Homeಮುಖಪುಟಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

- Advertisement -
- Advertisement -

ಪಾಲಕ್ಕಾಡ್‌ನಲ್ಲಿ ಮಂಗಳವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕೇರಳದ ಆಡಳಿತಾರೂಢ LDF ಸರ್ಕಾರವು ‘ಕೆಲವು ಚಿನ್ನದ ತುಂಡುಗಳಿಗಾಗಿ’ ರಾಜ್ಯದ ಜನರಿಗೆ ದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ, “ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲು ಬೇಕಾಗಿ ನಾನು ನಿಮ್ಮ ನಡುವೆ ಬಂದಿದ್ದೇನೆ. ಜುದಾಸ್‌ ಕೆಲವು ಬೆಳ್ಳಿ ತುಂಡುಗಳಿಗೆ ಏಸು ಕ್ರಿಸ್ತನಿಗೆ ದ್ರೋಹ ಮಾಡಿದನು. ಎಲ್‌ಡಿಎಫ್‌ ಕೆಲವು ಚಿನ್ನದ ತುಂಡುಗಳಿಗೆ ಕೇರಳಕ್ಕೆ ದ್ರೋಹ ಮಾಡಿದೆ” ಎಂದು ಪಾಲಕ್ಕಾಡ್‌‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಬಿಜೆಪಿಯ ಸ್ಟಾರ್ ಪ್ರಚಾರಕರಾದ ಮೋದಿ, “ರಾಜ್ಯದಲ್ಲಿ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ಪರಸ್ಪರ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

“ಹಲವು ವರ್ಷಗಳಿಂದ, ಕೇರಳ ರಾಜಕಾರಣದ ಅತ್ಯಂತ ಕೆಟ್ಟ ರಹಸ್ಯವೆಂದರೆ ಯುಡಿಎಫ್ ಮತ್ತು ಎಲ್‌ಡಿಎಫ್‌ ನಡುವಿನ ಸ್ನೇಹಪರ ಒಪ್ಪಂದ. ಏನಿದು ಮ್ಯಾಚ್‌ ಫಿಕ್ಸಿಂಗ್‌ ಎಂದು ಇದೀಗ ಮೊದಲ ಬಾರಿಗೆ ಕೇರಳದ ಮತದಾರರು ಕೇಳುತ್ತಿದ್ದಾರೆ. ಯುಡಿಎಫ್ ಮತ್ತು ಎಲ್‌ಡಿಎಫ್ ಅವರನ್ನು ಹೇಗೆ ದಾರಿ ತಪ್ಪಿಸಿದೆ ಎಂದು ಜನರು ನೋಡುತ್ತಿದ್ದಾರೆ” ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಒಂದೇ; ಅವರು ಕೇಂದ್ರದ ಯುಪಿಎ -1 ರಲ್ಲೂ ಪಾಲುದಾರರಾಗಿದ್ದರು. ಎಡಪಂಥೀಯರು ಕಾಂಗ್ರೆಸ್‌ಗೆ ಸಂಚಿಕೆ ಆಧಾರಿತ ಬೆಂಬಲವನ್ನು ನೀಡುತ್ತಲೇ ಇದ್ದಾರೆ. ಆದರೆ ಕೇರಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಅವರು ಪರಸ್ಪರರ ವಿರುದ್ಧ ಆರೋಪ ಪತ್ಯಾರೋಪಗಳನ್ನು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಎಲ್‌ಡಿಎಫ್ ಮತ್ತು ಯುಡಿಎಫ್‌‌ ಎರಡೂ ಮೈತ್ರಿಕೂಟಗಳು ಕೇರಳದ ಪ್ರವಾಸೋದ್ಯಮ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ನಡೆಯುವ ‘ಬಂದ್’ಗಳ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ, ಯುಡಿಎಫ್ ಮತ್ತು ಎಲ್‌ಡಿಎಫ್ ಹೆಚ್ಚಿನ ಸಂಖ್ಯೆಯ ರಸ್ತೆ ತಡೆಗಳನ್ನು ನಡೆಸಿ ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸುತ್ತಿದೆ ಹೇಳಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ 2021 ರ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಫಲಿತಾಂಶಗಳು ಮೇ 2 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ – ರಾಮಸೇನೆಯ ಸಂಸ್ಥಾಪಕ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....