Homeಮುಖಪುಟಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ 2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು.

ಈ ಸಮಿತಿಯು 2019ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಅದರ ಬಹಿರಂಗಕ್ಕೆ ವಿರೋಧ ವ್ಯಕ್ತವಾಗಿತ್ತು. ನಂತರ ಸುದೀರ್ಘ ಸಮಯದ ಕಾನೂನು ಸಮರದ ಬಳಿಕ ಇಂದು (ಆಗಸ್ಟ್ 19, 2024) ಸರ್ಕಾರ ವರದಿ ಬಹಿರಂಗಗೊಳಿಸಿದೆ. ವರದಿಯಲ್ಲಿನ ಅಂಶಗಳು ಮಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.

ವರದಿಯಲ್ಲಿ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಹೊಸ ಶಾಸನ ಜಾರಿಗೊಳಿಸುವ ಮೂಲಕ ಮತ್ತು ಕುಂದುಕೊರತೆಗಳನ್ನು ಆಲಿಸಲು ಸ್ವತಂತ್ರ ನ್ಯಾಯಮಂಡಳಿ ರಚಿಸುವ ಮೂಲಕ ಮಾತ್ರ ಪರಿಹರಿಸಬಹುದು ಎಂದು ನ್ಯಾಯಮೂರ್ತಿ ಹೇಮಾ ಸಮಿತಿ ಸಲಹೆ ನೀಡಿದೆ.

ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಲೈಂಗಿಕ ಬೇಡಿಕೆಗಳು, ಲೈಂಗಿಕ ಕಿರುಕುಳ, ದುರುಪಯೋಗ ಮತ್ತು ಕೆಲಸದ ಸ್ಥಳದಲ್ಲಿ ಆಕ್ರಮಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಿತಿಯ ಅಧ್ಯಯನವು ಬಹಿರಂಗಪಡಿಸಿದೆ.

ಮಹಿಳೆಯರು ಸಾರಿಗೆ ಮತ್ತು ವಸತಿ ಸಮಸ್ಯೆಗಳನ್ನು ಕೂಡ ಎದುರಿಸುತ್ತಾರೆ. ಅವರಿಗೆ ಶೌಚಾಲಯಗಳು ಮತ್ತು ಚಲನಚಿತ್ರ ಸೆಟ್‌ಗಳಲ್ಲಿ ಬಟ್ಟೆ ಬದಲಾಯಿಸುವ ಕೊಠಡಿಗಳಂತಹ ಮೂಲಭೂತ ಸೌಲಭ್ಯಗಳ ಕೊರತೆಯು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತದೆ ಎಂದು ವರದಿ ಹೇಳಿದೆ. ಹೆಚ್ಚುವರಿಯಾಗಿ, ವರದಿಯು ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆಯ ಕೊರತೆ, ಲಿಂಗ ತಾರತಮ್ಯ, ಪುರುಷ ಪ್ರಾಬಲ್ಯದ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.

ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ, ಅಸಭ್ಯ ಕಾಮೆಂಟ್‌ಗಳು, ಸೈಬರ್ ಕಿರುಕುಳ, ಪಾವತಿ ಅಸಮಾನತೆ ಇತ್ಯಾದಿಗಳಿಂದ ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿದಿಲ್ಲ. ಅವರ ಕುಂದುಕೊರತೆಗಳನ್ನು ನಿವಾರಿಸಲು ಕಾನೂನುಬದ್ಧವಾಗಿ ರಚಿಸಲಾದ ಪ್ರಾಧಿಕಾರ ಅಗತ್ಯವಿದೆ ಎಂದಿದೆ.

ಚಿತ್ರರಂಗದಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ) ರಚಿಸುವುದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಸಮಿತಿ ಸಲಹೆ ನೀಡಿದೆ. ಐಸಿಸಿಯನ್ನು ವಿಶಾಕಾ VS ರಾಜಸ್ಥಾನದ ಸರ್ಕಾರ (1997) ಮತ್ತು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ- 2013ರ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಮಾಡಲಾಗಿದೆ. ಸಿನಿಮಾದಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಐಸಿಸಿಯ ಅಧ್ಯಕ್ಷರು ಮತ್ತು ಸದಸ್ಯರಾಗಿರುವುದರಿಂದ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಐಸಿಸಿ ಪರಿಹರಿಸಲು ಸಾಧ್ಯವಿಲ್ಲ. ಐಸಿಸಿಯ ಸದಸ್ಯರು ಚಲನಚಿತ್ರೋದ್ಯಮದವರೇ ಆಗಿದ್ದಲ್ಲಿ ಮಹಿಳೆಯರು ಕಿರುಕುಳದ ವಿವರಗಳನ್ನು ಬಹಿರಂಗಪಡಿಸಲು ಹೆದರುತ್ತಾರೆ ಎಂದು ವರದಿ ಹೇಳಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಇತರ ಸಲಹೆಗಳನ್ನು ನೀಡುವ ಮೂಲಕ ವರದಿಯನ್ನು ಮುಕ್ತಾಯಗೊಳಿಸಲಾಗಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಇದನ್ನೂ ಓದಿ : ತ್ರಿವಳಿ ತಲಾಖ್ ನಿಷೇಧ : ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...