Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...