Homeಮುಖಪುಟ"ದಿ ಕಪಿಲ್‌ ಶರ್ಮಾ ಶೋ" ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೊಡಿವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

- Advertisement -
- Advertisement -

ಅರ್ನಾಬ್ ಗೋಸ್ವಾಮಿ ವಿರುದ್ಧ ವಿವಾದಾತ್ಮಕ ಪ್ರದರ್ಶನ ನೀಡಿದ್ದಕ್ಕಾಗಿ “ದಿ ಕಪಿಲ್ ಶರ್ಮಾ ಶೋ”ವನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಕಳೆದ ವಾರ ಅರ್ನಾಬ್ ಗೊಸ್ವಾಮಿಯನ್ನು ಅನುಕರಿಸಿ ಪ್ರದರ್ಶನವೊಂದನ್ನು ನೀಡಿದ್ದರು.

ಇತ್ತೀಚೆಗೆ ಹಿಂದಿಯ ಪ್ರಖ್ಯಾತ ದಿ ಕಪಿಲ್ ಶರ್ಮಾ ಶೋ ಹಲವು ಕಾರಣಗಳಿಗೆ ಸುದ್ಧಿಯಲ್ಲಿತ್ತು. ಕಳೆದ ವಾರ ಅರ್ನಾಬ್ ಗೋಸ್ವಾಮಿಯನ್ನು ಅನುಕರಿಸಿ, ಹೆಸರು ಹೇಳದೆಯೇ ಆತನ ಹಾವ-ಭಾವಗಳನ್ನು ಅನುಕರಿಸಿ ಶೋ ಮಾಡಿದ್ದರು. ಈ ಶೋನಲ್ಲಿ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದ ಅರ್ನಾಬ್ ಗೊಸ್ವಾಮಿಯ ಮೇಲೆ ಕಿಕು ಶಾರ್ದ ಹಾಗೂ ಕೃಷ್ಣ ಅಭಿಷೇಕ್ ಪ್ರತಿದಾಳಿಯನ್ನು ಮಾಡಿದ್ದರು. ಇಂದು ಇಂಡಿಯಾ ಟುಡೆಯ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಅರ್ನಾಬ್‌ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು ವೈರಲ್ ಆಗಿತ್ತು.

“ಅರ್ನಾಬ್ ಗೋಸ್ವಾಮಿ ನೀವು ಬನಾನಾ ರಿಪಬ್ಲಿಕ್ ಚಾನೆಲ್ ನಡೆಸುತ್ತಿದ್ದೀರಿ. ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ. ನಿಮಗೆ ಒಂದು ಸಲಹೆ ನೀಡುತ್ತಿದ್ದೇನೆ. ಪತ್ರಿಕೋದ್ಯಮವೆಂದರೆ ಇದಲ್ಲ. ಕಳೆದ ಎರಡು ತಿಂಗಳಿನಿಂದ ನೀವು ಪ್ರಸಾರ ಮಾಡುತ್ತಿದ್ದ ಅಸಹ್ಯವಾದ ವಿಚಾರವನ್ನು ಕೇಳಿಸಿಕೊಂಡು ನಾನು ಸುಮ್ಮನಿದ್ದೆ. ಟಿಆರ್‌ಪಿಗಿಂತಲೂ ಹೆಚ್ಚಾಗಿರುವುದು ಇದೆ ಗೆಳಯ, ಅದು ಟೆಲಿವಿಶನ್ ರೆಸ್ಪೆಕ್ಟ್ ಪಾಯಿಂಟ್ಸ್” ಎಂದು ‘ಇಂಡಿಯಾ ಟುಡೆ’ ಟಿವಿ ವಾಹಿನಿಯ ಕಾರ್ಯಕ್ರಮ ಪ್ರಸಾರದ ವೇಳೆ ತಮ್ಮ ತಾಳ್ಮೆ ಕಳೆದುಕೊಂಡು ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಈಗ ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೋಡುವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

ಪ್ರಶಾಂತ್ ಎಂಬುವವರು ಟ್ವೀಟ್ ಮಾಡಿದ್ದು, “#BoycottKapilSharmaShow, ನಿಮ್ಮ ಪ್ರದರ್ಶನದಿಂದ ಸ್ವಲ್ಪ ತಾಳ್ಮೆ ನಿರೀಕ್ಷಿಸಿದ್ದೆ. ಆದರೆ ಇಂದು ನಮ್ಮಂತಹವರನ್ನು ನಿರಾಶೆಗೊಳಿಸಿದಿರಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಅಲೋಕ್ ಶ್ರಿವಾಸ್ತವ ಎಂಬುವವರು ಈ ಪ್ರದರ್ಶನದ ಪರವಾಗಿ ಟ್ವೀಟ್ ಮಾಡಿದ್ದು, “ಎಂಥಾ ಉಲ್ಲಾಸದಾಯಕವಾದ ಮತ್ತು ಅದ್ಭುತವಾದ ಪ್ರದರ್ಶನ” ಎಂದು ಬರೆದುಕೊಂಡಿದ್ದು, ತಂಡಕ್ಕೆ ಜಿಂದಾಬಾದ್ ಹೇಳಿದ್ದಾರೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇಷ್ಟು ದಿನ ಪ್ರದರ್ಶನವನ್ನು ಇಷ್ಟಪಡುತ್ತಿದ್ದವರು, ಅರ್ನಾಬ್ ವಿರುದ್ಧ ಒಂದು ಎಪಿಸೋಡ್ ಮಾಡಿದ್ದಾರೆಂದು ಹೇಳಿ ಇಡೀ ಪ್ರದರ್ಶನವನ್ನು ಬಾಯ್ಕಾಟ್ ಮಾಡಿ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಇದರ ಹಿಂದೆ ಯಾವುದೋ ಪಕ್ಷದ ಐಟಿ ಸೆಲ್ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಯ್ಕಾಟ್, ಬ್ಯಾನ್‌ಗಳು ತುಂಬಾ ಹೆಚ್ಚಾಗುತ್ತಿದ್ದು, ತಮಗೆ ಮತ್ತು ತಮ್ಮ ಸಿದ್ಧಾಂತಕ್ಕೆ ಹೊಂದದ ಸಿನಿಮಾ, ರಿಯಾಲಿಟಿ ಶೋ, ನಟ, ನಟಿ, ನಿರ್ದೇಶಕ ಮುಂತಾದ ಎಲ್ಲರನ್ನೂ ಬಾಯ್ಕಾಟ್ ಮಾಡಬೇಕು ಎಂದು ತುಂಬಾ ಜನರು ದನಿಯೆತ್ತುತ್ತಾರೆ. ಆದರೆ ಇದಾದ ನಂತರ, ಯಾರನ್ನು ಅಥವಾ ಯಾವುದನ್ನು ಬಾಯ್ಕಾಟ್ ಮಾಡಬೇಕು ಎಂದು ಹೇಳಿದ್ದರೋ ಅವುಗಳೇ ಅತ್ಯುತ್ತಮ ಪ್ರದರ್ಶನ ಕಾಣುವ ಸಾಧ್ಯತೆಗಳಿವೆ.

ಈ ಸಾಲಿಗೆ ಈಗ “ದಿ ಕಪಿಲ್ ಶರ್ಮಾ ಶೋ” ಸೇರಿಕೊಳ್ಳುವುದೇ ಎಂದು ಕಾದುನೊಡಬೇಕಿದೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...