Homeಮುಖಪುಟಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

- Advertisement -
- Advertisement -

ಪಾಲಕ್ಕಾಡ್‌ನಲ್ಲಿ ಮಂಗಳವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕೇರಳದ ಆಡಳಿತಾರೂಢ LDF ಸರ್ಕಾರವು ‘ಕೆಲವು ಚಿನ್ನದ ತುಂಡುಗಳಿಗಾಗಿ’ ರಾಜ್ಯದ ಜನರಿಗೆ ದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ, “ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲು ಬೇಕಾಗಿ ನಾನು ನಿಮ್ಮ ನಡುವೆ ಬಂದಿದ್ದೇನೆ. ಜುದಾಸ್‌ ಕೆಲವು ಬೆಳ್ಳಿ ತುಂಡುಗಳಿಗೆ ಏಸು ಕ್ರಿಸ್ತನಿಗೆ ದ್ರೋಹ ಮಾಡಿದನು. ಎಲ್‌ಡಿಎಫ್‌ ಕೆಲವು ಚಿನ್ನದ ತುಂಡುಗಳಿಗೆ ಕೇರಳಕ್ಕೆ ದ್ರೋಹ ಮಾಡಿದೆ” ಎಂದು ಪಾಲಕ್ಕಾಡ್‌‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಬಿಜೆಪಿಯ ಸ್ಟಾರ್ ಪ್ರಚಾರಕರಾದ ಮೋದಿ, “ರಾಜ್ಯದಲ್ಲಿ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ಪರಸ್ಪರ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

“ಹಲವು ವರ್ಷಗಳಿಂದ, ಕೇರಳ ರಾಜಕಾರಣದ ಅತ್ಯಂತ ಕೆಟ್ಟ ರಹಸ್ಯವೆಂದರೆ ಯುಡಿಎಫ್ ಮತ್ತು ಎಲ್‌ಡಿಎಫ್‌ ನಡುವಿನ ಸ್ನೇಹಪರ ಒಪ್ಪಂದ. ಏನಿದು ಮ್ಯಾಚ್‌ ಫಿಕ್ಸಿಂಗ್‌ ಎಂದು ಇದೀಗ ಮೊದಲ ಬಾರಿಗೆ ಕೇರಳದ ಮತದಾರರು ಕೇಳುತ್ತಿದ್ದಾರೆ. ಯುಡಿಎಫ್ ಮತ್ತು ಎಲ್‌ಡಿಎಫ್ ಅವರನ್ನು ಹೇಗೆ ದಾರಿ ತಪ್ಪಿಸಿದೆ ಎಂದು ಜನರು ನೋಡುತ್ತಿದ್ದಾರೆ” ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಒಂದೇ; ಅವರು ಕೇಂದ್ರದ ಯುಪಿಎ -1 ರಲ್ಲೂ ಪಾಲುದಾರರಾಗಿದ್ದರು. ಎಡಪಂಥೀಯರು ಕಾಂಗ್ರೆಸ್‌ಗೆ ಸಂಚಿಕೆ ಆಧಾರಿತ ಬೆಂಬಲವನ್ನು ನೀಡುತ್ತಲೇ ಇದ್ದಾರೆ. ಆದರೆ ಕೇರಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಅವರು ಪರಸ್ಪರರ ವಿರುದ್ಧ ಆರೋಪ ಪತ್ಯಾರೋಪಗಳನ್ನು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಎಲ್‌ಡಿಎಫ್ ಮತ್ತು ಯುಡಿಎಫ್‌‌ ಎರಡೂ ಮೈತ್ರಿಕೂಟಗಳು ಕೇರಳದ ಪ್ರವಾಸೋದ್ಯಮ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ನಡೆಯುವ ‘ಬಂದ್’ಗಳ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ, ಯುಡಿಎಫ್ ಮತ್ತು ಎಲ್‌ಡಿಎಫ್ ಹೆಚ್ಚಿನ ಸಂಖ್ಯೆಯ ರಸ್ತೆ ತಡೆಗಳನ್ನು ನಡೆಸಿ ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸುತ್ತಿದೆ ಹೇಳಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ 2021 ರ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಫಲಿತಾಂಶಗಳು ಮೇ 2 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ – ರಾಮಸೇನೆಯ ಸಂಸ್ಥಾಪಕ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...