Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...