Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ದಂಪತಿಗಳ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...