Homeಮುಖಪುಟಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ಕೋಯಿಕೋಡ್ ವಿಮಾನ ದುರಂತ ಅಪಘಾತವಲ್ಲ, ಭೀಕರ ಕೊಲೆ!: ಕ್ಯಾಪ್ಟನ್ ಮೋಹನ್ ರಂಗನಾಥನ್

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

- Advertisement -
- Advertisement -

ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಕೋಯಿಕೋಡ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತವು ಮುಂದೆ ಪಾಟ್ನಾ, ಜಮ್ಮು ವಿಮಾನ ನಿಲ್ದಾಣಗಳಲ್ಲಿಯೂ ಸಂಭವಿಸಬಹುದು ಎಂದು ವಾಯು ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯರಾಗಿರುವ ರಂಗನಾಥನ್, ಕೋಯಿಕೋಡ್ ವಿಮಾನ ನಿಲ್ದಾಣವು ಇಳಿಯಲು ಸುರಕ್ಷಿತವಲ್ಲ ಎಂದು ಸುಮಾರು ಒಂಬತ್ತು ವರ್ಷಗಳ ಹಿಂದೆ ವರದಿಯನ್ನು ಸಲ್ಲಿಸಿ  ಎಚ್ಚರಿಸಿದ್ದೆ ಎಂದಿದ್ದಾರೆ.

“ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಅಪಘಾತವಲ್ಲ, ಭೀಕರ ಕೊಲೆ” ಎಂದು ರಂಗನಾಥನ್ ಹೇಳಿದ್ದಾರೆ. ಮುನ್ನೆಚ್ಚರಿಕೆ ವಹಿಸಿದ್ದರೆ ಈ  ಅಪಘಾತವನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಕೋಯಿಕೋಡ್ ವಿಮಾನ ನಿಲ್ದಾಣದ ಟೇಬಲ್-ಟಾಪ್ ರನ್ವೇಗಳು ಬಹಳ ಕಡಿಮೆ ಜಾಗವನ್ನು ಹೊಂದಿವೆ. ಹಾಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳು ಹೇಗಿರಬೇಕು ಎಂದು ರಂಗನಾಥನ್ ವಿವರಿಸಿದ್ದಾರೆ.

“ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ರನ್ ವೇ ಕೊನೆಯಲ್ಲಿ ಸುಮಾರು 70 ಮೀಟರ್ ಕುಸಿತ ಕಂಡುಬಂದಿದೆ. ಮಂಗಳೂರಿನಲ್ಲಿ ಇದು ಸುಮಾರು 100 ಮೀಟರ್ ಇದೆ. ಇದರಿಂದ ವಿಮಾನ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ನೀವು ಪಾಟ್ನಾ ಅಥವಾ ಜಮ್ಮು ವಿಮಾನ ನಿಲ್ದಾಣದಲ್ಲಿ ಮತ್ತೊಂದು ಇದೇ ರೀತಿಯ ದೊಡ್ಡ ಅಪಘಾತವನ್ನು ನಿರೀಕ್ಷಿಸಬಹುದು. ಇವೆರಡೂ ಅಪಾಯಕಾರಿ ವಾಯುನೆಲೆಗಳು. ವಿಮಾನ ನಿಲ್ದಾಣದಲ್ಲಿ ಕನಿಷ್ಠ ರನ್‌ವೇ ಎಂಡ್ ಸೇಫ್ಟಿ ಏರಿಯಾ(ರೇಸಾ) ಕೂಡಾ ಇಲ್ಲ ಎಂದು ಅವರು ಹೇಳಿದರು. ಜೊತೆಗೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ರನ್ವೇ ಸ್ಟ್ರಿಪ್ ಐಸಿಎಒ ಅನೆಕ್ಸ್ 14 ರಲ್ಲಿ ನಿಗದಿಪಡಿಸಿದ ಕನಿಷ್ಠ ಅಗಲದ ಅರ್ಧದಷ್ಟಿದೆ. ಕಳೆದ ಹಲವು ವರ್ಷಗಳಿಂದ ತಪಾಸಣೆ ಮತ್ತು ಸುರಕ್ಷತಾ ಮೌಲ್ಯಮಾಪನಗಳನ್ನು ನಡೆಸುತ್ತಿರುವ ಡಿಜಿಸಿಎ ತಂಡಕ್ಕೆ ಈ ಸಂಗತಿ ತಿಳಿದಿತ್ತು. ಆದರೂ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಒಳಗೊಂಡಿರುವ ಅಪಾಯವನ್ನು ಅವರು ಪರಿಗಣಿಸಿದ್ದಾರೆಯೇ? ಡಿಜಿಸಿಎ ಅಥವಾ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯ ನಿರ್ಬಂಧಗಳನ್ನು ಅಥವಾ ವಿಶೇಷ ಕಾರ್ಯವಿಧಾನಗಳನ್ನು ರೂಪಿಸಿವೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರನ್‌ವೇಯನ್ನು ಓವರ್‌ಶಾಟ್ ಮಾಡಿ ಕಣಿವೆಯಲ್ಲಿ ಬಿದ್ದು ಶುಕ್ರವಾರ ಸಂಜೆ ಮುರಿದು ಬಿದ್ದಿದ್ದರಿಂದ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.

ಈ ವಿಮಾನವು ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ದುಬೈನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಕರೆತರುತ್ತಿತ್ತು.


ಇದನ್ನೂ ಓದಿ: ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಫಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...