Homeಮುಖಪುಟ"ದಿ ಕಪಿಲ್‌ ಶರ್ಮಾ ಶೋ" ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೊಡಿವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

- Advertisement -
- Advertisement -

ಅರ್ನಾಬ್ ಗೋಸ್ವಾಮಿ ವಿರುದ್ಧ ವಿವಾದಾತ್ಮಕ ಪ್ರದರ್ಶನ ನೀಡಿದ್ದಕ್ಕಾಗಿ “ದಿ ಕಪಿಲ್ ಶರ್ಮಾ ಶೋ”ವನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಕಳೆದ ವಾರ ಅರ್ನಾಬ್ ಗೊಸ್ವಾಮಿಯನ್ನು ಅನುಕರಿಸಿ ಪ್ರದರ್ಶನವೊಂದನ್ನು ನೀಡಿದ್ದರು.

ಇತ್ತೀಚೆಗೆ ಹಿಂದಿಯ ಪ್ರಖ್ಯಾತ ದಿ ಕಪಿಲ್ ಶರ್ಮಾ ಶೋ ಹಲವು ಕಾರಣಗಳಿಗೆ ಸುದ್ಧಿಯಲ್ಲಿತ್ತು. ಕಳೆದ ವಾರ ಅರ್ನಾಬ್ ಗೋಸ್ವಾಮಿಯನ್ನು ಅನುಕರಿಸಿ, ಹೆಸರು ಹೇಳದೆಯೇ ಆತನ ಹಾವ-ಭಾವಗಳನ್ನು ಅನುಕರಿಸಿ ಶೋ ಮಾಡಿದ್ದರು. ಈ ಶೋನಲ್ಲಿ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದ ಅರ್ನಾಬ್ ಗೊಸ್ವಾಮಿಯ ಮೇಲೆ ಕಿಕು ಶಾರ್ದ ಹಾಗೂ ಕೃಷ್ಣ ಅಭಿಷೇಕ್ ಪ್ರತಿದಾಳಿಯನ್ನು ಮಾಡಿದ್ದರು. ಇಂದು ಇಂಡಿಯಾ ಟುಡೆಯ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಅರ್ನಾಬ್‌ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು ವೈರಲ್ ಆಗಿತ್ತು.

“ಅರ್ನಾಬ್ ಗೋಸ್ವಾಮಿ ನೀವು ಬನಾನಾ ರಿಪಬ್ಲಿಕ್ ಚಾನೆಲ್ ನಡೆಸುತ್ತಿದ್ದೀರಿ. ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ. ನಿಮಗೆ ಒಂದು ಸಲಹೆ ನೀಡುತ್ತಿದ್ದೇನೆ. ಪತ್ರಿಕೋದ್ಯಮವೆಂದರೆ ಇದಲ್ಲ. ಕಳೆದ ಎರಡು ತಿಂಗಳಿನಿಂದ ನೀವು ಪ್ರಸಾರ ಮಾಡುತ್ತಿದ್ದ ಅಸಹ್ಯವಾದ ವಿಚಾರವನ್ನು ಕೇಳಿಸಿಕೊಂಡು ನಾನು ಸುಮ್ಮನಿದ್ದೆ. ಟಿಆರ್‌ಪಿಗಿಂತಲೂ ಹೆಚ್ಚಾಗಿರುವುದು ಇದೆ ಗೆಳಯ, ಅದು ಟೆಲಿವಿಶನ್ ರೆಸ್ಪೆಕ್ಟ್ ಪಾಯಿಂಟ್ಸ್” ಎಂದು ‘ಇಂಡಿಯಾ ಟುಡೆ’ ಟಿವಿ ವಾಹಿನಿಯ ಕಾರ್ಯಕ್ರಮ ಪ್ರಸಾರದ ವೇಳೆ ತಮ್ಮ ತಾಳ್ಮೆ ಕಳೆದುಕೊಂಡು ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಈಗ ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೋಡುವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

ಪ್ರಶಾಂತ್ ಎಂಬುವವರು ಟ್ವೀಟ್ ಮಾಡಿದ್ದು, “#BoycottKapilSharmaShow, ನಿಮ್ಮ ಪ್ರದರ್ಶನದಿಂದ ಸ್ವಲ್ಪ ತಾಳ್ಮೆ ನಿರೀಕ್ಷಿಸಿದ್ದೆ. ಆದರೆ ಇಂದು ನಮ್ಮಂತಹವರನ್ನು ನಿರಾಶೆಗೊಳಿಸಿದಿರಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಅಲೋಕ್ ಶ್ರಿವಾಸ್ತವ ಎಂಬುವವರು ಈ ಪ್ರದರ್ಶನದ ಪರವಾಗಿ ಟ್ವೀಟ್ ಮಾಡಿದ್ದು, “ಎಂಥಾ ಉಲ್ಲಾಸದಾಯಕವಾದ ಮತ್ತು ಅದ್ಭುತವಾದ ಪ್ರದರ್ಶನ” ಎಂದು ಬರೆದುಕೊಂಡಿದ್ದು, ತಂಡಕ್ಕೆ ಜಿಂದಾಬಾದ್ ಹೇಳಿದ್ದಾರೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇಷ್ಟು ದಿನ ಪ್ರದರ್ಶನವನ್ನು ಇಷ್ಟಪಡುತ್ತಿದ್ದವರು, ಅರ್ನಾಬ್ ವಿರುದ್ಧ ಒಂದು ಎಪಿಸೋಡ್ ಮಾಡಿದ್ದಾರೆಂದು ಹೇಳಿ ಇಡೀ ಪ್ರದರ್ಶನವನ್ನು ಬಾಯ್ಕಾಟ್ ಮಾಡಿ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಇದರ ಹಿಂದೆ ಯಾವುದೋ ಪಕ್ಷದ ಐಟಿ ಸೆಲ್ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಯ್ಕಾಟ್, ಬ್ಯಾನ್‌ಗಳು ತುಂಬಾ ಹೆಚ್ಚಾಗುತ್ತಿದ್ದು, ತಮಗೆ ಮತ್ತು ತಮ್ಮ ಸಿದ್ಧಾಂತಕ್ಕೆ ಹೊಂದದ ಸಿನಿಮಾ, ರಿಯಾಲಿಟಿ ಶೋ, ನಟ, ನಟಿ, ನಿರ್ದೇಶಕ ಮುಂತಾದ ಎಲ್ಲರನ್ನೂ ಬಾಯ್ಕಾಟ್ ಮಾಡಬೇಕು ಎಂದು ತುಂಬಾ ಜನರು ದನಿಯೆತ್ತುತ್ತಾರೆ. ಆದರೆ ಇದಾದ ನಂತರ, ಯಾರನ್ನು ಅಥವಾ ಯಾವುದನ್ನು ಬಾಯ್ಕಾಟ್ ಮಾಡಬೇಕು ಎಂದು ಹೇಳಿದ್ದರೋ ಅವುಗಳೇ ಅತ್ಯುತ್ತಮ ಪ್ರದರ್ಶನ ಕಾಣುವ ಸಾಧ್ಯತೆಗಳಿವೆ.

ಈ ಸಾಲಿಗೆ ಈಗ “ದಿ ಕಪಿಲ್ ಶರ್ಮಾ ಶೋ” ಸೇರಿಕೊಳ್ಳುವುದೇ ಎಂದು ಕಾದುನೊಡಬೇಕಿದೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...