Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...