Homeಮುಖಪುಟಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಬಿಜೆಪಿ ಶಾಸಕ ಒ ರಾಜಗೋಪಾಲ್ ವಿಧಾನಸಭೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದ್ದರಿಂದ ಸಭಯನ್ನು ಬಹಿಷ್ಕರಿಸಿ ಹೊರ ನಡೆದರು. ನಂತರ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜೀನಾಮೆಯನ್ನು ಕೋರಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಪಕ್ಷದ ಕೆಲವು ಮುಖಂಡರನ್ನು ವಿಧಾನಸಭೆಯ ಹೊರಗೆ ಧರಣಿ ನಡೆಸಿದ್ದಕ್ಕಾಗಿ ಪೊಲೀಸರು ಬಂಧಿಸಿದರು.

ಈ ಸಂದರ್ಭದಲ್ಲಿ ನಿರ್ಣಯವನ್ನು ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ರಾಜ್ಯ ಸರ್ಕಾರವು ಹೆಚ್ಚಿನ ಪಾಲನ್ನು ಹೊಂದಿರುವ ಸ್ಪೆಷಲ್ ಪರ್ಪಸ್ ವೆಹಿಕಲ್ ಕಂಪನಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡಬೇಕ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

“ಕಳೆದ ಎರಡು ವರ್ಷಗಳಿಂದ ರಾಜ್ಯವು ಈ ಕ್ರಮವನ್ನು ವಿರೋಧಿಸುತ್ತಿದೆ. ನಾನು ಪ್ರಧಾನಿ ಮೋದಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇಷ್ಟಾಗಿಯು ರಾಜ್ಯದ ಪ್ರತಿಭಟನೆಯನ್ನು ನಿರ್ಲಕ್ಷಿಸಿ ಖಾಸಗಿ ಘಟಕಕ್ಕೆ ಹಸ್ತಾಂತರಿಸಲಾಯಿತು. ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇರಳ ವಿಧಾನಸಭೆಯು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಸಿಎಂ ನಿರ್ಣಯವನ್ನು ಪರಿಚಯಿಸಿದರು.

ಕಳೆದ ವಾರ ಕೇರಳ ಸರ್ಕಾರ ಈ ಕೇಂದ್ರದ ನಿರ್ಧಾರವನ್ನು ತಡೆಹಿಡಿಯಲು ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ಇದು ಒಂದೆರಡು ದಿನಗಳಲ್ಲಿ ನ್ಯಾಯಾಲಯದ ಮುಂದೆ ಬರಲಿದೆ. ಅಷ್ಟೇ ಅಲ್ಲದೆ ಈ ನಿರ್ಧಾರವನ್ನು ವಿರೋಧಿಸಲು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಆದರೆ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ, ಖಾಸಗಿ ಕಂಪೆನಿಗೆ ನೀಡಿದರೆ ಹೆಚ್ಚು ಅಗತ್ಯವಿರುವ ಅಭಿವೃದ್ಧಿಗೆ ಸಹಾಯ ಆಗುತ್ತದೆ ಎಂದು ಹೇಳಿದ್ದರು.

ನಿರ್ಣಯವನ್ನು ಬೆಂಬಲಿಸುವಾಗ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಲಾ, ಅದೇ ಕೈಗಾರಿಕಾ ಗುಂಪು ಪ್ರತಿನಿಧಿಸುವ ಬಿಡ್ಡಿಂಗ್ ಅನ್ನು ನಿರ್ವಹಿಸಲು ಸರ್ಕಾರವು ಕಾನೂನು ಏಜೆನ್ಸಿಯನ್ನು ನೇಮಿಸಿರುವುದು ವಿಮಾನ ನಿಲ್ದಾಣವನ್ನು ಅದಾನಿ ಗುಂಪಿಗೆ ಹಸ್ತಾಂತರಿಸುವ ಕ್ರಿಮಿನಲ್ ಪಿತೂರಿ ಇದೆ ಎಂದು ಹೇಳಿದರು. ಈ ಬಗ್ಗೆ ರಾಜ್ಯ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಪ್ರತಿಕ್ರಿಯಿಸಿದ್ದು ಕಾನೂನು ಏಜೆನ್ಸಿಯ ಹಿನ್ನೆಲೆ ಬಗ್ಗೆ ಸರ್ಕಾರಕ್ಕೆ ತಿಳಿದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರವನ್ನು ಕೇರಳ ಸರ್ಕಾರ ಅನ್ಯಧರ್ಮಿಯರಿಗೆ ನೀಡಿದೆಯೆ?

ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸುತ್ತಿದೆ ಮತ್ತು ಅನೇಕ ಕಾನೂನು ಹೋರಾಟಗಳನ್ನು ನಡೆಸಿದೆ ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ, ಇದು ನೀತಿ ನಿರ್ಧಾರದ ಭಾಗವಾಗಿದೆ ಎಂದು ಹೇಳಿದೆ.

2019 ರ ಫೆಬ್ರವರಿಯಲ್ಲಿ, ಸರ್ಕಾರಿ ಸ್ವಾಮ್ಯದ ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ವಿಮಾನ ನಿಲ್ದಾಣಕ್ಕಾಗಿ ಮುಕ್ತ ಬಿಡ್ಡಿಂಗ್‌ನಲ್ಲಿ ಭಾಗವಹಿಸಿತ್ತು ಆದರೆ ಅದಾನಿ ಎಂಟರ್‌ಪ್ರೈಸಸ್ ಅತ್ಯಧಿಕ ಮೊತ್ತವನ್ನು ಉಲ್ಲೇಖಿಸಿ ಅದನ್ನು ಗೆದ್ದುಕೊಂಡಿತ್ತು. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಬಿಡ್ ಕಳೆದುಕೊಂಡ ನಂತರ ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.


ಓದಿ:  ಸಹ ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...