Homeಮುಖಪುಟಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

- Advertisement -
- Advertisement -

ಪಾಲಕ್ಕಾಡ್‌ನಲ್ಲಿ ಮಂಗಳವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕೇರಳದ ಆಡಳಿತಾರೂಢ LDF ಸರ್ಕಾರವು ‘ಕೆಲವು ಚಿನ್ನದ ತುಂಡುಗಳಿಗಾಗಿ’ ರಾಜ್ಯದ ಜನರಿಗೆ ದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ, “ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲು ಬೇಕಾಗಿ ನಾನು ನಿಮ್ಮ ನಡುವೆ ಬಂದಿದ್ದೇನೆ. ಜುದಾಸ್‌ ಕೆಲವು ಬೆಳ್ಳಿ ತುಂಡುಗಳಿಗೆ ಏಸು ಕ್ರಿಸ್ತನಿಗೆ ದ್ರೋಹ ಮಾಡಿದನು. ಎಲ್‌ಡಿಎಫ್‌ ಕೆಲವು ಚಿನ್ನದ ತುಂಡುಗಳಿಗೆ ಕೇರಳಕ್ಕೆ ದ್ರೋಹ ಮಾಡಿದೆ” ಎಂದು ಪಾಲಕ್ಕಾಡ್‌‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಬಿಜೆಪಿಯ ಸ್ಟಾರ್ ಪ್ರಚಾರಕರಾದ ಮೋದಿ, “ರಾಜ್ಯದಲ್ಲಿ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ಪರಸ್ಪರ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

“ಹಲವು ವರ್ಷಗಳಿಂದ, ಕೇರಳ ರಾಜಕಾರಣದ ಅತ್ಯಂತ ಕೆಟ್ಟ ರಹಸ್ಯವೆಂದರೆ ಯುಡಿಎಫ್ ಮತ್ತು ಎಲ್‌ಡಿಎಫ್‌ ನಡುವಿನ ಸ್ನೇಹಪರ ಒಪ್ಪಂದ. ಏನಿದು ಮ್ಯಾಚ್‌ ಫಿಕ್ಸಿಂಗ್‌ ಎಂದು ಇದೀಗ ಮೊದಲ ಬಾರಿಗೆ ಕೇರಳದ ಮತದಾರರು ಕೇಳುತ್ತಿದ್ದಾರೆ. ಯುಡಿಎಫ್ ಮತ್ತು ಎಲ್‌ಡಿಎಫ್ ಅವರನ್ನು ಹೇಗೆ ದಾರಿ ತಪ್ಪಿಸಿದೆ ಎಂದು ಜನರು ನೋಡುತ್ತಿದ್ದಾರೆ” ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಒಂದೇ; ಅವರು ಕೇಂದ್ರದ ಯುಪಿಎ -1 ರಲ್ಲೂ ಪಾಲುದಾರರಾಗಿದ್ದರು. ಎಡಪಂಥೀಯರು ಕಾಂಗ್ರೆಸ್‌ಗೆ ಸಂಚಿಕೆ ಆಧಾರಿತ ಬೆಂಬಲವನ್ನು ನೀಡುತ್ತಲೇ ಇದ್ದಾರೆ. ಆದರೆ ಕೇರಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಅವರು ಪರಸ್ಪರರ ವಿರುದ್ಧ ಆರೋಪ ಪತ್ಯಾರೋಪಗಳನ್ನು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಎಲ್‌ಡಿಎಫ್ ಮತ್ತು ಯುಡಿಎಫ್‌‌ ಎರಡೂ ಮೈತ್ರಿಕೂಟಗಳು ಕೇರಳದ ಪ್ರವಾಸೋದ್ಯಮ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ನಡೆಯುವ ‘ಬಂದ್’ಗಳ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ, ಯುಡಿಎಫ್ ಮತ್ತು ಎಲ್‌ಡಿಎಫ್ ಹೆಚ್ಚಿನ ಸಂಖ್ಯೆಯ ರಸ್ತೆ ತಡೆಗಳನ್ನು ನಡೆಸಿ ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸುತ್ತಿದೆ ಹೇಳಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ 2021 ರ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಫಲಿತಾಂಶಗಳು ಮೇ 2 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ – ರಾಮಸೇನೆಯ ಸಂಸ್ಥಾಪಕ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...