Homeಕರ್ನಾಟಕನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು: ನಟ ಚೇತನ್ ಮೇಲಿನ ಕೇಸ್ ವಾಪಸಾತಿಗೆ ಒಕ್ಕೊರಲ ಆಗ್ರಹ

ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ..

- Advertisement -
- Advertisement -

ಕನ್ನಡದ ಜನಪರ ನಟ ಚೇತನ್ ಟ್ವೀಟ್‌ನಲ್ಲಿ ಹೊಸದೇನನ್ನೂ ಹೇಳಿಲ್ಲ. ಆದರೆ ಅವರು ಬ್ರಾಹ್ಮಣ್ಯದ ವಿರುದ್ಧ ಸದಾ ದನಿಯೆತ್ತುತ್ತಿದ್ದರು. ಹಾಗಾಗಿ ಅವರ ಮೇಲೆ ಸುಳ್ಳು ಸಾಕ್ಷಿ ಸೃಷ್ಟಿಸಿ, ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಸಲಾಗಿದೆ. ಏಕೆಂದರೆ ಕೇಶವ ಕೃಪಾದ ನೆರಳೂ ನ್ಯಾಯಾಂಗದ ಮೇಲೆಯೂ ಬಿದ್ದಿದೆ. ಕೋರ್ಟುಗಳು ಜನರ ವೈರಿಗಳಾಗುತ್ತಿವೆ ಮತ್ತು ಕೋರ್ಟುಗಳು ಜನರನ್ನು ಹಾಗೂ ಸಂವಿಧಾನವನ್ನು ನಿಂದನೆ ಮಾಡುತ್ತಿವೆ. ಚೇತನ್ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕೂಡಲೆ ಅವರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕು ಮತ್ತು ಸುಳ್ಳು ಸಾಕ್ಷಿ ಸೃಷ್ಟಿ ಮಾಡಿದ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು. ಇದಕ್ಕಾಗಿ ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗೋಣ”. ಇವಿಷ್ಟು ನಟ ಚೇತನ್ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರಿನ ಅಲುಮ್ನಿ ಸಭಾಂಗಣದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳು ಮತ್ತು ಹಕ್ಕೊತ್ತಾಯಗಳು.

ಹಿರಿಯ ವಕೀಲ್ ಎಸ್. ಬಾಲನ್ ಮಾತನಾಡಿ, “ಟ್ವೀಟ್ ಮಾಡಿದ ಕಾರಣಕ್ಕೆ ಈ ದೇಶದಲ್ಲಿ ಹಲವಾರು ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಿವೆ. ಆದರೆ ಚೇತನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿ ಪೆರಿಯಾರ್ ವಿರುದ್ಧ ಸಹ ಈ ಪ್ರಕರಣ ದಾಖಲಿಸಲಾಗಿತ್ತು. ಈಗ ಚೇತನ್ ಕರ್ನಾಟಕದ ಪೆರಿಯಾರ್ ಆಗಿದ್ದಾರೆ. ಅವರನ್ನು ಯಾವುದೇ ಕಾನೂನುಗಳನ್ನು ಪಾಲಿಸದೇ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ದೂರದಾರ ಇನ್ಸ್‌ಪೆಕ್ಟರ್ ತಾನೇ ಬಂಧಿಸಿ, ತಾನೇ ವಿಚಾರಣೆ ನಡೆಸಿರುವುದು ಕಾನೂನಿನ ಉಲ್ಲಂಘನೆ. ಮನೆಯವರಿಗೂ ತಿಳಿಸದೆ ಅಕ್ರಮವಾಗಿ ಬಂಧಿಸಿ ಯಾರಿಗೂ ತಿಳಿಯದ ಸ್ಥಳದಲ್ಲಿಟ್ಟು ಕಾನೂನು ಉಲ್ಲಂಘಿಸಿದ್ದಾರೆ. ಅವರಿಗೆ ತಡವಾಗಿ ಜಾಮೀನು ಸಿಗುವಂತೆ, ಸಿಕ್ಕರೂ ಬಿಡುಗಡೆ ಮಾಡದಂತೆ ಷಡ್ಯಂತ್ರ ಹೆಣೆಯಲಾಗಿದೆ. ಇದೆಲ್ಲವೂ ಜನಪರ ಚಳವಳಿಗಳನ್ನು ಬೆದರಿಸುವ ಭಾಗವಾಗಿದೆ” ಎಂದರು.

ನಾಳೆ ಚೇತನ್ ಬಿಡುಗಡೆಯಾದ ನಂತರ ಅವರ ಮೇಲಿನ ಸುಳ್ಳು ಬಂಧನ ಮತ್ತು ಅಕ್ರಮ ಬಂಧನದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬೇಕು. ಎರಡನೇಯದಾಗಿ ಕಾನೂನು ಉಲ್ಲಂಘನೆ ಮಾಡಿರುವ ಇನ್ಸ್‌ಪೆಕ್ಟರ್ ರವಿ ವಿರುದ್ದ ಕಮಿಷನರ್‌ಗೆ ದೂರು ದಾಖಲಿಸಿ ಬೇರೆ ಪೊಲೀಸ್ ಠಾಣೆಯಿಂದ ಸ್ವತಂತ್ರ ತನಿಖೆಗೆ ಒತ್ತಾಯಿಸಬೇಕು. ಮೂರನೇಯದಾಗಿ ಹೈಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಬೇಕು. ಈ ಪ್ರಕರಣದಲ್ಲಿ ರಾಜ್ಯವು ಸುಳ್ಳು ದೂರು ದಾಖಲಿಸಿರುವುದರಿಂದ ರಾಜ್ಯವೇ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಬೇಕು ಎಂದರು.

ಹಿರಿಯ ದಲಿತ ಮುಖಂಡರಾದ ಗೋಪಾಲ್‌ರವರು ಮಾತನಾಡಿ, “ಚೇತನ್‌ರವರು ಜೈಲಿನಲ್ಲಿ ಅನಿಲೇಶನ್ ಆಫ್ ಕ್ಯಾಸ್ಟ್ ಪುಸ್ತಕ ಓದುತ್ತಿದ್ದಾರೆ. ಜೈಲಿನಿಂದ ಹೊರಬಂದ ನಂತರ ಜಾತಿವಿನಾಶಕ್ಕಾಗಿ ಖಂಡಿತ ಹೋರಾಡಲಿದ್ದಾರೆ. ನಾವೆಲ್ಲರೂ ಅವರ ಜೊತೆಗೆ ನಿಲ್ಲೋಣ” ಎಂದರು.

ಚಿಂತಕರಾದ ಶಿವಸುಂದರ್ ಮಾತನಾಡಿ, “ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ 17 ಜನ ಸಾಮಾಜಿಕ ಕಾರ್ಯಕರ್ತರು ಮತ್ತು 21 ಸಂಘಟನೆಗಳು ಹೈಕೋರ್ಟ್‌ಗೆ ಪತ್ರ ಬರೆದಿದ್ದವು. ತದನಂತರ ಅಪರ್ಣ ಭಟ್ ಎಂಬುವವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಮತ್ತು ಮಹಿಳಾ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ಒಂದು ಬಹಿರಂಗ ಪತ್ರ ಬರೆದರು. ಆಗ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ಗೆ ಒಂದು ಪತ್ರ ಬರೆಯಲಾಯಿತು. ಆಗ ಕರ್ನಾಟಕ ಸರ್ಕಾರವೇ ಅರ್ಜಿ ಹಾಕಿ ಕೃಷ್ಣ ದೀಕ್ಷಿತ್ ಅವರ ಹೇಳಿಕೆಗಳನ್ನು ತೆಗೆಯಲು ಮನವಿ ಮಾಡಿತ್ತು. ಅದನ್ನು ತೆಗೆಯಲಾಗಿದೆ. ಹೀಗಿರುವಾಗ ಆ ಕುರಿತು ಟ್ವೀಟ್ ಮಾಡಿದ್ದ ಚೇತನ್‌ ಮೇಲೆ ಎರಡು ವರ್ಷದ ನಂತರ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಿರುವುದು ಜನಪರ ದನಿಗಳನ್ನು ಹತ್ತಿಕ್ಕುವ ಸ್ಪಷ್ಟ ಎಚ್ಚರಿಕೆ ಬಿಟ್ಟರೆ ಬೇರೇನೂ ಅಲ್ಲ” ಎಂದರು.

“ಇಂಗ್ಲೆಂಡ್‌ನಲ್ಲಿನ ಕೆಲ ಪತ್ರಿಕೆಗಳು ನ್ಯಾಯಾಧೀಶರ ಕುರಿತು ಯು ಓಲ್ಡ್ ಫೂಲ್ (ಮುದುಕ ಮೂರ್ಖರು ನೀವು), ಎನಿಮೀಸ್ ಆಫ್ ದಿ ಪೀಪಲ್ (ಜನರ ಶತ್ರುಗಳು) ಎಂದು ಬರೆದಿದ್ದಾಗಲೇ ಅವುಗಳ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ. ಆದರೆ ಭಾರತದಲ್ಲಿ ಜನಪರ ಹೋರಾಟಗಾರರ ಮೇಲೆ ಅದನ್ನು ಬೇಕಾಬಿಟ್ಟಿ ಬಳಸಲಾಗುತ್ತಿದೆ. ಇನ್ನೊಂದೆಡೆ ಸ್ವದೇಶಿ ಜಾಗರಣ್ ಮಂಚ್‌ನ ಅಧ್ಯಕ್ಷ ಎಸ್ ಗುರುಮೂರ್ತಿಯಂತವರು, ಅರುಣ್ ಜೇಟ್ಲಿಯಂತವರು ಮತ್ತು ವಿವೇಕ್ ಅಗ್ನಿಹೋತ್ರಿಯಂತಹ ಸಂಘ ಪರಿವಾರದ ಮುಖಂಡರು ನೇರಾನೇರ ಕೋರ್ಟ್‌ಗಳನ್ನು ಬೈಯ್ದಿದ್ದಾರೆ. ಕೋರ್ಟ್‌ಗಳ ಮೇಲೆ ಆರೋಪ ಮಾಡಿದ್ದಾರೆ. ಆದರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಇಂದು ನ್ಯಾಯಾಂಗವೂ ಕೇಸರಿಕರಣಗೊಂಡಿದೆ” ಎಂದು ಆತಂಕ ವ್ಯಕ್ತಪಡಿಸಿದ ಅವರು ನಾವು ಹೆಚ್ಚು ಹೆಚ್ಚು ಮಾತನಾಡಬೇಕು, ಹೆಚ್ಚು ಹೆಚ್ಚು ಜೈಲಿಗೆ ಹೋಗಲು ಸಿದ್ಧರಾಗಬೇಕು. ಇದು ಮಾತ್ರವೇ ನಮ್ಮ ಮುಂದಿರುವ ಪರಿಹಾರವಾಗಿದೆ ಎಂದರು.

ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮಾತನಾಡಿ, “ಇಂದು ರಾಜ್ಯದಲ್ಲಿ ಮೊದಲ ತಲೆಮಾರಿನ ಮತಗಳನ್ನು ಬಾಚಿಕೊಳ್ಳಲು ಇಲ್ಲದ ಹಿಜಾಬ್ ವಿವಾದವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲೆಡೆ ಕೋಮು ದಳ್ಳೂರಿಗಳನ್ನು ಬಿತ್ತಲಾಗುತ್ತಿದೆ. ನಮ್ಮ ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾಡಲು ಯತ್ನಿಸಲಾಗುತ್ತಿದೆ. ಇದರ ಭಾಗವಾಗಿ ಚೇತನ್‌ ರಂತೆ ಬ್ರಾಹ್ಮಣ್ಯದ ವಿರುದ್ಧ ಮಾತನಾಡುವವರನ್ನು, ಸತ್ಯ ಹೇಳುವವರನ್ನು ಜೈಲಿಗೆ ಹಾಕಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಬೇಕಿದೆ. ಹಾಗಾಗಿ ರಾಜ್ಯದ ಎಲ್ಲಾ ಎಲ್ಲಾ ಸಚಿವರನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಒತ್ತಡ ಹೇರಬೇಕಿದೆ. ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟವನ್ನು ಉಳಿಸಿಕೊಳ್ಳಲು ಒಗ್ಗಟ್ಟಿನ ಪ್ರಯತ್ನ ಮಾಡೋಣ ಎಂದರು.

ಒಟ್ಟಾರೆ ಸಭೆಯಲ್ಲಿ “ಚೇತನ್ ಬಂಧನ ಬಹಳ ಆಘಾತಕಾರಿಯಾಗಿದ್ದು, ಕರ್ನಾಟಕದಲ್ಲಿರುವ ದಲಿತ, ಬಹುಜನರ ಪರವಾಗಿರುವ ದನಿಗಳನ್ನು ಅಡಗಿಸುವ ಪ್ರಯತ್ನವಾಗಿದೆ. ಇದರ ವಿರುದ್ಧ ಎಲ್ಲಾ ಜನಪರ ಸಂಘಟನೆ, ವ್ಯಕ್ತಿಗಳು ಸೇರಿ ಒಗ್ಗೂಡಿ ಚೇತನ್ ಮೇಲಿನ ಪ್ರಕರಣವನ್ನು ಬೇಷರತ್ ಆಗಿ ಸರ್ಕಾರ ವಾಪಸ್ ಪಡೆಯಬೇಕೆಂದು ಆಗ್ರಹ ಹೇರಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಉನ್ನತ ಮಟ್ಟದ ಗಣ್ಯ ಹೋರಾಟಗಾರರ ಸಮಿತಿ ಮಾಡಲು ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಮೇಘ, ಜ್ಯೋತಿ ಅನಂತ ಸುಬ್ಬರಾವ್, ಹೋರಾಟಗಾರರಾದ ಡಿ.ರಾಜಗೋಪಾಲ್, ವಕೀಲರಾದ ನರಸಿಂಹಮೂರ್ತಿ, ಅನಂತ್ ನಾಯಕ್, ಪತ್ರಕರ್ತರಾದ ನವೀನ್ ಸೂರಿಂಜೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಸೇರಿದಂತೆ ಹಲವರಿದ್ದರು.


ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...