Homeಮುಖಪುಟಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ 2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು.

ಈ ಸಮಿತಿಯು 2019ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಅದರ ಬಹಿರಂಗಕ್ಕೆ ವಿರೋಧ ವ್ಯಕ್ತವಾಗಿತ್ತು. ನಂತರ ಸುದೀರ್ಘ ಸಮಯದ ಕಾನೂನು ಸಮರದ ಬಳಿಕ ಇಂದು (ಆಗಸ್ಟ್ 19, 2024) ಸರ್ಕಾರ ವರದಿ ಬಹಿರಂಗಗೊಳಿಸಿದೆ. ವರದಿಯಲ್ಲಿನ ಅಂಶಗಳು ಮಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.

ವರದಿಯಲ್ಲಿ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಹೊಸ ಶಾಸನ ಜಾರಿಗೊಳಿಸುವ ಮೂಲಕ ಮತ್ತು ಕುಂದುಕೊರತೆಗಳನ್ನು ಆಲಿಸಲು ಸ್ವತಂತ್ರ ನ್ಯಾಯಮಂಡಳಿ ರಚಿಸುವ ಮೂಲಕ ಮಾತ್ರ ಪರಿಹರಿಸಬಹುದು ಎಂದು ನ್ಯಾಯಮೂರ್ತಿ ಹೇಮಾ ಸಮಿತಿ ಸಲಹೆ ನೀಡಿದೆ.

ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಲೈಂಗಿಕ ಬೇಡಿಕೆಗಳು, ಲೈಂಗಿಕ ಕಿರುಕುಳ, ದುರುಪಯೋಗ ಮತ್ತು ಕೆಲಸದ ಸ್ಥಳದಲ್ಲಿ ಆಕ್ರಮಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಿತಿಯ ಅಧ್ಯಯನವು ಬಹಿರಂಗಪಡಿಸಿದೆ.

ಮಹಿಳೆಯರು ಸಾರಿಗೆ ಮತ್ತು ವಸತಿ ಸಮಸ್ಯೆಗಳನ್ನು ಕೂಡ ಎದುರಿಸುತ್ತಾರೆ. ಅವರಿಗೆ ಶೌಚಾಲಯಗಳು ಮತ್ತು ಚಲನಚಿತ್ರ ಸೆಟ್‌ಗಳಲ್ಲಿ ಬಟ್ಟೆ ಬದಲಾಯಿಸುವ ಕೊಠಡಿಗಳಂತಹ ಮೂಲಭೂತ ಸೌಲಭ್ಯಗಳ ಕೊರತೆಯು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತದೆ ಎಂದು ವರದಿ ಹೇಳಿದೆ. ಹೆಚ್ಚುವರಿಯಾಗಿ, ವರದಿಯು ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆಯ ಕೊರತೆ, ಲಿಂಗ ತಾರತಮ್ಯ, ಪುರುಷ ಪ್ರಾಬಲ್ಯದ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.

ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ, ಅಸಭ್ಯ ಕಾಮೆಂಟ್‌ಗಳು, ಸೈಬರ್ ಕಿರುಕುಳ, ಪಾವತಿ ಅಸಮಾನತೆ ಇತ್ಯಾದಿಗಳಿಂದ ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿದಿಲ್ಲ. ಅವರ ಕುಂದುಕೊರತೆಗಳನ್ನು ನಿವಾರಿಸಲು ಕಾನೂನುಬದ್ಧವಾಗಿ ರಚಿಸಲಾದ ಪ್ರಾಧಿಕಾರ ಅಗತ್ಯವಿದೆ ಎಂದಿದೆ.

ಚಿತ್ರರಂಗದಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ) ರಚಿಸುವುದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಸಮಿತಿ ಸಲಹೆ ನೀಡಿದೆ. ಐಸಿಸಿಯನ್ನು ವಿಶಾಕಾ VS ರಾಜಸ್ಥಾನದ ಸರ್ಕಾರ (1997) ಮತ್ತು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ- 2013ರ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಮಾಡಲಾಗಿದೆ. ಸಿನಿಮಾದಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಐಸಿಸಿಯ ಅಧ್ಯಕ್ಷರು ಮತ್ತು ಸದಸ್ಯರಾಗಿರುವುದರಿಂದ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಐಸಿಸಿ ಪರಿಹರಿಸಲು ಸಾಧ್ಯವಿಲ್ಲ. ಐಸಿಸಿಯ ಸದಸ್ಯರು ಚಲನಚಿತ್ರೋದ್ಯಮದವರೇ ಆಗಿದ್ದಲ್ಲಿ ಮಹಿಳೆಯರು ಕಿರುಕುಳದ ವಿವರಗಳನ್ನು ಬಹಿರಂಗಪಡಿಸಲು ಹೆದರುತ್ತಾರೆ ಎಂದು ವರದಿ ಹೇಳಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಇತರ ಸಲಹೆಗಳನ್ನು ನೀಡುವ ಮೂಲಕ ವರದಿಯನ್ನು ಮುಕ್ತಾಯಗೊಳಿಸಲಾಗಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಇದನ್ನೂ ಓದಿ : ತ್ರಿವಳಿ ತಲಾಖ್ ನಿಷೇಧ : ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...