Homeಮುಖಪುಟಬಿಜೆಪಿಗೆ ಮುಳುವಾದ 'ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ

ಬಿಜೆಪಿಗೆ ಮುಳುವಾದ ‘ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ

- Advertisement -
- Advertisement -

ಕೇರಳ ಸ್ಟೋರಿ ಎಂಬ ಕಲ್ಪಿತ ಚಲನಚಿತ್ರ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆ ಸ್ಟೋರಿಯಿಂದ ಬಿಜೆಪಿಗೆ ಬೀಳಬೇಕಿದ್ದ ಮತಗಳು ಕೂಡ ಈಗ ಸಿಗದಂತಾಗಿದೆ ಎಂದು ಕೇರಳದ ಮಲಪ್ಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಎಂ ಅಬ್ದುಲ್ ಸಲಾಂ ಅಸಹಾಯಕತೆ ತೋಡಿಕೊಂಡಿದ್ದಾರೆ.

ಡಾ ಎಂ ಅಬ್ದುಲ್ ಸಲಾಂ ಎನ್‌ಡಿಎ ಮೈತ್ರಿಕೂಟದ ಕೇರಳದ ಏಕೈಕ ಮುಸ್ಲಿಂ ಅಭ್ಯರ್ಥಿಯಾಗಿದ್ದಾರೆ. ಕಳೆದ ಬಾರಿ ಮೋದಿ ಕೇರಳಕ್ಕೆ ಚುನಾವಣೆ ಪ್ರಚಾರಕ್ಕೆ ಬಂದಾಗ ಸಲಾಂ ಅವರನ್ನು ಆಹ್ವಾನಿಸಿಲ್ಲ ಎಂದು ಹೇಳಲಾಗಿತ್ತು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳದಲ್ಲಿ ‘ಕೇರಳ ಸ್ಟೋರಿ ಚಲನಚಿತ್ರ’ವನ್ನು ದೂರದರ್ಶನ ಪ್ರಸಾರ ಮಾಡುವ ಬಗ್ಗೆ ಕೇರಳ ಕಾಂಗ್ರೆಸ್ ‘ಭಾರತೀಯ ಚುನಾವಣಾ ಆಯೋಗ’ವನ್ನು (ಇಸಿಐ) ಸಂಪರ್ಕಿಸಿ ದೂರು ನೀಡಿತ್ತು. ದೂರದರ್ಶನದ ನಿರ್ಧಾರವು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ ಎರಡರಿಂದಲೂ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಬಿಜೆಪಿ ಅಭ್ಯರ್ಥಿಯೇ ಈ ಕಲ್ಪಿತ ಸಿನಿಮಾ ಪ್ರದರ್ಶನದಿಂದ ಬಿಜೆಪಿ ವೋಟ್‌ ಬ್ಯಾಂಕ್‌ಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಕೇರಳ ಸ್ಟೋರಿ ಸಿನಿಮಾ ಪ್ರದರ್ಶಿಸುವುದರಿಂದ ಮುಸ್ಲಿಮರು ಬಿಜೆಪಿಯಿಂದ ದೂರವಾಗುತ್ತಾರೆ. ಚುನಾವಣಾ ಸಂದರ್ಭವಾಗಿರುವ ಹಿನ್ನೆಲೆ ಮತಗಳ ಮೇಲೆ ಪ್ರಭಾವ ಬೀರುತ್ತದೆ. ಮಲಪ್ಪುರಂ ಕ್ಷೇತ್ರದಲ್ಲಿ ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರವಾಗಿದೆ ಎಂದು ಹೇಳಿದ್ದಾರೆ. ನನಗೆ ಶೇ.70ರಷ್ಟು ಮುಸ್ಲಿಮರಿರುವ ಜಿಲ್ಲೆಯಿಂದ ಟಿಕೆಟ್‌ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಶೇ.5ರಷ್ಟು ಮತ ಪಡೆದಿದೆ. ಈ ವಿದಾತ್ಮಕ ಸಿನಿಮಾದಿಂದ ಈ ಕ್ಷೇತ್ರದಲ್ಲಿ ನಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಚೆನ್ನಾಗಿ ಊಹಿಸಬಹುದು ಎಂದು ಹೇಳಿದ್ದಾರೆ.

ಕೇರಳದ ಸ್ಟೋರಿ ಸಿನಿಮಾ ಆರಂಭದಿಂದಲೂ ವಿವಾದಾತ್ಮಕವಾಗಿದೆ. ಇದು ಕೇರಳವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಮತ್ತು ಕೇರಳದ ಮುಸ್ಲಿಂ ಸಮುದಾಯಗಳ ಬಗ್ಗೆ ತಪ್ಪು ಸಂದೇಶ ನೀಡುತ್ತದೆ. ಈ ಚಲನಚಿತ್ರವನ್ನು ಇತ್ತೀಚೆಗೆ ಭಾರತದ ಸರ್ಕಾರಿ ಸ್ವಾಮ್ಯದ ದೂರದರ್ಶನ ಪ್ರಸಾರಕ್ಕಾಗಿ ಆಯ್ಕೆ ಮಾಡಿತ್ತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಸೇರಿದಂತೆ ಹಲವಾರು ರಾಜಕಾರಣಿಗಳು ಚಲನಚಿತ್ರವನ್ನು ಟೀಕಿಸಿದ್ದರು.

ಇದು ಪಕ್ಷದ ನಿಲುವಲ್ಲ, ಕೇವಲ ನನ್ನ ವೈಯಕ್ತಿಕ ಅಭಿಪ್ರಾಯ ಎಂದ ಡಾ ಎಂ ಅಬ್ದುಲ್ ಸಲಾಂ, ಮತಬ್ಯಾಂಕ್ ನಡುವೆ ಹಗೆತನವನ್ನು ಹುಟ್ಟುಹಾಕಲು ಇದು ಸೂಕ್ತ ಸಮಯವಲ್ಲ ಎಂದು ನಾನು ನಂಬುತ್ತೇನೆ. 70% ಮುಸ್ಲಿಮರು ಮತಬ್ಯಾಂಕ್ ಹೊಂದಿರುವ ಕ್ಷೇತ್ರದಲ್ಲಿ ನಾನು ಮುಸ್ಲಿಮರ ಶತ್ರು ಎಂಬ ಹಣೆಪಟ್ಟಿ ಹೊಂದಲು ಬಯಸುವುದಿಲ್ಲ ಎಂದು ಹೇಳಿದರು. ಕೇರಳ ಸ್ಟೋರಿ ಚಿತ್ರದ ಕುರಿತು ಮಾತನಾಡಿದ ಅವರು, ನಾನು ಸಿನಿಮಾವನ್ನು ನೋಡಿಲ್ಲ ಮತ್ತು ಚಿತ್ರದ ವಿಷಯದ ಬಗ್ಗೆ ಧನಾತ್ಮಕ ಅಥವಾ ಋಣಾತ್ಮಕ ನಿಲುವನ್ನು ತೆಗೆದುಕೊಳ್ಳುತ್ತಿಲ್ಲ. ಇದೊಂದು ಕಥೆ. ಕಥೆಯು ವಾಸ್ತವವನ್ನು ಆಧರಿಸಿರಬಹುದು ಅಥವಾ ಕಾಲ್ಪನಿಕ ಕಥೆಯನ್ನು ಆಧರಿಸಿರಬಹುದು. ಆದ್ದರಿಂದ ಗೊಂದಲವು ತುಂಬಾ ಇದೆ, ಏಕೆಂದರೆ ಕಥೆಯ ನೈಜತೆಯ ಬಗ್ಗೆ ನಿಮಗೆ ತಿಳಿದಿಲ್ಲ, ಅದು ನಿಜವೋ ಅಥವಾ ಕಾಲ್ಪನಿಕವೋ, ನಾನು ಕೇರಳ ಕಥೆಯನ್ನು ನೋಡಿಲ್ಲ ಮತ್ತು ನಾನು ಈ ಬಗ್ಗೆ ಪ್ರಚಾರ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಜಾರಿಗೊಳಿಸುವ ಭರವಸೆಯ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈಗ ಸಿಎಎ ನಿಯಮಗಳನ್ನು ತಿಳಿಸಲಾಗಿದೆ. ಇದು ಅಲ್ಪಸಂಖ್ಯಾತರಲ್ಲಿ ಸಾಕಷ್ಟು ಗೊಂದಲ ಮತ್ತು ಆಕ್ರೋಶವನ್ನು ಸೃಷ್ಟಿಸಿದೆ. ಆದರೆ ನೀವು ಕಾಯಿದೆಯನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದರೆ, ಅದು ಜನರನ್ನು ಎಂದೂ ದೇಶ ತೊರೆಯಲು ಹೇಳುವುದಿಲ್ಲ ಎಂದು ನಿಮಗೆ ಅರಿವಾಗುತ್ತದೆ. ಇದು ಅರ್ಹ ಜನರನ್ನು ದೇಶಕ್ಕೆ ಸೇರಿಸುವುದಕ್ಕಾಗಿದೆ. ವಿರೋಧ ಪಕ್ಷಗಳು ಈ ಬಗ್ಗೆ ಗೊಂದಲ ಸೃಷ್ಟಿಸಿದೆ. ನಾವು ಗೊಂದಲವನ್ನು ನಿವಾರಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಮಹಿಳೆಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಪಿಸಿ ಮೋಹನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...