Homeಮುಖಪುಟಬಿಜೆಪಿಗೆ ಮುಳುವಾದ 'ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ

ಬಿಜೆಪಿಗೆ ಮುಳುವಾದ ‘ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ

- Advertisement -
- Advertisement -

ಕೇರಳ ಸ್ಟೋರಿ ಎಂಬ ಕಲ್ಪಿತ ಚಲನಚಿತ್ರ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆ ಸ್ಟೋರಿಯಿಂದ ಬಿಜೆಪಿಗೆ ಬೀಳಬೇಕಿದ್ದ ಮತಗಳು ಕೂಡ ಈಗ ಸಿಗದಂತಾಗಿದೆ ಎಂದು ಕೇರಳದ ಮಲಪ್ಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಎಂ ಅಬ್ದುಲ್ ಸಲಾಂ ಅಸಹಾಯಕತೆ ತೋಡಿಕೊಂಡಿದ್ದಾರೆ.

ಡಾ ಎಂ ಅಬ್ದುಲ್ ಸಲಾಂ ಎನ್‌ಡಿಎ ಮೈತ್ರಿಕೂಟದ ಕೇರಳದ ಏಕೈಕ ಮುಸ್ಲಿಂ ಅಭ್ಯರ್ಥಿಯಾಗಿದ್ದಾರೆ. ಕಳೆದ ಬಾರಿ ಮೋದಿ ಕೇರಳಕ್ಕೆ ಚುನಾವಣೆ ಪ್ರಚಾರಕ್ಕೆ ಬಂದಾಗ ಸಲಾಂ ಅವರನ್ನು ಆಹ್ವಾನಿಸಿಲ್ಲ ಎಂದು ಹೇಳಲಾಗಿತ್ತು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳದಲ್ಲಿ ‘ಕೇರಳ ಸ್ಟೋರಿ ಚಲನಚಿತ್ರ’ವನ್ನು ದೂರದರ್ಶನ ಪ್ರಸಾರ ಮಾಡುವ ಬಗ್ಗೆ ಕೇರಳ ಕಾಂಗ್ರೆಸ್ ‘ಭಾರತೀಯ ಚುನಾವಣಾ ಆಯೋಗ’ವನ್ನು (ಇಸಿಐ) ಸಂಪರ್ಕಿಸಿ ದೂರು ನೀಡಿತ್ತು. ದೂರದರ್ಶನದ ನಿರ್ಧಾರವು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ ಎರಡರಿಂದಲೂ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಬಿಜೆಪಿ ಅಭ್ಯರ್ಥಿಯೇ ಈ ಕಲ್ಪಿತ ಸಿನಿಮಾ ಪ್ರದರ್ಶನದಿಂದ ಬಿಜೆಪಿ ವೋಟ್‌ ಬ್ಯಾಂಕ್‌ಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಕೇರಳ ಸ್ಟೋರಿ ಸಿನಿಮಾ ಪ್ರದರ್ಶಿಸುವುದರಿಂದ ಮುಸ್ಲಿಮರು ಬಿಜೆಪಿಯಿಂದ ದೂರವಾಗುತ್ತಾರೆ. ಚುನಾವಣಾ ಸಂದರ್ಭವಾಗಿರುವ ಹಿನ್ನೆಲೆ ಮತಗಳ ಮೇಲೆ ಪ್ರಭಾವ ಬೀರುತ್ತದೆ. ಮಲಪ್ಪುರಂ ಕ್ಷೇತ್ರದಲ್ಲಿ ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರವಾಗಿದೆ ಎಂದು ಹೇಳಿದ್ದಾರೆ. ನನಗೆ ಶೇ.70ರಷ್ಟು ಮುಸ್ಲಿಮರಿರುವ ಜಿಲ್ಲೆಯಿಂದ ಟಿಕೆಟ್‌ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಶೇ.5ರಷ್ಟು ಮತ ಪಡೆದಿದೆ. ಈ ವಿದಾತ್ಮಕ ಸಿನಿಮಾದಿಂದ ಈ ಕ್ಷೇತ್ರದಲ್ಲಿ ನಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಚೆನ್ನಾಗಿ ಊಹಿಸಬಹುದು ಎಂದು ಹೇಳಿದ್ದಾರೆ.

ಕೇರಳದ ಸ್ಟೋರಿ ಸಿನಿಮಾ ಆರಂಭದಿಂದಲೂ ವಿವಾದಾತ್ಮಕವಾಗಿದೆ. ಇದು ಕೇರಳವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಮತ್ತು ಕೇರಳದ ಮುಸ್ಲಿಂ ಸಮುದಾಯಗಳ ಬಗ್ಗೆ ತಪ್ಪು ಸಂದೇಶ ನೀಡುತ್ತದೆ. ಈ ಚಲನಚಿತ್ರವನ್ನು ಇತ್ತೀಚೆಗೆ ಭಾರತದ ಸರ್ಕಾರಿ ಸ್ವಾಮ್ಯದ ದೂರದರ್ಶನ ಪ್ರಸಾರಕ್ಕಾಗಿ ಆಯ್ಕೆ ಮಾಡಿತ್ತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಸೇರಿದಂತೆ ಹಲವಾರು ರಾಜಕಾರಣಿಗಳು ಚಲನಚಿತ್ರವನ್ನು ಟೀಕಿಸಿದ್ದರು.

ಇದು ಪಕ್ಷದ ನಿಲುವಲ್ಲ, ಕೇವಲ ನನ್ನ ವೈಯಕ್ತಿಕ ಅಭಿಪ್ರಾಯ ಎಂದ ಡಾ ಎಂ ಅಬ್ದುಲ್ ಸಲಾಂ, ಮತಬ್ಯಾಂಕ್ ನಡುವೆ ಹಗೆತನವನ್ನು ಹುಟ್ಟುಹಾಕಲು ಇದು ಸೂಕ್ತ ಸಮಯವಲ್ಲ ಎಂದು ನಾನು ನಂಬುತ್ತೇನೆ. 70% ಮುಸ್ಲಿಮರು ಮತಬ್ಯಾಂಕ್ ಹೊಂದಿರುವ ಕ್ಷೇತ್ರದಲ್ಲಿ ನಾನು ಮುಸ್ಲಿಮರ ಶತ್ರು ಎಂಬ ಹಣೆಪಟ್ಟಿ ಹೊಂದಲು ಬಯಸುವುದಿಲ್ಲ ಎಂದು ಹೇಳಿದರು. ಕೇರಳ ಸ್ಟೋರಿ ಚಿತ್ರದ ಕುರಿತು ಮಾತನಾಡಿದ ಅವರು, ನಾನು ಸಿನಿಮಾವನ್ನು ನೋಡಿಲ್ಲ ಮತ್ತು ಚಿತ್ರದ ವಿಷಯದ ಬಗ್ಗೆ ಧನಾತ್ಮಕ ಅಥವಾ ಋಣಾತ್ಮಕ ನಿಲುವನ್ನು ತೆಗೆದುಕೊಳ್ಳುತ್ತಿಲ್ಲ. ಇದೊಂದು ಕಥೆ. ಕಥೆಯು ವಾಸ್ತವವನ್ನು ಆಧರಿಸಿರಬಹುದು ಅಥವಾ ಕಾಲ್ಪನಿಕ ಕಥೆಯನ್ನು ಆಧರಿಸಿರಬಹುದು. ಆದ್ದರಿಂದ ಗೊಂದಲವು ತುಂಬಾ ಇದೆ, ಏಕೆಂದರೆ ಕಥೆಯ ನೈಜತೆಯ ಬಗ್ಗೆ ನಿಮಗೆ ತಿಳಿದಿಲ್ಲ, ಅದು ನಿಜವೋ ಅಥವಾ ಕಾಲ್ಪನಿಕವೋ, ನಾನು ಕೇರಳ ಕಥೆಯನ್ನು ನೋಡಿಲ್ಲ ಮತ್ತು ನಾನು ಈ ಬಗ್ಗೆ ಪ್ರಚಾರ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಜಾರಿಗೊಳಿಸುವ ಭರವಸೆಯ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈಗ ಸಿಎಎ ನಿಯಮಗಳನ್ನು ತಿಳಿಸಲಾಗಿದೆ. ಇದು ಅಲ್ಪಸಂಖ್ಯಾತರಲ್ಲಿ ಸಾಕಷ್ಟು ಗೊಂದಲ ಮತ್ತು ಆಕ್ರೋಶವನ್ನು ಸೃಷ್ಟಿಸಿದೆ. ಆದರೆ ನೀವು ಕಾಯಿದೆಯನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದರೆ, ಅದು ಜನರನ್ನು ಎಂದೂ ದೇಶ ತೊರೆಯಲು ಹೇಳುವುದಿಲ್ಲ ಎಂದು ನಿಮಗೆ ಅರಿವಾಗುತ್ತದೆ. ಇದು ಅರ್ಹ ಜನರನ್ನು ದೇಶಕ್ಕೆ ಸೇರಿಸುವುದಕ್ಕಾಗಿದೆ. ವಿರೋಧ ಪಕ್ಷಗಳು ಈ ಬಗ್ಗೆ ಗೊಂದಲ ಸೃಷ್ಟಿಸಿದೆ. ನಾವು ಗೊಂದಲವನ್ನು ನಿವಾರಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಮಹಿಳೆಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಪಿಸಿ ಮೋಹನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...