Homeಮುಖಪುಟ18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

ಬಿಜೆಪಿ ಆಡಳಿತದ ಹಲವು ರಾಜ್ಯಗಳು ಅವರ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದವು

- Advertisement -
- Advertisement -

ದ್ವೇಷ ಪೂರಿತ ಸಿನಿಮಾ ‘ದಿ ಕಾಶ್ಮೀರ್‌‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮತ್ತು ಅವರ ಪತ್ನಿ, ನಟಿ ಪಲ್ಲವಿ ಜೋಶಿ ಮುಂಬೈನ ವಾರ್ಸೋವಾದಲ್ಲಿ 17.92 ಕೋಟಿ ರೂ.ಗಳ ಮೌಲ್ಯದ ಅಪಾರ್ಟ್‌ಮೆಂಟ್‌ ಖರೀದಿಸಿದ್ದಾರೆ ಎಂದು ಹಿಂದೂಸ್ತಾನ್‌ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ.

ಮನೆ ಖರೀದಿ ಒಪ್ಪಂದದ ನೋಂದಣಿಗಾಗಿ 1.07 ಕೋಟಿ ರೂ.ಗಳ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ ಎಂದು ವರದಿಯಾಗಿದೆ. ಅವರು ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವು ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಜೊತೆಗೆ ಬಿಜೆಪಿ ಆಡಳಿತದ ಹಲವು ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಿದ್ದವು. ಅಲ್ಲದೆ, ಬಿಜೆಪಿ ನಾಯಕರು ಚಿತ್ರ ನೋಡುವಂತೆ ಸಿನಿಮಾದ ಪ್ರಚಾರವನ್ನೂ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾರ್ಥೆನಾನ್ ಹೆಸರಿನ ಕಟ್ಟಡದಲ್ಲಿರುವ ಪಲ್ಲವಿ ಮತ್ತು ವಿವೇಕ್ ಅಗ್ನಿಹೋತ್ರಿ ಅವರ ಹೊಸ ಅಪಾರ್ಟ್ಮೆಂಟ್ 30 ನೇ ಮಹಡಿಯಲ್ಲಿದೆ ಎಂದು ವರದಿಯು ಹೇಳಿದೆ. ಮನೆಯು 3,258 ಚದರ ಅಡಿ ಹೊಂದಿದ್ದು, ಮೂರು ಕಾರ್ ಪಾರ್ಕಿಂಗ್ ಸ್ಲಾಟ್‌ಗಳೊಂದಿಗೆ ಇದೆ. ದಂಪತಿಗಳು ನೇರವಾಗಿ ಪ್ರಾಜೆಕ್ಟ್ ಡೆವಲಪರ್ ಎಕ್ಸ್ಟಸಿ ರಿಯಾಲ್ಟಿಯಿಂದ ಆಸ್ತಿಯನ್ನು ಖರೀದಿಸಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಸೆಪ್ಟೆಂಬರ್ 27 ರಂದು ಒಪ್ಪಂದದ ನೋಂದಣಿ ಸಮಯದಲ್ಲಿ ವಿವೇಕ್ ಮತ್ತು ಪಲ್ಲವಿ 1.07 ಕೋಟಿ ರೂ. ಮೌಲ್ಯದ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ. ಅಪಾರ್ಟ್ಮೆಂಟ್ ಮೌಲ್ಯವು ಪ್ರತಿ ಚದರ ಅಡಿಗೆ 55,000 ರೂ.ಗಿಂತ ಕ್ಕಿಂತ ಸ್ವಲ್ಪ ಹೆಚ್ಚು ಎಂದು ವರದಿ ಹೇಳಿದೆ.

ಇದನ್ನೂ ಓದಿ: EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ 252 ಕೋಟಿ ರೂ.ಗಳ ನಿವ್ವಳ ಲಾಭವನ್ನು ಭಾರತದಲ್ಲಿ ಬಾಚಿಕೊಂಡಿತ್ತು. ಚಿತ್ರವು ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಇಸ್ಲಾಮೋಫೊಬಿಯಾವನ್ನು ಹೊಂದಿದ್ದು, ಸುಳ್ಳು ಮತ್ತು ದ್ವೇಷವನ್ನು ಹೆಚ್ಚಿಸುತ್ತದೆ ಎಂದು ವಿಮರ್ಶಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...