Homeಮುಖಪುಟಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಬಿಜೆಪಿ ಶಾಸಕ ಒ ರಾಜಗೋಪಾಲ್ ವಿಧಾನಸಭೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದ್ದರಿಂದ ಸಭಯನ್ನು ಬಹಿಷ್ಕರಿಸಿ ಹೊರ ನಡೆದರು. ನಂತರ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜೀನಾಮೆಯನ್ನು ಕೋರಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಪಕ್ಷದ ಕೆಲವು ಮುಖಂಡರನ್ನು ವಿಧಾನಸಭೆಯ ಹೊರಗೆ ಧರಣಿ ನಡೆಸಿದ್ದಕ್ಕಾಗಿ ಪೊಲೀಸರು ಬಂಧಿಸಿದರು.

ಈ ಸಂದರ್ಭದಲ್ಲಿ ನಿರ್ಣಯವನ್ನು ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ರಾಜ್ಯ ಸರ್ಕಾರವು ಹೆಚ್ಚಿನ ಪಾಲನ್ನು ಹೊಂದಿರುವ ಸ್ಪೆಷಲ್ ಪರ್ಪಸ್ ವೆಹಿಕಲ್ ಕಂಪನಿಗೆ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅವಕಾಶ ನೀಡಬೇಕ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

“ಕಳೆದ ಎರಡು ವರ್ಷಗಳಿಂದ ರಾಜ್ಯವು ಈ ಕ್ರಮವನ್ನು ವಿರೋಧಿಸುತ್ತಿದೆ. ನಾನು ಪ್ರಧಾನಿ ಮೋದಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇಷ್ಟಾಗಿಯು ರಾಜ್ಯದ ಪ್ರತಿಭಟನೆಯನ್ನು ನಿರ್ಲಕ್ಷಿಸಿ ಖಾಸಗಿ ಘಟಕಕ್ಕೆ ಹಸ್ತಾಂತರಿಸಲಾಯಿತು. ಕೇಂದ್ರವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇರಳ ವಿಧಾನಸಭೆಯು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಸಿಎಂ ನಿರ್ಣಯವನ್ನು ಪರಿಚಯಿಸಿದರು.

ಕಳೆದ ವಾರ ಕೇರಳ ಸರ್ಕಾರ ಈ ಕೇಂದ್ರದ ನಿರ್ಧಾರವನ್ನು ತಡೆಹಿಡಿಯಲು ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ಇದು ಒಂದೆರಡು ದಿನಗಳಲ್ಲಿ ನ್ಯಾಯಾಲಯದ ಮುಂದೆ ಬರಲಿದೆ. ಅಷ್ಟೇ ಅಲ್ಲದೆ ಈ ನಿರ್ಧಾರವನ್ನು ವಿರೋಧಿಸಲು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಆದರೆ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ, ಖಾಸಗಿ ಕಂಪೆನಿಗೆ ನೀಡಿದರೆ ಹೆಚ್ಚು ಅಗತ್ಯವಿರುವ ಅಭಿವೃದ್ಧಿಗೆ ಸಹಾಯ ಆಗುತ್ತದೆ ಎಂದು ಹೇಳಿದ್ದರು.

ನಿರ್ಣಯವನ್ನು ಬೆಂಬಲಿಸುವಾಗ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಲಾ, ಅದೇ ಕೈಗಾರಿಕಾ ಗುಂಪು ಪ್ರತಿನಿಧಿಸುವ ಬಿಡ್ಡಿಂಗ್ ಅನ್ನು ನಿರ್ವಹಿಸಲು ಸರ್ಕಾರವು ಕಾನೂನು ಏಜೆನ್ಸಿಯನ್ನು ನೇಮಿಸಿರುವುದು ವಿಮಾನ ನಿಲ್ದಾಣವನ್ನು ಅದಾನಿ ಗುಂಪಿಗೆ ಹಸ್ತಾಂತರಿಸುವ ಕ್ರಿಮಿನಲ್ ಪಿತೂರಿ ಇದೆ ಎಂದು ಹೇಳಿದರು. ಈ ಬಗ್ಗೆ ರಾಜ್ಯ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಪ್ರತಿಕ್ರಿಯಿಸಿದ್ದು ಕಾನೂನು ಏಜೆನ್ಸಿಯ ಹಿನ್ನೆಲೆ ಬಗ್ಗೆ ಸರ್ಕಾರಕ್ಕೆ ತಿಳಿದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರವನ್ನು ಕೇರಳ ಸರ್ಕಾರ ಅನ್ಯಧರ್ಮಿಯರಿಗೆ ನೀಡಿದೆಯೆ?

ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸುತ್ತಿದೆ ಮತ್ತು ಅನೇಕ ಕಾನೂನು ಹೋರಾಟಗಳನ್ನು ನಡೆಸಿದೆ ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ, ಇದು ನೀತಿ ನಿರ್ಧಾರದ ಭಾಗವಾಗಿದೆ ಎಂದು ಹೇಳಿದೆ.

2019 ರ ಫೆಬ್ರವರಿಯಲ್ಲಿ, ಸರ್ಕಾರಿ ಸ್ವಾಮ್ಯದ ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ವಿಮಾನ ನಿಲ್ದಾಣಕ್ಕಾಗಿ ಮುಕ್ತ ಬಿಡ್ಡಿಂಗ್‌ನಲ್ಲಿ ಭಾಗವಹಿಸಿತ್ತು ಆದರೆ ಅದಾನಿ ಎಂಟರ್‌ಪ್ರೈಸಸ್ ಅತ್ಯಧಿಕ ಮೊತ್ತವನ್ನು ಉಲ್ಲೇಖಿಸಿ ಅದನ್ನು ಗೆದ್ದುಕೊಂಡಿತ್ತು. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಬಿಡ್ ಕಳೆದುಕೊಂಡ ನಂತರ ಈ ಕ್ರಮವನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.


ಓದಿ:  ಸಹ ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...