Homeಮುಖಪುಟಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಬಿಜೆಪಿ ಶಾಸಕ ಒ ರಾಜಗೋಪಾಲ್ ವಿಧಾನಸಭೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದ್ದರಿಂದ ಸಭಯನ್ನು ಬಹಿಷ್ಕರಿಸಿ ಹೊರ ನಡೆದರು. ನಂತರ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜೀನಾಮೆಯನ್ನು ಕೋರಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಪಕ್ಷದ ಕೆಲವು ಮುಖಂಡರನ್ನು ವಿಧಾನಸಭೆಯ ಹೊರಗೆ ಧರಣಿ ನಡೆಸಿದ್ದಕ್ಕಾಗಿ ಪೊಲೀಸರು ಬಂಧಿಸಿದರು.

ಈ ಸಂದರ್ಭದಲ್ಲಿ ನಿರ್ಣಯವನ್ನು ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ರಾಜ್ಯ ಸರ್ಕಾರವು ಹೆಚ್ಚಿನ ಪಾಲನ್ನು ಹೊಂದಿರುವ ಸ್ಪೆಷಲ್ ಪರ್ಪಸ್ ವೆಹಿಕಲ್ ಕಂಪನಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡಬೇಕ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

“ಕಳೆದ ಎರಡು ವರ್ಷಗಳಿಂದ ರಾಜ್ಯವು ಈ ಕ್ರಮವನ್ನು ವಿರೋಧಿಸುತ್ತಿದೆ. ನಾನು ಪ್ರಧಾನಿ ಮೋದಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇಷ್ಟಾಗಿಯು ರಾಜ್ಯದ ಪ್ರತಿಭಟನೆಯನ್ನು ನಿರ್ಲಕ್ಷಿಸಿ ಖಾಸಗಿ ಘಟಕಕ್ಕೆ ಹಸ್ತಾಂತರಿಸಲಾಯಿತು. ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇರಳ ವಿಧಾನಸಭೆಯು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಸಿಎಂ ನಿರ್ಣಯವನ್ನು ಪರಿಚಯಿಸಿದರು.

ಕಳೆದ ವಾರ ಕೇರಳ ಸರ್ಕಾರ ಈ ಕೇಂದ್ರದ ನಿರ್ಧಾರವನ್ನು ತಡೆಹಿಡಿಯಲು ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ಇದು ಒಂದೆರಡು ದಿನಗಳಲ್ಲಿ ನ್ಯಾಯಾಲಯದ ಮುಂದೆ ಬರಲಿದೆ. ಅಷ್ಟೇ ಅಲ್ಲದೆ ಈ ನಿರ್ಧಾರವನ್ನು ವಿರೋಧಿಸಲು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಆದರೆ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ, ಖಾಸಗಿ ಕಂಪೆನಿಗೆ ನೀಡಿದರೆ ಹೆಚ್ಚು ಅಗತ್ಯವಿರುವ ಅಭಿವೃದ್ಧಿಗೆ ಸಹಾಯ ಆಗುತ್ತದೆ ಎಂದು ಹೇಳಿದ್ದರು.

ನಿರ್ಣಯವನ್ನು ಬೆಂಬಲಿಸುವಾಗ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಲಾ, ಅದೇ ಕೈಗಾರಿಕಾ ಗುಂಪು ಪ್ರತಿನಿಧಿಸುವ ಬಿಡ್ಡಿಂಗ್ ಅನ್ನು ನಿರ್ವಹಿಸಲು ಸರ್ಕಾರವು ಕಾನೂನು ಏಜೆನ್ಸಿಯನ್ನು ನೇಮಿಸಿರುವುದು ವಿಮಾನ ನಿಲ್ದಾಣವನ್ನು ಅದಾನಿ ಗುಂಪಿಗೆ ಹಸ್ತಾಂತರಿಸುವ ಕ್ರಿಮಿನಲ್ ಪಿತೂರಿ ಇದೆ ಎಂದು ಹೇಳಿದರು. ಈ ಬಗ್ಗೆ ರಾಜ್ಯ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಪ್ರತಿಕ್ರಿಯಿಸಿದ್ದು ಕಾನೂನು ಏಜೆನ್ಸಿಯ ಹಿನ್ನೆಲೆ ಬಗ್ಗೆ ಸರ್ಕಾರಕ್ಕೆ ತಿಳಿದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರವನ್ನು ಕೇರಳ ಸರ್ಕಾರ ಅನ್ಯಧರ್ಮಿಯರಿಗೆ ನೀಡಿದೆಯೆ?

ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸುತ್ತಿದೆ ಮತ್ತು ಅನೇಕ ಕಾನೂನು ಹೋರಾಟಗಳನ್ನು ನಡೆಸಿದೆ ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ, ಇದು ನೀತಿ ನಿರ್ಧಾರದ ಭಾಗವಾಗಿದೆ ಎಂದು ಹೇಳಿದೆ.

2019 ರ ಫೆಬ್ರವರಿಯಲ್ಲಿ, ಸರ್ಕಾರಿ ಸ್ವಾಮ್ಯದ ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ವಿಮಾನ ನಿಲ್ದಾಣಕ್ಕಾಗಿ ಮುಕ್ತ ಬಿಡ್ಡಿಂಗ್‌ನಲ್ಲಿ ಭಾಗವಹಿಸಿತ್ತು ಆದರೆ ಅದಾನಿ ಎಂಟರ್‌ಪ್ರೈಸಸ್ ಅತ್ಯಧಿಕ ಮೊತ್ತವನ್ನು ಉಲ್ಲೇಖಿಸಿ ಅದನ್ನು ಗೆದ್ದುಕೊಂಡಿತ್ತು. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಬಿಡ್ ಕಳೆದುಕೊಂಡ ನಂತರ ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.


ಓದಿ:  ಸಹ ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...