆ. ಇದರ ಭಾಗವಾಗಿ ಚೇತನ್‌ ರಂತೆ ಬ್ರಾಹ್ಮಣ್ಯದ ವಿರುದ್ಧ ಮಾತನಾಡುವವರನ್ನು, ಸತ್ಯ ಹೇಳುವವರನ್ನು ಜೈಲಿಗೆ ಹಾಕಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಬೇಕಿದೆ. ಹಾಗಾಗಿ ರಾಜ್ಯದ ಎಲ್ಲಾ ಎಲ್ಲಾ ಸಚಿವರನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಒತ್ತಡ ಹೇರಬೇಕಿದೆ. ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟವನ್ನು ಉಳಿಸಿಕೊಳ್ಳಲು ಒಗ್ಗಟ್ಟಿನ ಪ್ರಯತ್ನ ಮಾಡೋಣ ಎಂದರು.

ಒಟ್ಟಾರೆ ಸಭೆಯಲ್ಲಿ “ಚೇತನ್ ಬಂಧನ ಬಹಳ ಆಘಾತಕಾರಿಯಾಗಿದ್ದು, ಕರ್ನಾಟಕದಲ್ಲಿರುವ ದಲಿತ, ಬಹುಜನರ ಪರವಾಗಿರುವ ದನಿಗಳನ್ನು ಅಡಗಿಸುವ ಪ್ರಯತ್ನವಾಗಿದೆ. ಇದರ ವಿರುದ್ಧ ಎಲ್ಲಾ ಜನಪರ ಸಂಘಟನೆ, ವ್ಯಕ್ತಿಗಳು ಸೇರಿ ಒಗ್ಗೂಡಿ ಚೇತನ್ ಮೇಲಿನ ಪ್ರಕರಣವನ್ನು ಬೇಷರತ್ ಆಗಿ ಸರ್ಕಾರ ವಾಪಸ್ ಪಡೆಯಬೇಕೆಂದು ಆಗ್ರಹ ಹೇರಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಉನ್ನತ ಮಟ್ಟದ ಗಣ್ಯ ಹೋರಾಟಗಾರರ ಸಮಿತಿ ಮಾಡಲು ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಮೇಘ, ಜ್ಯೋತಿ ಅನಂತ ಸುಬ್ಬರಾವ್, ಹೋರಾಟಗಾರರಾದ ಡಿ.ರಾಜಗೋಪಾಲ್, ವಕೀಲರಾದ ನರಸಿಂಹಮೂರ್ತಿ, ಅನಂತ್ ನಾಯಕ್, ಪತ್ರಕರ್ತರಾದ ನವೀನ್ ಸೂರಿಂಜೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಸೇರಿದಂತೆ ಹಲವರಿದ್ದರು.


ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...