Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...