Homeಮುಖಪುಟ18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

ಬಿಜೆಪಿ ಆಡಳಿತದ ಹಲವು ರಾಜ್ಯಗಳು ಅವರ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದವು

- Advertisement -
- Advertisement -

ದ್ವೇಷ ಪೂರಿತ ಸಿನಿಮಾ ‘ದಿ ಕಾಶ್ಮೀರ್‌‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮತ್ತು ಅವರ ಪತ್ನಿ, ನಟಿ ಪಲ್ಲವಿ ಜೋಶಿ ಮುಂಬೈನ ವಾರ್ಸೋವಾದಲ್ಲಿ 17.92 ಕೋಟಿ ರೂ.ಗಳ ಮೌಲ್ಯದ ಅಪಾರ್ಟ್‌ಮೆಂಟ್‌ ಖರೀದಿಸಿದ್ದಾರೆ ಎಂದು ಹಿಂದೂಸ್ತಾನ್‌ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ.

ಮನೆ ಖರೀದಿ ಒಪ್ಪಂದದ ನೋಂದಣಿಗಾಗಿ 1.07 ಕೋಟಿ ರೂ.ಗಳ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ ಎಂದು ವರದಿಯಾಗಿದೆ. ಅವರು ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವು ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಜೊತೆಗೆ ಬಿಜೆಪಿ ಆಡಳಿತದ ಹಲವು ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಿದ್ದವು. ಅಲ್ಲದೆ, ಬಿಜೆಪಿ ನಾಯಕರು ಚಿತ್ರ ನೋಡುವಂತೆ ಸಿನಿಮಾದ ಪ್ರಚಾರವನ್ನೂ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾರ್ಥೆನಾನ್ ಹೆಸರಿನ ಕಟ್ಟಡದಲ್ಲಿರುವ ಪಲ್ಲವಿ ಮತ್ತು ವಿವೇಕ್ ಅಗ್ನಿಹೋತ್ರಿ ಅವರ ಹೊಸ ಅಪಾರ್ಟ್ಮೆಂಟ್ 30 ನೇ ಮಹಡಿಯಲ್ಲಿದೆ ಎಂದು ವರದಿಯು ಹೇಳಿದೆ. ಮನೆಯು 3,258 ಚದರ ಅಡಿ ಹೊಂದಿದ್ದು, ಮೂರು ಕಾರ್ ಪಾರ್ಕಿಂಗ್ ಸ್ಲಾಟ್‌ಗಳೊಂದಿಗೆ ಇದೆ. ದಂಪತಿಗಳು ನೇರವಾಗಿ ಪ್ರಾಜೆಕ್ಟ್ ಡೆವಲಪರ್ ಎಕ್ಸ್ಟಸಿ ರಿಯಾಲ್ಟಿಯಿಂದ ಆಸ್ತಿಯನ್ನು ಖರೀದಿಸಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಸೆಪ್ಟೆಂಬರ್ 27 ರಂದು ಒಪ್ಪಂದದ ನೋಂದಣಿ ಸಮಯದಲ್ಲಿ ವಿವೇಕ್ ಮತ್ತು ಪಲ್ಲವಿ 1.07 ಕೋಟಿ ರೂ. ಮೌಲ್ಯದ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ. ಅಪಾರ್ಟ್ಮೆಂಟ್ ಮೌಲ್ಯವು ಪ್ರತಿ ಚದರ ಅಡಿಗೆ 55,000 ರೂ.ಗಿಂತ ಕ್ಕಿಂತ ಸ್ವಲ್ಪ ಹೆಚ್ಚು ಎಂದು ವರದಿ ಹೇಳಿದೆ.

ಇದನ್ನೂ ಓದಿ: EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ 252 ಕೋಟಿ ರೂ.ಗಳ ನಿವ್ವಳ ಲಾಭವನ್ನು ಭಾರತದಲ್ಲಿ ಬಾಚಿಕೊಂಡಿತ್ತು. ಚಿತ್ರವು ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಇಸ್ಲಾಮೋಫೊಬಿಯಾವನ್ನು ಹೊಂದಿದ್ದು, ಸುಳ್ಳು ಮತ್ತು ದ್ವೇಷವನ್ನು ಹೆಚ್ಚಿಸುತ್ತದೆ ಎಂದು ವಿಮರ್ಶಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...