Homeಕರೋನಾ ತಲ್ಲಣಕೊರೊನಾ ಲಾಕ್‌ಡೌನ್‌ಗೆ ನಲುಗಿದ ಕೋಲಾರ ಜಿಲ್ಲೆ: ಹುಲುಸಾದ ಬೆಳೆ ಹೊಲದಲ್ಲೇ ನೆಲಸಮ

ಕೊರೊನಾ ಲಾಕ್‌ಡೌನ್‌ಗೆ ನಲುಗಿದ ಕೋಲಾರ ಜಿಲ್ಲೆ: ಹುಲುಸಾದ ಬೆಳೆ ಹೊಲದಲ್ಲೇ ನೆಲಸಮ

ಕೋಲಾರ ಜಿಲ್ಲೆ ಹಾಲು, ರೇಷ್ಮೆ ಮತ್ತು ಮಾವಿನ ಮಡಿಲು ಎಂದೇ ಹೆಸರು ಪಡೆದಿರುವ ಜಿಲ್ಲೆ. ಇಲ್ಲಿ ಟಮೋಟ, ತರಕಾರಿಗಳು ದೆಹಲಿ, ಪುಣೆ, ಮುಂಬೈ, ಬಾಂಗ್ಲಾದೇಶ, ನೇಪಾಳ ಹಾಗೂ ಇತರೆ ರಾಜ್ಯ, ದೇಶಗಳಿಗೂ ರಫ್ತಾಗುತ್ತದೆ.

- Advertisement -
- Advertisement -

ಕೊರೊನಾದಿಂದ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲಾ ಕ್ಷೇತ್ರಗಳಿಗೂ ತೊಂದರೆಯಾಗಿದೆ. ಅದರಂತೆ ಕೃಷಿ ಕ್ಷೇತ್ರದ ಮೇಲೂ ತುಂಬಾ ದೊಡ್ಡ ಹೊಡೆತ ಬಿದ್ದಿದೆ. ಆದರೆ ಬೇರೆ ಕ್ಷೇತ್ರಗಳ ಬಗ್ಗೆ ಮಾಧ್ಯಮಗಳಾಗಲಿ, ವ್ಯವಸ್ಥೆ, ಪ್ರಭುತ್ವ ಕೊಟ್ಟ ಗಮನವನ್ನು ಕೃಷಿ ಕ್ಷೇತ್ರಕ್ಕೆ ನೀಡದಿರುವುದು ದುರಂತ. ಕೃಷಿ ಸಂಕಷ್ಟಗಳನ್ನು ಮುನ್ನಲೆಗೆ ತಂದಿದ್ದು ಬಹಳ ಕಡಿಮೆ.

ತೀರಾ ಅನೀರಿಕ್ಷಿತವಾಗಿ ಕೊರೊನಾ ಒಂದನೇ ಅಲೆ ಬಂತು. ನಮ್ಮ ರೈತರಿಗೆ ಇಂತಹ ಪರಿಸ್ಥಿತಿ ಬರುತ್ತೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಆಗಾಗಲೇ ಹೂ, ಹಣ್ಣು, ತರಕಾರಿಗಳನ್ನು, ಎಲ್ಲಾ ರೀತಿಯ ಬೆಳೆಗಳನ್ನು ನಾಟಿ ಮಾಡಲಾಗಿತ್ತು ಮತ್ತು ಒಂದಷ್ಟು ಬೆಳೆಗಳು ಕಟಾವಿಗೂ ಬಂದಿತು. ಬೆಳೆದ ಬೆಳೆಗಳು ಮಾರಾವಾಗದೆ ತೋಟದಲ್ಲಿ, ರಸ್ತೆಗಳಿಗೆ ಸುರಿಯುವ ಪರಿಸ್ಥಿತಿ ನಿರ್ಮಾಣವಾಯಿತು, ಈ ಎಲ್ಲದರ ಹೊಡೆತಗಳನ್ನು ರೈತರು ತಡೆದುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಬಂತು. ಈ ಸಮಯದಲ್ಲಿ ಸರ್ಕಾರ ರೈತರ ರಕ್ಷಣೆಗೆ ನಿಲ್ಲುತ್ತೇವೆ ಎಂಬ ಭರವಸೆ ಕೊಟ್ಟರೆ ಹೊರತು ವಾಸ್ತವದಲ್ಲಿ ರೈತರ ರಕ್ಷಣೆಗೆ ನಿಲ್ಲಲಿಲ್ಲ. ಇನ್ನು ಈ ಸಮಸ್ಯೆಗಳಿಂದ ರೈತರು ಚೇತರಿಸಿಕೊಳ್ಳುವ ಮೊದಲೇ ಕೊರೊನಾ ಎರಡನೇ ಅಲೆ ಬಂತು. ಈ ಅಲೆಗೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿರಲಿಲ್ಲ. ಆಸ್ಪತ್ರೆ, ಬೆಡ್, ಆಕ್ಸಿಜನ್ ಯಾವುದು ಸಿದ್ದತೆ ಮಾಡಿಕೊಂಡಿರಲಿಲ್ಲ. ಇಂತಹ ಸಮಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ ಮಾಡಿದರು.

ನಾವು ಈಗಾಗಲೇ ಹಸಿರುಕ್ರಾಂತಿ ಎಂಬ ಹೆಸರಿನಲ್ಲಿ ಬಿತ್ತನೆಬೀಜ, ರಸಗೊಬ್ಬರ, ಔಷಧಿಗಳು ಎಲ್ಲದಕ್ಕೂ ನಾವು ಸರ್ಕಾರ ಮತ್ತು ಕಾರ್ಪೊರೇಟ್ ಕಂಪನಿಗಳ ಮೇಲೆ ಅವಲಂಬಿತರಾಗಿದ್ದೇವೆ. ಉತ್ತಮ ಬೆಳೆ ಪಸಲು ಬರಬೇಕಾದರೆ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಸಿಂಪಣೆ ಮಾಡದೇ ಇದ್ದರೆ ಇಳುವರಿ ಮತ್ತು ಉತ್ತಮ ಬೆಳೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂದರೆ ಖರ್ಚು ದುಬಾರಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಬೆಳೆದ ತರಕಾರಿ, ಹಣ್ಣು, ಹೂ ಮತ್ತು ತೋಟಗಾರಿಕಾ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ ಸಂಕಷ್ಟಕ್ಕೆ ಗುರಿಯಾದರು. ಈ ಲಾಕ್‌ಡೌನ್‌ನಿಂದಾಗಿ ಬೆಳೆದಿರುವ ಬೆಳೆಗಳನ್ನು ರಸ್ತೆಗೆ ತಂದು ಸುರಿಯುವ ಘಟನೆಗಳನ್ನು ನೋಡಬೇಕಾಯಿತು. ಕೋಲಾರದಲ್ಲಿ ಇತ್ತೀಚೆಗೆ ನೂರಾರು ರೈತರು ಬಹುಕಷ್ಟಪಟ್ಟು ಬೆಳೆದ ಟಮೋಟವನ್ನು ರಸ್ತೆಗೆ ಸುರಿದಿದ್ದನ್ನು ನೋಡಬಹುದು.

ಕೋಲಾರ ಜಿಲ್ಲೆ ಹಾಲು, ರೇಷ್ಮೆ ಮತ್ತು ಮಾವಿನ ಮಡಿಲು ಎಂದೇ ಹೆಸರು ಪಡೆದಿರುವ ಜಿಲ್ಲೆ. ಇಲ್ಲಿ ಬೆಳೆದಂತಹ ಮಾವು, ಟಮೋಟ, ತರಕಾರಿಗಳು ದೆಹಲಿ, ಪುಣೆ, ಮುಂಬೈ, ಬಾಂಗ್ಲಾದೇಶ, ನೇಪಾಳ ಹಾಗೂ ಇತರೆ ರಾಜ್ಯ, ದೇಶಗಳಿಗೂ ರಫ್ತಾಗುತ್ತದೆ. ಸರ್ಕಾರದ ಅವೈಜ್ಞಾನಿಕ ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ರೂ ಬಂಡವಾಳ ಹಾಕಿ ಬೆಳೆದಿದ್ದ ತರಕಾರಿ, ದ್ರಾಕ್ಷಿ, ಟಮೋಟ, ಪಪ್ಪಾಯಗಳಿಗೆ ಬೆಲೆಯಿಲ್ಲದೆ, ಮತ್ತೊಂದು ಕಡೆ ಮಾರುಕಟ್ಟೆಗೆ ಸಾಗಿಸಲು ವಾಹನಗಳ ವ್ಯವಸ್ಥೆಯಿಲ್ಲದೆ ರೈತರು ರಸ್ತೆಗೆ ಸುರಿದರು.

ನಾವು ಕೋಲಾರ ತಾಲ್ಲೂಕು ಹೊಸಮಟ್ಟ ಹಳ್ಳಿ ಗ್ರಾಮದಲ್ಲಿ 10 ಎಕರೆಯಲ್ಲಿ ಟಮೋಟ, 7 ಎಕರೆಯಲ್ಲಿ ಎಲೆಕೋಸು ಬೆಳೆದಿದ್ದೆವು. 1 ಎಕರೆ ಟಮೋಟ ಬೆಳೆಯಲು ಕನಿಷ್ಠ 1.5 ರಿಂದ 2 ಲಕ್ಷದವರೆಗೆ ಬಂಡವಾಳ ಹಾಕಬೇಕು. ಇನ್ನೂ 10 ಎಕರೆಯಲ್ಲಿ ಟಮೋಟ ಬೆಳೆಯಲು ಬಂಡವಾಳ ಎಷ್ಟಾಗಬಹುದು? ಲಾಕ್‌ಡೌನ್ ಸಮಯದಲ್ಲಿ ಕಟಾವಿಗೆ ಬಂದಿದ್ದ ನಮ್ಮದೇ ತೋಟದ 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಟಮೋಟಾಗೆ ಮಾರುಕಟ್ಟೆಯಲ್ಲಿ ಬರುವ ಬೆಲೆ ಕನಿಷ್ಠ ಟಮೋಟ ಬಿಡಿಸಿದ ಕೃಷಿ ಕಾರ್ಮಿಕರಿಗೂ ಕೂಲಿ ಕೊಡಲು ಸಾಲದ ಪರಿಸ್ಥಿತಿ ಉಂಟಾಯಿತು. ಆದ ಕಾರಣ ತೋಟದಲ್ಲಿಯೇ ಅದನ್ನು ನೆಲಸಮ ಮಾಡಲಾಯಿತು. ನಮ್ಮಂತಹ ಆದೆಷ್ಟೊ ರೈತರು ಬೆಳೆಗಳನ್ನು ತೋಟಗಳಲ್ಲಿ, ರಸ್ತೆಗಳಲ್ಲಿ ಕೊಳೆಸಿದರು.

ಇನ್ನು 1 ಎಕರೆ ಕೋಸು ಬೆಳೆಯಲು ಕನಿಷ್ಠ 1 ಲಕ್ಷ ಬಂಡವಾಳ ಬೇಕು. ಆದರೆ ಕೊನೆಗೆ 1Kgಗೆ 2-3 ರೂ ಕೊಟ್ಟರೆ ಏನು ಮಾಡುವುದು?

ನಮ್ಮ ಊರು ಕೇವಲ 40-50 ಮನೆಗಳನ್ನು ಹೊಂದಿರುವ ಚಿಕ್ಕ ಗ್ರಾಮ. ಇಲ್ಲಿ ಕೊರೊನಾ ಬರುವ ಮುನ್ನ 5-6 ರೈತ ಕುಟುಂಬಗಳು ಮಾತ್ರ ಬೆಳೆ ಮಾಡುತ್ತಿದ್ದರು. ಕೆ.ಸಿ ವ್ಯಾಲಿ ನೀರು ಮತ್ತು ಕೊರೊನಾ ಬಂದ ಮೇಲೆ ನಗರಗಳಲ್ಲಿದ್ದ ಎಲ್ಲಾ ಯುವಕರು ಹಳ್ಳಿಗಳತ್ತ ಮುಖ ಮಾಡಿ ಮೂಲ ಕಸುಬಾದ ಕೃಷಿ ಮಾಡಲು ಶುರು ಮಾಡಿದರು. ಈಗ ನಮ್ಮೂರಲ್ಲಿ 30-35 ಕುಟುಂಬಗಳು ಕೃಷಿಯನ್ನೆ ನಂಬಿ ಜೀವನ ಮಾಡುತ್ತಿದ್ದಾರೆ. ಯುವ ಜನತೆ ವ್ಯವಸಾಯ ಮಾಡಿದರೆ ಏನೋ ಲಾಭ ಬರುತ್ತದೆಯೆಂದು ಸಾಲ ಮಾಡಿ ಬಂಡವಾಳ ಹಾಕಿದವರ ಗತಿಯೇನು? ಇವರ ನೆರವಿಗೆ ನಿಲ್ಲುವವರು ಯಾರು? ಇನ್ನೂ ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಎಷ್ಟು ಪರಿಹಾರ ಕೊಟ್ಟಿದೆ? ರೈತರಿಗೆ ಸೇರಿದ್ದು ಕೇವಲ ಬಿಡಿಗಾಸು ಮಾತ್ರ. ಕೆಲವು ರೈತರಿಗೆ ಅದೂ ಇಲ್ಲ..

ಉದಾಹರಣೆಗೆ ನಾವು ಕೊರೊನಾದಿಂದ ಬೆಲೆಯಿಲ್ಲದೆ ಹೊಲದಲ್ಲಿಯೇ ಬೆಳೆ ನೆಲಸಮ ಮಾಡಿದಾಗ ಪರಿಹಾರದ ಹಣ ನಮಗೆ ಸಿಗಲಿಲ್ಲ. ಅಧಿಕಾರಿಗಳು ಮಾಡಿದ ಸಣ್ಣ ತಪ್ಪಿಗೆ ನಾವು ಪರಿಹಾರ ವಂಚಿತರಾದೆವು.
ಇನ್ನೂ ಮಾವು, ಹೂಗಳು, ರೇಷ್ಮೆ ಬೆಳೆಯುವ ರೈತರ ಪರಿಸ್ಥಿತಿ ಹೇಳತೀರದು. ಯಾವುದೇ ಶುಭ ಸಮಾರಂಭಗಳಿಲ್ಲದೆ ದೇವಸ್ಥಾನಗಳಿಲ್ಲದೆ ಹೂಗಳು ಮಾರಟವಾಗಲೇ ಇಲ್ಲ. ಮಾವು ಬೆಳೆದ ರೈತರು ಪ್ರತಿ ಕೆಜಿಗೆ 2-3ರೂಗಳಂತೆಯೂ ಬೆಲೆ ಸಿಗದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ರಾಜ್ಯದಲ್ಲಿ ಸುಮಾರು 1.20 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಾರೆ. ಇಷ್ಟು ಬೆಳೆದರು ಇದರಿಂದ ರೈತರಿಗೂ ಲಾಭ ಸಿಗಲಿಲ್ಲ. ಅತ್ತ ಕಡೆ ಗ್ರಾಹಕನಿಗೂ ಕಡಿಮೆ ಬೆಲೆಗೆ ಹಣ್ಣು-ತರಕಾರಿ ಸಿಗಲಿಲ್ಲ.

ಮತ್ತೊಂದು ಕಡೆ ಮುಂಗಾರು ಶುರುವಾಯಿತು ಬಿತ್ತನೆಗಳು ಪ್ರಾರಂಭವಾದವು ಉಳುಮೆ ಮಾಡಲು ನೇಗಿಲು ಕಟ್ಟಬೇಕು. ನೇಗಿಲಿಗೆ ಹುಳಿ ಕಟ್ಟಬೇಕು. ವೆಲ್ಡಿಂಗ್ ಅಂಗಡಿಗಳು ತೆರೆಯಲೇ ಇಲ್ಲ. ಉಳುಮೆ ಮಾಡಲು ಟ್ರಾಕ್ಟರ್ ತೆಗೆದುಕೊಂಡು ಹೋದರೆ ಒಂದು ನಟ್ಟು ಬೋಲ್ಟ್ ಇಲ್ಲದೇ ಇದ್ದರೂ ಟ್ರಾಕ್ಟರ್ ಮುಂದೆ ಹೋಗುವುದಿಲ್ಲ. ತೋಟಕ್ಕೆ ನೀರು ಹಾಯಿಸಲು ಹನಿ ನೀರಾವರಿ ಬಳಸುತ್ತೇವೆ. ಪೈಪ್ ಹೊಡೆದು ಹೋಗಿದ್ದು ಅದನ್ನು ಅಂಟಿಸಲು ಗಮ್ ಇಲ್ಲ. ನೀರು ಹೊರ ತೆಗೆಯಲು ಮೋಟರ್ Spare Parts ಇಲ್ಲದೇ ಇದ್ರೆ ಕೆಲಸ ಆಗಲ್ಲ. ಇವುಗಳು ಸದ್ಯಕ್ಕೆ ಲಾಕ್‌ಡೌನ್ ಇರುವುದರಿಂದ ಸಿಗುವುದಿಲ್ಲ. ಹೀಗೆ ಸಣ್ಣ ಸಣ್ಣ ವಸ್ತುಗಳಿಂದ ರೈತರಿಗೆ ಒಡೆತ ಬಿತ್ತು. ಆದರೆ ಆಡಳಿತ ನಡೆಸುವ ಸರ್ಕಾರ ಮತ್ತು IAS  ಅಧಿಕಾರಿಗಳು ಕೇವಲ ಗೊಬ್ಬರದ ಅಂಗಡಿ, ಔಷಧಿ ಅಂಗಡಿಗಳು ತೆರೆದರೆ ಕೃಷಿ ಮಾಡಿ ಬಿಡಬಹುದೆಂಬ ಭ್ರಮೆಯಲ್ಲಿದ್ದಾರೆ.

ಇದರ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ರಸಗೊಬ್ಬರಗಳು, ಡ್ರಿಪ್ ಪೈಪ್‌ಗಳ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದರು.

ಇದನ್ನೂ ಓದಿ: ನಳಿನಿ ವಿರುದ್ಧ ಬಿಜೆಪಿ ಐಟಿ ಸೆಲ್: ಒಂದು ಕ್ಲಾಸಿಕ್ ಕೇಸು

ಸರ್ಕಾರವಂತೂ ರೈತರ ನೆರವಿಗೆ ಬರುತ್ತಿಲ್ಲ. ಹಾಗಾಗಿ ರೈತರೇ ಪರ್ಯಾಯ ಆಲೋಚನೆಗಳತ್ತ ಮುಖ ಮಾಡಬೇಕಾಗಿದೆ. ಬೆಳೆದ ತರಕಾರಿಗಳನ್ನು ಮೌಲ್ಯವರ್ಧನೆ ಮಾಡಿ ಬೆಲೆ ಬಂದಾಗ ಮಾರಾಟ ಮಾಡಬೇಕು. ಜೊತೆಗೆ ಸಣ್ಣ ಕೆಲಸಗಳಾದ ಟಮೋಟ ಬೆಳೆಯುವ ರೈತರು ಸಾಸ್, ಉಪ್ಪಿನಕಾಯಿ ಇತರೆ ಉಪಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಪರ್ಯಾಯಗಳತ್ತ ಯೋಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಕೋಲಾರ ಜಿಲ್ಲೆ ವಿಭಿನ್ನ ಎಂದು ಹೇಳಬಹುದು. ಏಕೆಂದರೆ ಇಲ್ಲಿ ಇತರೆ ಜಿಲ್ಲೆಗಳಂತೆ ಕೋಲಾರದಲ್ಲಿ ವಾರ್ಷಿಕ ಬೆಳೆಗಳನ್ನು ಬೆಳೆಯುವುದು ತುಂಬಾ ಕಡಿಮೆ. ಇಲ್ಲಿ ಟಮೋಟೊ ಹಣ್ಣುಗಳು, ಎಲ್ಲಾ ರೀತಿಯ ತರಕಾರಿಗಳು, ಮಾವು, ದ್ರಾಕ್ಷಿ ಇತರೆ ಎಲ್ಲಾ ಬೆಳೆಗಳನ್ನು ಬೆಳೆಯುವುದರಲ್ಲಿ ರೈತರು ಎತ್ತಿದ ಕೈ. ಹಾಗಾಗಿ 2 ತಿಂಗಳು ಲಾಕ್‌ಡೌನ್ ಆದ ಕಾರಣ ಈ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಸುಮಾರು ಸಾವಿರಾರು ಹೆಕ್ಟೇರ್ ಪ್ರದೇಶದ ಹೊಲಗಳಲ್ಲಿ ಪಸಲನ್ನು ಕಟಾವು ಮಾಡದೆ ಹಾಗೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರಗಳು ರೈತರ ಹಿತ ಕಾಯ್ದು, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಕೊಡುವ ಬದಲು ರೈತ ವಿರೋಧಿ, ಜನವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವಲ್ಲಿ ನಿರತರಾಗಿರುವುದು ದುರಂತ.

  • ನಳಿನಿ
ನಳಿನಿ
ನಳಿನಿ

(ಕರ್ನಾಟಕ ರಾಜ್ಯ ರೈತ ಸಂಘದ ಯುವ ವಿಭಾಗದ ಸಕ್ರಿಯ ಕಾರ್ಯಕರ್ತೆಯಾಗಿರುವ ನಳಿನಿ ಸ್ವತಃ ಕೃಷಿಯಲ್ಲಿ ತೊಡಗಿಸಿಕೊಂಡಿರುವವರು. ರೈತಪರವಾದ ಎಲ್ಲಾ ಹೋರಾಟದಲ್ಲಿ ಅವರು ಮುಂದಿರುತ್ತಾರೆ)


ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...