Homeಮುಖಪುಟ18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

ಬಿಜೆಪಿ ಆಡಳಿತದ ಹಲವು ರಾಜ್ಯಗಳು ಅವರ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದವು

- Advertisement -
- Advertisement -

ದ್ವೇಷ ಪೂರಿತ ಸಿನಿಮಾ ‘ದಿ ಕಾಶ್ಮೀರ್‌‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮತ್ತು ಅವರ ಪತ್ನಿ, ನಟಿ ಪಲ್ಲವಿ ಜೋಶಿ ಮುಂಬೈನ ವಾರ್ಸೋವಾದಲ್ಲಿ 17.92 ಕೋಟಿ ರೂ.ಗಳ ಮೌಲ್ಯದ ಅಪಾರ್ಟ್‌ಮೆಂಟ್‌ ಖರೀದಿಸಿದ್ದಾರೆ ಎಂದು ಹಿಂದೂಸ್ತಾನ್‌ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ.

ಮನೆ ಖರೀದಿ ಒಪ್ಪಂದದ ನೋಂದಣಿಗಾಗಿ 1.07 ಕೋಟಿ ರೂ.ಗಳ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ ಎಂದು ವರದಿಯಾಗಿದೆ. ಅವರು ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವು ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಜೊತೆಗೆ ಬಿಜೆಪಿ ಆಡಳಿತದ ಹಲವು ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಿದ್ದವು. ಅಲ್ಲದೆ, ಬಿಜೆಪಿ ನಾಯಕರು ಚಿತ್ರ ನೋಡುವಂತೆ ಸಿನಿಮಾದ ಪ್ರಚಾರವನ್ನೂ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾರ್ಥೆನಾನ್ ಹೆಸರಿನ ಕಟ್ಟಡದಲ್ಲಿರುವ ಪಲ್ಲವಿ ಮತ್ತು ವಿವೇಕ್ ಅಗ್ನಿಹೋತ್ರಿ ಅವರ ಹೊಸ ಅಪಾರ್ಟ್ಮೆಂಟ್ 30 ನೇ ಮಹಡಿಯಲ್ಲಿದೆ ಎಂದು ವರದಿಯು ಹೇಳಿದೆ. ಮನೆಯು 3,258 ಚದರ ಅಡಿ ಹೊಂದಿದ್ದು, ಮೂರು ಕಾರ್ ಪಾರ್ಕಿಂಗ್ ಸ್ಲಾಟ್‌ಗಳೊಂದಿಗೆ ಇದೆ. ದಂಪತಿಗಳು ನೇರವಾಗಿ ಪ್ರಾಜೆಕ್ಟ್ ಡೆವಲಪರ್ ಎಕ್ಸ್ಟಸಿ ರಿಯಾಲ್ಟಿಯಿಂದ ಆಸ್ತಿಯನ್ನು ಖರೀದಿಸಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಸೆಪ್ಟೆಂಬರ್ 27 ರಂದು ಒಪ್ಪಂದದ ನೋಂದಣಿ ಸಮಯದಲ್ಲಿ ವಿವೇಕ್ ಮತ್ತು ಪಲ್ಲವಿ 1.07 ಕೋಟಿ ರೂ. ಮೌಲ್ಯದ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ. ಅಪಾರ್ಟ್ಮೆಂಟ್ ಮೌಲ್ಯವು ಪ್ರತಿ ಚದರ ಅಡಿಗೆ 55,000 ರೂ.ಗಿಂತ ಕ್ಕಿಂತ ಸ್ವಲ್ಪ ಹೆಚ್ಚು ಎಂದು ವರದಿ ಹೇಳಿದೆ.

ಇದನ್ನೂ ಓದಿ: EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ 252 ಕೋಟಿ ರೂ.ಗಳ ನಿವ್ವಳ ಲಾಭವನ್ನು ಭಾರತದಲ್ಲಿ ಬಾಚಿಕೊಂಡಿತ್ತು. ಚಿತ್ರವು ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಇಸ್ಲಾಮೋಫೊಬಿಯಾವನ್ನು ಹೊಂದಿದ್ದು, ಸುಳ್ಳು ಮತ್ತು ದ್ವೇಷವನ್ನು ಹೆಚ್ಚಿಸುತ್ತದೆ ಎಂದು ವಿಮರ್ಶಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...