Homeಕರೋನಾ ತಲ್ಲಣಕೊರೊನಾ ಲಾಕ್‌ಡೌನ್‌ಗೆ ನಲುಗಿದ ಕೋಲಾರ ಜಿಲ್ಲೆ: ಹುಲುಸಾದ ಬೆಳೆ ಹೊಲದಲ್ಲೇ ನೆಲಸಮ

ಕೊರೊನಾ ಲಾಕ್‌ಡೌನ್‌ಗೆ ನಲುಗಿದ ಕೋಲಾರ ಜಿಲ್ಲೆ: ಹುಲುಸಾದ ಬೆಳೆ ಹೊಲದಲ್ಲೇ ನೆಲಸಮ

ಕೋಲಾರ ಜಿಲ್ಲೆ ಹಾಲು, ರೇಷ್ಮೆ ಮತ್ತು ಮಾವಿನ ಮಡಿಲು ಎಂದೇ ಹೆಸರು ಪಡೆದಿರುವ ಜಿಲ್ಲೆ. ಇಲ್ಲಿ ಟಮೋಟ, ತರಕಾರಿಗಳು ದೆಹಲಿ, ಪುಣೆ, ಮುಂಬೈ, ಬಾಂಗ್ಲಾದೇಶ, ನೇಪಾಳ ಹಾಗೂ ಇತರೆ ರಾಜ್ಯ, ದೇಶಗಳಿಗೂ ರಫ್ತಾಗುತ್ತದೆ.

- Advertisement -
- Advertisement -

ಕೊರೊನಾದಿಂದ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲಾ ಕ್ಷೇತ್ರಗಳಿಗೂ ತೊಂದರೆಯಾಗಿದೆ. ಅದರಂತೆ ಕೃಷಿ ಕ್ಷೇತ್ರದ ಮೇಲೂ ತುಂಬಾ ದೊಡ್ಡ ಹೊಡೆತ ಬಿದ್ದಿದೆ. ಆದರೆ ಬೇರೆ ಕ್ಷೇತ್ರಗಳ ಬಗ್ಗೆ ಮಾಧ್ಯಮಗಳಾಗಲಿ, ವ್ಯವಸ್ಥೆ, ಪ್ರಭುತ್ವ ಕೊಟ್ಟ ಗಮನವನ್ನು ಕೃಷಿ ಕ್ಷೇತ್ರಕ್ಕೆ ನೀಡದಿರುವುದು ದುರಂತ. ಕೃಷಿ ಸಂಕಷ್ಟಗಳನ್ನು ಮುನ್ನಲೆಗೆ ತಂದಿದ್ದು ಬಹಳ ಕಡಿಮೆ.

ತೀರಾ ಅನೀರಿಕ್ಷಿತವಾಗಿ ಕೊರೊನಾ ಒಂದನೇ ಅಲೆ ಬಂತು. ನಮ್ಮ ರೈತರಿಗೆ ಇಂತಹ ಪರಿಸ್ಥಿತಿ ಬರುತ್ತೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಆಗಾಗಲೇ ಹೂ, ಹಣ್ಣು, ತರಕಾರಿಗಳನ್ನು, ಎಲ್ಲಾ ರೀತಿಯ ಬೆಳೆಗಳನ್ನು ನಾಟಿ ಮಾಡಲಾಗಿತ್ತು ಮತ್ತು ಒಂದಷ್ಟು ಬೆಳೆಗಳು ಕಟಾವಿಗೂ ಬಂದಿತು. ಬೆಳೆದ ಬೆಳೆಗಳು ಮಾರಾವಾಗದೆ ತೋಟದಲ್ಲಿ, ರಸ್ತೆಗಳಿಗೆ ಸುರಿಯುವ ಪರಿಸ್ಥಿತಿ ನಿರ್ಮಾಣವಾಯಿತು, ಈ ಎಲ್ಲದರ ಹೊಡೆತಗಳನ್ನು ರೈತರು ತಡೆದುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಬಂತು. ಈ ಸಮಯದಲ್ಲಿ ಸರ್ಕಾರ ರೈತರ ರಕ್ಷಣೆಗೆ ನಿಲ್ಲುತ್ತೇವೆ ಎಂಬ ಭರವಸೆ ಕೊಟ್ಟರೆ ಹೊರತು ವಾಸ್ತವದಲ್ಲಿ ರೈತರ ರಕ್ಷಣೆಗೆ ನಿಲ್ಲಲಿಲ್ಲ. ಇನ್ನು ಈ ಸಮಸ್ಯೆಗಳಿಂದ ರೈತರು ಚೇತರಿಸಿಕೊಳ್ಳುವ ಮೊದಲೇ ಕೊರೊನಾ ಎರಡನೇ ಅಲೆ ಬಂತು. ಈ ಅಲೆಗೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿರಲಿಲ್ಲ. ಆಸ್ಪತ್ರೆ, ಬೆಡ್, ಆಕ್ಸಿಜನ್ ಯಾವುದು ಸಿದ್ದತೆ ಮಾಡಿಕೊಂಡಿರಲಿಲ್ಲ. ಇಂತಹ ಸಮಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ ಮಾಡಿದರು.

ನಾವು ಈಗಾಗಲೇ ಹಸಿರುಕ್ರಾಂತಿ ಎಂಬ ಹೆಸರಿನಲ್ಲಿ ಬಿತ್ತನೆಬೀಜ, ರಸಗೊಬ್ಬರ, ಔಷಧಿಗಳು ಎಲ್ಲದಕ್ಕೂ ನಾವು ಸರ್ಕಾರ ಮತ್ತು ಕಾರ್ಪೊರೇಟ್ ಕಂಪನಿಗಳ ಮೇಲೆ ಅವಲಂಬಿತರಾಗಿದ್ದೇವೆ. ಉತ್ತಮ ಬೆಳೆ ಪಸಲು ಬರಬೇಕಾದರೆ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಸಿಂಪಣೆ ಮಾಡದೇ ಇದ್ದರೆ ಇಳುವರಿ ಮತ್ತು ಉತ್ತಮ ಬೆಳೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂದರೆ ಖರ್ಚು ದುಬಾರಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಬೆಳೆದ ತರಕಾರಿ, ಹಣ್ಣು, ಹೂ ಮತ್ತು ತೋಟಗಾರಿಕಾ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ ಸಂಕಷ್ಟಕ್ಕೆ ಗುರಿಯಾದರು. ಈ ಲಾಕ್‌ಡೌನ್‌ನಿಂದಾಗಿ ಬೆಳೆದಿರುವ ಬೆಳೆಗಳನ್ನು ರಸ್ತೆಗೆ ತಂದು ಸುರಿಯುವ ಘಟನೆಗಳನ್ನು ನೋಡಬೇಕಾಯಿತು. ಕೋಲಾರದಲ್ಲಿ ಇತ್ತೀಚೆಗೆ ನೂರಾರು ರೈತರು ಬಹುಕಷ್ಟಪಟ್ಟು ಬೆಳೆದ ಟಮೋಟವನ್ನು ರಸ್ತೆಗೆ ಸುರಿದಿದ್ದನ್ನು ನೋಡಬಹುದು.

ಕೋಲಾರ ಜಿಲ್ಲೆ ಹಾಲು, ರೇಷ್ಮೆ ಮತ್ತು ಮಾವಿನ ಮಡಿಲು ಎಂದೇ ಹೆಸರು ಪಡೆದಿರುವ ಜಿಲ್ಲೆ. ಇಲ್ಲಿ ಬೆಳೆದಂತಹ ಮಾವು, ಟಮೋಟ, ತರಕಾರಿಗಳು ದೆಹಲಿ, ಪುಣೆ, ಮುಂಬೈ, ಬಾಂಗ್ಲಾದೇಶ, ನೇಪಾಳ ಹಾಗೂ ಇತರೆ ರಾಜ್ಯ, ದೇಶಗಳಿಗೂ ರಫ್ತಾಗುತ್ತದೆ. ಸರ್ಕಾರದ ಅವೈಜ್ಞಾನಿಕ ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ರೂ ಬಂಡವಾಳ ಹಾಕಿ ಬೆಳೆದಿದ್ದ ತರಕಾರಿ, ದ್ರಾಕ್ಷಿ, ಟಮೋಟ, ಪಪ್ಪಾಯಗಳಿಗೆ ಬೆಲೆಯಿಲ್ಲದೆ, ಮತ್ತೊಂದು ಕಡೆ ಮಾರುಕಟ್ಟೆಗೆ ಸಾಗಿಸಲು ವಾಹನಗಳ ವ್ಯವಸ್ಥೆಯಿಲ್ಲದೆ ರೈತರು ರಸ್ತೆಗೆ ಸುರಿದರು.

ನಾವು ಕೋಲಾರ ತಾಲ್ಲೂಕು ಹೊಸಮಟ್ಟ ಹಳ್ಳಿ ಗ್ರಾಮದಲ್ಲಿ 10 ಎಕರೆಯಲ್ಲಿ ಟಮೋಟ, 7 ಎಕರೆಯಲ್ಲಿ ಎಲೆಕೋಸು ಬೆಳೆದಿದ್ದೆವು. 1 ಎಕರೆ ಟಮೋಟ ಬೆಳೆಯಲು ಕನಿಷ್ಠ 1.5 ರಿಂದ 2 ಲಕ್ಷದವರೆಗೆ ಬಂಡವಾಳ ಹಾಕಬೇಕು. ಇನ್ನೂ 10 ಎಕರೆಯಲ್ಲಿ ಟಮೋಟ ಬೆಳೆಯಲು ಬಂಡವಾಳ ಎಷ್ಟಾಗಬಹುದು? ಲಾಕ್‌ಡೌನ್ ಸಮಯದಲ್ಲಿ ಕಟಾವಿಗೆ ಬಂದಿದ್ದ ನಮ್ಮದೇ ತೋಟದ 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಟಮೋಟಾಗೆ ಮಾರುಕಟ್ಟೆಯಲ್ಲಿ ಬರುವ ಬೆಲೆ ಕನಿಷ್ಠ ಟಮೋಟ ಬಿಡಿಸಿದ ಕೃಷಿ ಕಾರ್ಮಿಕರಿಗೂ ಕೂಲಿ ಕೊಡಲು ಸಾಲದ ಪರಿಸ್ಥಿತಿ ಉಂಟಾಯಿತು. ಆದ ಕಾರಣ ತೋಟದಲ್ಲಿಯೇ ಅದನ್ನು ನೆಲಸಮ ಮಾಡಲಾಯಿತು. ನಮ್ಮಂತಹ ಆದೆಷ್ಟೊ ರೈತರು ಬೆಳೆಗಳನ್ನು ತೋಟಗಳಲ್ಲಿ, ರಸ್ತೆಗಳಲ್ಲಿ ಕೊಳೆಸಿದರು.

ಇನ್ನು 1 ಎಕರೆ ಕೋಸು ಬೆಳೆಯಲು ಕನಿಷ್ಠ 1 ಲಕ್ಷ ಬಂಡವಾಳ ಬೇಕು. ಆದರೆ ಕೊನೆಗೆ 1Kgಗೆ 2-3 ರೂ ಕೊಟ್ಟರೆ ಏನು ಮಾಡುವುದು?

ನಮ್ಮ ಊರು ಕೇವಲ 40-50 ಮನೆಗಳನ್ನು ಹೊಂದಿರುವ ಚಿಕ್ಕ ಗ್ರಾಮ. ಇಲ್ಲಿ ಕೊರೊನಾ ಬರುವ ಮುನ್ನ 5-6 ರೈತ ಕುಟುಂಬಗಳು ಮಾತ್ರ ಬೆಳೆ ಮಾಡುತ್ತಿದ್ದರು. ಕೆ.ಸಿ ವ್ಯಾಲಿ ನೀರು ಮತ್ತು ಕೊರೊನಾ ಬಂದ ಮೇಲೆ ನಗರಗಳಲ್ಲಿದ್ದ ಎಲ್ಲಾ ಯುವಕರು ಹಳ್ಳಿಗಳತ್ತ ಮುಖ ಮಾಡಿ ಮೂಲ ಕಸುಬಾದ ಕೃಷಿ ಮಾಡಲು ಶುರು ಮಾಡಿದರು. ಈಗ ನಮ್ಮೂರಲ್ಲಿ 30-35 ಕುಟುಂಬಗಳು ಕೃಷಿಯನ್ನೆ ನಂಬಿ ಜೀವನ ಮಾಡುತ್ತಿದ್ದಾರೆ. ಯುವ ಜನತೆ ವ್ಯವಸಾಯ ಮಾಡಿದರೆ ಏನೋ ಲಾಭ ಬರುತ್ತದೆಯೆಂದು ಸಾಲ ಮಾಡಿ ಬಂಡವಾಳ ಹಾಕಿದವರ ಗತಿಯೇನು? ಇವರ ನೆರವಿಗೆ ನಿಲ್ಲುವವರು ಯಾರು? ಇನ್ನೂ ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಎಷ್ಟು ಪರಿಹಾರ ಕೊಟ್ಟಿದೆ? ರೈತರಿಗೆ ಸೇರಿದ್ದು ಕೇವಲ ಬಿಡಿಗಾಸು ಮಾತ್ರ. ಕೆಲವು ರೈತರಿಗೆ ಅದೂ ಇಲ್ಲ..

ಉದಾಹರಣೆಗೆ ನಾವು ಕೊರೊನಾದಿಂದ ಬೆಲೆಯಿಲ್ಲದೆ ಹೊಲದಲ್ಲಿಯೇ ಬೆಳೆ ನೆಲಸಮ ಮಾಡಿದಾಗ ಪರಿಹಾರದ ಹಣ ನಮಗೆ ಸಿಗಲಿಲ್ಲ. ಅಧಿಕಾರಿಗಳು ಮಾಡಿದ ಸಣ್ಣ ತಪ್ಪಿಗೆ ನಾವು ಪರಿಹಾರ ವಂಚಿತರಾದೆವು.
ಇನ್ನೂ ಮಾವು, ಹೂಗಳು, ರೇಷ್ಮೆ ಬೆಳೆಯುವ ರೈತರ ಪರಿಸ್ಥಿತಿ ಹೇಳತೀರದು. ಯಾವುದೇ ಶುಭ ಸಮಾರಂಭಗಳಿಲ್ಲದೆ ದೇವಸ್ಥಾನಗಳಿಲ್ಲದೆ ಹೂಗಳು ಮಾರಟವಾಗಲೇ ಇಲ್ಲ. ಮಾವು ಬೆಳೆದ ರೈತರು ಪ್ರತಿ ಕೆಜಿಗೆ 2-3ರೂಗಳಂತೆಯೂ ಬೆಲೆ ಸಿಗದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ರಾಜ್ಯದಲ್ಲಿ ಸುಮಾರು 1.20 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಾರೆ. ಇಷ್ಟು ಬೆಳೆದರು ಇದರಿಂದ ರೈತರಿಗೂ ಲಾಭ ಸಿಗಲಿಲ್ಲ. ಅತ್ತ ಕಡೆ ಗ್ರಾಹಕನಿಗೂ ಕಡಿಮೆ ಬೆಲೆಗೆ ಹಣ್ಣು-ತರಕಾರಿ ಸಿಗಲಿಲ್ಲ.

ಮತ್ತೊಂದು ಕಡೆ ಮುಂಗಾರು ಶುರುವಾಯಿತು ಬಿತ್ತನೆಗಳು ಪ್ರಾರಂಭವಾದವು ಉಳುಮೆ ಮಾಡಲು ನೇಗಿಲು ಕಟ್ಟಬೇಕು. ನೇಗಿಲಿಗೆ ಹುಳಿ ಕಟ್ಟಬೇಕು. ವೆಲ್ಡಿಂಗ್ ಅಂಗಡಿಗಳು ತೆರೆಯಲೇ ಇಲ್ಲ. ಉಳುಮೆ ಮಾಡಲು ಟ್ರಾಕ್ಟರ್ ತೆಗೆದುಕೊಂಡು ಹೋದರೆ ಒಂದು ನಟ್ಟು ಬೋಲ್ಟ್ ಇಲ್ಲದೇ ಇದ್ದರೂ ಟ್ರಾಕ್ಟರ್ ಮುಂದೆ ಹೋಗುವುದಿಲ್ಲ. ತೋಟಕ್ಕೆ ನೀರು ಹಾಯಿಸಲು ಹನಿ ನೀರಾವರಿ ಬಳಸುತ್ತೇವೆ. ಪೈಪ್ ಹೊಡೆದು ಹೋಗಿದ್ದು ಅದನ್ನು ಅಂಟಿಸಲು ಗಮ್ ಇಲ್ಲ. ನೀರು ಹೊರ ತೆಗೆಯಲು ಮೋಟರ್ Spare Parts ಇಲ್ಲದೇ ಇದ್ರೆ ಕೆಲಸ ಆಗಲ್ಲ. ಇವುಗಳು ಸದ್ಯಕ್ಕೆ ಲಾಕ್‌ಡೌನ್ ಇರುವುದರಿಂದ ಸಿಗುವುದಿಲ್ಲ. ಹೀಗೆ ಸಣ್ಣ ಸಣ್ಣ ವಸ್ತುಗಳಿಂದ ರೈತರಿಗೆ ಒಡೆತ ಬಿತ್ತು. ಆದರೆ ಆಡಳಿತ ನಡೆಸುವ ಸರ್ಕಾರ ಮತ್ತು IAS  ಅಧಿಕಾರಿಗಳು ಕೇವಲ ಗೊಬ್ಬರದ ಅಂಗಡಿ, ಔಷಧಿ ಅಂಗಡಿಗಳು ತೆರೆದರೆ ಕೃಷಿ ಮಾಡಿ ಬಿಡಬಹುದೆಂಬ ಭ್ರಮೆಯಲ್ಲಿದ್ದಾರೆ.

ಇದರ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ರಸಗೊಬ್ಬರಗಳು, ಡ್ರಿಪ್ ಪೈಪ್‌ಗಳ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದರು.

ಇದನ್ನೂ ಓದಿ: ನಳಿನಿ ವಿರುದ್ಧ ಬಿಜೆಪಿ ಐಟಿ ಸೆಲ್: ಒಂದು ಕ್ಲಾಸಿಕ್ ಕೇಸು

ಸರ್ಕಾರವಂತೂ ರೈತರ ನೆರವಿಗೆ ಬರುತ್ತಿಲ್ಲ. ಹಾಗಾಗಿ ರೈತರೇ ಪರ್ಯಾಯ ಆಲೋಚನೆಗಳತ್ತ ಮುಖ ಮಾಡಬೇಕಾಗಿದೆ. ಬೆಳೆದ ತರಕಾರಿಗಳನ್ನು ಮೌಲ್ಯವರ್ಧನೆ ಮಾಡಿ ಬೆಲೆ ಬಂದಾಗ ಮಾರಾಟ ಮಾಡಬೇಕು. ಜೊತೆಗೆ ಸಣ್ಣ ಕೆಲಸಗಳಾದ ಟಮೋಟ ಬೆಳೆಯುವ ರೈತರು ಸಾಸ್, ಉಪ್ಪಿನಕಾಯಿ ಇತರೆ ಉಪಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಪರ್ಯಾಯಗಳತ್ತ ಯೋಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಕೋಲಾರ ಜಿಲ್ಲೆ ವಿಭಿನ್ನ ಎಂದು ಹೇಳಬಹುದು. ಏಕೆಂದರೆ ಇಲ್ಲಿ ಇತರೆ ಜಿಲ್ಲೆಗಳಂತೆ ಕೋಲಾರದಲ್ಲಿ ವಾರ್ಷಿಕ ಬೆಳೆಗಳನ್ನು ಬೆಳೆಯುವುದು ತುಂಬಾ ಕಡಿಮೆ. ಇಲ್ಲಿ ಟಮೋಟೊ ಹಣ್ಣುಗಳು, ಎಲ್ಲಾ ರೀತಿಯ ತರಕಾರಿಗಳು, ಮಾವು, ದ್ರಾಕ್ಷಿ ಇತರೆ ಎಲ್ಲಾ ಬೆಳೆಗಳನ್ನು ಬೆಳೆಯುವುದರಲ್ಲಿ ರೈತರು ಎತ್ತಿದ ಕೈ. ಹಾಗಾಗಿ 2 ತಿಂಗಳು ಲಾಕ್‌ಡೌನ್ ಆದ ಕಾರಣ ಈ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಸುಮಾರು ಸಾವಿರಾರು ಹೆಕ್ಟೇರ್ ಪ್ರದೇಶದ ಹೊಲಗಳಲ್ಲಿ ಪಸಲನ್ನು ಕಟಾವು ಮಾಡದೆ ಹಾಗೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರಗಳು ರೈತರ ಹಿತ ಕಾಯ್ದು, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಕೊಡುವ ಬದಲು ರೈತ ವಿರೋಧಿ, ಜನವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವಲ್ಲಿ ನಿರತರಾಗಿರುವುದು ದುರಂತ.

  • ನಳಿನಿ
ನಳಿನಿ
ನಳಿನಿ

(ಕರ್ನಾಟಕ ರಾಜ್ಯ ರೈತ ಸಂಘದ ಯುವ ವಿಭಾಗದ ಸಕ್ರಿಯ ಕಾರ್ಯಕರ್ತೆಯಾಗಿರುವ ನಳಿನಿ ಸ್ವತಃ ಕೃಷಿಯಲ್ಲಿ ತೊಡಗಿಸಿಕೊಂಡಿರುವವರು. ರೈತಪರವಾದ ಎಲ್ಲಾ ಹೋರಾಟದಲ್ಲಿ ಅವರು ಮುಂದಿರುತ್ತಾರೆ)


ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...