Homeಮುಖಪುಟ"ದಿ ಕಪಿಲ್‌ ಶರ್ಮಾ ಶೋ" ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೊಡಿವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

- Advertisement -
- Advertisement -

ಅರ್ನಾಬ್ ಗೋಸ್ವಾಮಿ ವಿರುದ್ಧ ವಿವಾದಾತ್ಮಕ ಪ್ರದರ್ಶನ ನೀಡಿದ್ದಕ್ಕಾಗಿ “ದಿ ಕಪಿಲ್ ಶರ್ಮಾ ಶೋ”ವನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಕಳೆದ ವಾರ ಅರ್ನಾಬ್ ಗೊಸ್ವಾಮಿಯನ್ನು ಅನುಕರಿಸಿ ಪ್ರದರ್ಶನವೊಂದನ್ನು ನೀಡಿದ್ದರು.

ಇತ್ತೀಚೆಗೆ ಹಿಂದಿಯ ಪ್ರಖ್ಯಾತ ದಿ ಕಪಿಲ್ ಶರ್ಮಾ ಶೋ ಹಲವು ಕಾರಣಗಳಿಗೆ ಸುದ್ಧಿಯಲ್ಲಿತ್ತು. ಕಳೆದ ವಾರ ಅರ್ನಾಬ್ ಗೋಸ್ವಾಮಿಯನ್ನು ಅನುಕರಿಸಿ, ಹೆಸರು ಹೇಳದೆಯೇ ಆತನ ಹಾವ-ಭಾವಗಳನ್ನು ಅನುಕರಿಸಿ ಶೋ ಮಾಡಿದ್ದರು. ಈ ಶೋನಲ್ಲಿ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದ ಅರ್ನಾಬ್ ಗೊಸ್ವಾಮಿಯ ಮೇಲೆ ಕಿಕು ಶಾರ್ದ ಹಾಗೂ ಕೃಷ್ಣ ಅಭಿಷೇಕ್ ಪ್ರತಿದಾಳಿಯನ್ನು ಮಾಡಿದ್ದರು. ಇಂದು ಇಂಡಿಯಾ ಟುಡೆಯ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಅರ್ನಾಬ್‌ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು ವೈರಲ್ ಆಗಿತ್ತು.

“ಅರ್ನಾಬ್ ಗೋಸ್ವಾಮಿ ನೀವು ಬನಾನಾ ರಿಪಬ್ಲಿಕ್ ಚಾನೆಲ್ ನಡೆಸುತ್ತಿದ್ದೀರಿ. ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ. ನಿಮಗೆ ಒಂದು ಸಲಹೆ ನೀಡುತ್ತಿದ್ದೇನೆ. ಪತ್ರಿಕೋದ್ಯಮವೆಂದರೆ ಇದಲ್ಲ. ಕಳೆದ ಎರಡು ತಿಂಗಳಿನಿಂದ ನೀವು ಪ್ರಸಾರ ಮಾಡುತ್ತಿದ್ದ ಅಸಹ್ಯವಾದ ವಿಚಾರವನ್ನು ಕೇಳಿಸಿಕೊಂಡು ನಾನು ಸುಮ್ಮನಿದ್ದೆ. ಟಿಆರ್‌ಪಿಗಿಂತಲೂ ಹೆಚ್ಚಾಗಿರುವುದು ಇದೆ ಗೆಳಯ, ಅದು ಟೆಲಿವಿಶನ್ ರೆಸ್ಪೆಕ್ಟ್ ಪಾಯಿಂಟ್ಸ್” ಎಂದು ‘ಇಂಡಿಯಾ ಟುಡೆ’ ಟಿವಿ ವಾಹಿನಿಯ ಕಾರ್ಯಕ್ರಮ ಪ್ರಸಾರದ ವೇಳೆ ತಮ್ಮ ತಾಳ್ಮೆ ಕಳೆದುಕೊಂಡು ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಈಗ ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೋಡುವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

ಪ್ರಶಾಂತ್ ಎಂಬುವವರು ಟ್ವೀಟ್ ಮಾಡಿದ್ದು, “#BoycottKapilSharmaShow, ನಿಮ್ಮ ಪ್ರದರ್ಶನದಿಂದ ಸ್ವಲ್ಪ ತಾಳ್ಮೆ ನಿರೀಕ್ಷಿಸಿದ್ದೆ. ಆದರೆ ಇಂದು ನಮ್ಮಂತಹವರನ್ನು ನಿರಾಶೆಗೊಳಿಸಿದಿರಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಅಲೋಕ್ ಶ್ರಿವಾಸ್ತವ ಎಂಬುವವರು ಈ ಪ್ರದರ್ಶನದ ಪರವಾಗಿ ಟ್ವೀಟ್ ಮಾಡಿದ್ದು, “ಎಂಥಾ ಉಲ್ಲಾಸದಾಯಕವಾದ ಮತ್ತು ಅದ್ಭುತವಾದ ಪ್ರದರ್ಶನ” ಎಂದು ಬರೆದುಕೊಂಡಿದ್ದು, ತಂಡಕ್ಕೆ ಜಿಂದಾಬಾದ್ ಹೇಳಿದ್ದಾರೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇಷ್ಟು ದಿನ ಪ್ರದರ್ಶನವನ್ನು ಇಷ್ಟಪಡುತ್ತಿದ್ದವರು, ಅರ್ನಾಬ್ ವಿರುದ್ಧ ಒಂದು ಎಪಿಸೋಡ್ ಮಾಡಿದ್ದಾರೆಂದು ಹೇಳಿ ಇಡೀ ಪ್ರದರ್ಶನವನ್ನು ಬಾಯ್ಕಾಟ್ ಮಾಡಿ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಇದರ ಹಿಂದೆ ಯಾವುದೋ ಪಕ್ಷದ ಐಟಿ ಸೆಲ್ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಯ್ಕಾಟ್, ಬ್ಯಾನ್‌ಗಳು ತುಂಬಾ ಹೆಚ್ಚಾಗುತ್ತಿದ್ದು, ತಮಗೆ ಮತ್ತು ತಮ್ಮ ಸಿದ್ಧಾಂತಕ್ಕೆ ಹೊಂದದ ಸಿನಿಮಾ, ರಿಯಾಲಿಟಿ ಶೋ, ನಟ, ನಟಿ, ನಿರ್ದೇಶಕ ಮುಂತಾದ ಎಲ್ಲರನ್ನೂ ಬಾಯ್ಕಾಟ್ ಮಾಡಬೇಕು ಎಂದು ತುಂಬಾ ಜನರು ದನಿಯೆತ್ತುತ್ತಾರೆ. ಆದರೆ ಇದಾದ ನಂತರ, ಯಾರನ್ನು ಅಥವಾ ಯಾವುದನ್ನು ಬಾಯ್ಕಾಟ್ ಮಾಡಬೇಕು ಎಂದು ಹೇಳಿದ್ದರೋ ಅವುಗಳೇ ಅತ್ಯುತ್ತಮ ಪ್ರದರ್ಶನ ಕಾಣುವ ಸಾಧ್ಯತೆಗಳಿವೆ.

ಈ ಸಾಲಿಗೆ ಈಗ “ದಿ ಕಪಿಲ್ ಶರ್ಮಾ ಶೋ” ಸೇರಿಕೊಳ್ಳುವುದೇ ಎಂದು ಕಾದುನೊಡಬೇಕಿದೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...