Homeಮುಖಪುಟಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

- Advertisement -
- Advertisement -

ರೈತ ಸಂಘಟನೆಗಳ‌ ಹೊಣೆಯ ಕುರಿತು

ದೆಹಲಿಯ ಅಂಚಿನಲ್ಲಿ ನಡೆಯುತ್ತಿರುವ ಕಿಸಾನ್ ಸತ್ಯಾಗ್ರಹದ ತಾಣದಲ್ಲಿ ದಲಿತ ಸಿಖ್ಖನೊಬ್ಬನನ್ನು ನಿಹಾಂಗ್ ಪಂಥದವರು ಚಿತ್ರಹಿಂಸೆ ಕೊಟ್ಟು ಸಾಯಿಸಿದ ಘಟನೆಯ ನೈತಿಕ ಹೊಣೆಯನ್ನು ಕಿಸಾನ್ ಸಂಯುಕ್ತ ಮೋರ್ಚಾ ಹೊರಬೇಕಿದೆ. ಅದರಲ್ಲೂ ಪಂಜಾಬಿನ ವಿವಿಧ ರೈತ ಸಂಘಟನೆಗಳು ಈ ಬಗ್ಗೆ ತೀವ್ರ ಆತ್ಮಾವಲೋಕನ ಮಾಡಬೇಕಿದೆ.

ನಿಹಾಂಗ್ ಪಂಥದ ವರ್ತನೆ ಹೊಸದೇನಲ್ಲ. ಪರಿಶುದ್ಧತೆಯ ಅಮಲು ನರನಾಡಿಗಳಲ್ಲಿ ತುಂಬಿಕೊಂಡಿರುವ ಈ ಪಂಥ ಒಟ್ಟಾರೆ ಭಾರತದ ಜಾತಿ ವ್ಯಸನದ ಬಹಿರಂಗ ಹುಣ್ಣು. ಆಗಾಗ್ಗೆ, ದೇಶದ ವಿವಿಧೆಡೆ ಇಂಥಾ ಅಸಮಾನತೆಯನ್ನು ಕಾಪಾಡುವ ಕ್ರೌರ್ಯ ನಡೆಯುತ್ತಲೇ ಇದೆ. ಹಿಂದೂ ಧರ್ಮದ ಈ ವೈರಸ್ ವಿರುದ್ಧವೇ ಹುಟ್ಟಿದ ಸಿಖ್ಖ್ ಧರ್ಮವೂ ಇದೇ ರೋಗಕ್ಕೆ ಬಲಿಯಾಗಿರುವುದು ಈ ದೇಶದ ವೈದಿಕ ಶಾಹಿಯ ಶಕ್ತಿಯ ದ್ಯೋತಕ. ನಮ್ಮಲ್ಲಿ ಶರಣ ಚಳವಳಿಯೂ ಈಗ ಇಂಥದೇ ಜಾತಿ ಗುರುತು/ ಹಕ್ಕೊತ್ತಾಯದ ಕೊಳಚೆ ಗುಂಡಿಯಾಗಿದೆ.
ಮೇಲ್ಜಾತಿಯಲ್ಲಿ ಒಂದು ದೊಡ್ಡ ಮಟ್ಟದ ಪಶ್ಚಾತ್ತಾಪವನ್ನು ಸೃಷ್ಟಿಸಿಯೇ ಈ ಹೊಸ ಪಂಥಗಳು ಹುಟ್ಟಿದ್ದು. ಆದರೆ ಕಾಲಾಂತರದಲ್ಲಿ ಹಿಂದೂ ಜಾತಿ ರೋಗಕ್ಕೆ ಇವೂ ತುತ್ತಾಗಿರುವುದು ಹೊಸ ಸಂಶೋಧನೆಯೇನೂ ಅಲ್ಲ.

ಎಲ್ಲೆಡೆ ಭೂಮಿ ಹೊಂದಿರುವ ಮೇಲ್ಜಾತಿ / ಮಧ್ಯಮ ಜಾತಿಗಳ ರೈತರೇ ರೈತ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಚಾರಿತ್ರಿಕವಾಗಿ ಇದು ಸಹಜ. ಈ ಜಾತಿಗಳೇ ಬಹುತೇಕ ಗ್ರಾಮಭಾರತದಲ್ಲಿ ದಲಿತರ / ಭೂರಹಿತ ಕಾರ್ಮಿಕರ ದಮನ, ಶೋಷಣೆಯ ವಾರಸುದಾರರು. ಪುರೋಹಿತಶಾಹಿ ಇದಕ್ಕೆ ಪಾರಂಪರಿಕ ಕಂದಾಚಾರದ ಒಪ್ಪಿಗೆಯ ಅಧಿಕೃತತೆಯ ಮುದ್ರೆ ಒತ್ತುತ್ತಿರುತ್ತದೆ. ಇದೂ ಗೊತ್ತಿರುವ ಸಂಗತಿಯೇ.

ಲಾಡು ಮುಟ್ಟಿದ್ದಕ್ಕೆ, ಮಗು ಅಚಾನಕವಾಗಿ ದೇಗುಲ ಪ್ರವೇಶಿಸಿದ್ದಕ್ಕೇ ಕ್ರೌರ್ಯ ತೋರಿಸುವ ಮೇಲ್ಜಾತಿಗಳ ವರ್ತನೆ ಅವುಗಳೇ ಪ್ರಧಾನ ಪಾತ್ರ ವಹಿಸಿರುವ ರೈತ ಸಂಘಗಳಿಗೆ ಗೊತ್ತಿಲ್ಲದ ವಿಚಾರವೇನಲ್ಲ. ಹಾಗಿರುವಾಗ ಈ ವರ್ತನೆ ಸ್ಫೋಟವಾಗುವವರೆಗೂ ಏನೂ ಘಟಿಸುವುದಿಲ್ಲ ಎಂಬಂತೆ ಇದ್ದು, ಇಂಥಾ ಕ್ರೌರ್ಯ ಘಟಿಸಿದಾಗ, ಅಯ್ಯೋ, ಇವರು ನಮ್ಮವರಲ್ಲ ಎಂದು ಹೇಳುವುದು ಜಾಣತನವಾಗುತ್ತದೆ.

ಅಪರೂಪದ ವೈರಸ್ ಒಂದು ಸೂರತ್ತಿನಲ್ಲೋ ಕೇರಳದಲ್ಲೋ ಕಾಣಿಸಿಕೊಂಡಾಗ ಎಲ್ಲಾ ರಾಜ್ಯಗಳಲ್ಲೂ ಅದನ್ನು ತಡೆಯುವ ಸಮರೋಪಾದಿ ಉಪಕ್ರಮಗಳನ್ನು ಕೈಗೊಳ್ಳುವುದು ನಾವು ಕಂಡಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ಇದು ಸಾಧ್ಯ ಎಂದಾದರೆ ಸಾಮಾಜಿಕ ಸಂಬಂಧಗಳಲ್ಲಿ ಇಂಥಾ ಪ್ರೋಆಕ್ಟಿವ್ ಕ್ರಮಗಳಿಗೆ ಉದಾಸೀನ ಯಾಕೆ?

ಪಂಜಾಬಿನ ಸಿಖ್ ಪಂಥದ ಅತಿರೇಕಿಗಳ ಕ್ರೌರ್ಯ ಇಂದು ಕಾಣಿಸಿದರೆ, ಉತ್ತರಪ್ರದೇಶದ ಖಾಪ್ ಪಂಚಾಯತುಗಳ ಕ್ರೌರ್ಯ ಘಟಿಸಲು ಹೆಚ್ಚು ಸಮಯ ಬೇಕಿಲ್ಲ.
ಕರ್ನಾಟಕದಲ್ಲಿ ಮಹಾ ಸೆಕ್ಯುಲರ್ ಮತ್ತು ಪ್ರಗತಿಪರರಾಗಿದ್ದ ಪ್ರೊಫೆಸರ್ ನಾಯಕತ್ವದ ರೈತ ಸಂಘಕ್ಕೂ ದಲಿತ/ ಕೂಲಿಕಾರರನ್ನು ಒಳಗೊಳ್ಳುವ ಕೆಲಸ ಸಾಧ್ಯವಾಗಲಿಲ್ಲ. ತನ್ನ ಹಿತಾಸಕ್ತಿಯ ಸಮುದಾಯಗಳಲ್ಲಿ ಒಂದು ಸಾಮಾಜಿಕ ಸಂಬಂಧದ ಮಾನಸಿಕ ಬದಲಾವಣೆಯನ್ನು ಪ್ರೇರೇಪಿಸದಿದ್ದರೆ ಈ ಚಳವಳಿಯೂ ಅರ್ಥಹೀನವಾಗುತ್ತದೆ.

ಗಾಂಧೀಜಿಯವರ ಬಗ್ಗೆ ಎಷ್ಟೇ ತಕರಾರುಗಳಿದ್ದರೂ ಅವರು ಆ ಕಾಲದಲ್ಲಿ ತಾನು ಆರಂಭಿಸಿದ ಚಳವಳಿ ಮೂಲ ಶಿಸ್ತಿನಿಂದ ದೂರ ಸರಿದ ಒಂದೇ ಘಟನೆಯ ಕಾರಣಕ್ಕೆ ಸಮುದಾಯಗಳು ಸಜ್ಜಾಗಿಲ್ಲ ಎಂದು ನಿರ್ಧರಿಸಿ ಚಳವಳಿಯನ್ನು ಬರಕಾಸ್ತುಗೊಳಿಸಿದ್ದರು. ಅಷ್ಟೇ ಅಲ್ಲ, ಪ್ರಭುತ್ವದ ಜೊತೆ ಹೋರಾಟ ನಡೆಸುತ್ತಿದ್ದಾಗ ಆಂತರಿಕವಾಗಿ ಸಾಮಾಜಿಕ ಸಂಬಂಧಗಳ ಸುಧಾರಣೆಯ ಬಗ್ಗೆ ಅರಿವು ಮೂಡಿಸಿದರು. ಈ ಕಾರಣಕ್ಕೇ ಮೇಲ್ಜಾತಿಗಳ ಮುಕುಟ ಮಣಿಯಂತಿದ್ದ ಆ ಕಾಲದ ಓದಿದ ಧೀಮಂತರು, ತಮ್ಮ ತಮ್ಮ ಜಾತಿಗಳಿಗೆ ಮುಜುಗುರ ಉಂಟು ಮಾಡುವಷ್ಟುಸುಧಾರಣಾವಾದೀ ಮಾತುಗಳನ್ನಾಡಿದರು.

ಈಗ ನಮ್ಮ ರೈತ ಸಂಘಗಳು ದೆಹಲಿಯ ಈ ಕ್ರೌರ್ಯದ ಘಟನೆಯನ್ನು ಅಗುಳು ನೋಡಿ ಅನ್ನ ಬೆಂದಿತೇ ಎಂಬ ಸಾಮಿತಿಯಂತೆ ಇದೊಂದು ಭೀಕರ ದಲಿತ ದಮನದ ರೋಗ ಲಕ್ಷಣ ಎಂದು ಬಗೆದು ತಮ್ಮ ತಮ್ಮ ಊರುಗಳಲ್ಲಿ ದಲಿತರನ್ನು ಒಳಗೊಳ್ಳುವ ಕ್ರಮಗಳನ್ನು ಚಳವಳಿಯೋಪಾದಿಯಲ್ಲಿ ಕೈಗೊಳ್ಳಬೇಕು. ಕೇವಲ ಖಂಡನಾ ಹೇಳಿಕೆಗಳಿಂದ ದಲಿತರನೋವು, ಆತಂಕಗಳನ್ನು ದೂರ ಮಾಡುವುದು ಸಾಧ್ಯವಿಲ್ಲ.

ದೆಹಲಿಯ ಅಪರಾಧದ ದುಷ್ಕರ್ಮಿಗಳ ಬಂಧನವಾಗಿದೆ. ಆದರೆ ಈ ಪಂಥದವರಿಗೆ ಈ ಬಗ್ಗೆ ಯಾವ ಪಶ್ಚಾತ್ತಾಪವೂ ಇಲ್ಲ. ಇದೇ ವರ್ತನೆಯನ್ನು ಹಿಂದುತ್ವದ ಅತಿರೇಕಿಗಳಲ್ಲೂ ನಾವು ಕಂಡಿದ್ದೇವೆ. ಈ ಸಂವಿಧಾನ ವಿರೋಧಿ ಮಾನವತಾ ವಿರೋಧಿ ಶಕ್ತಿಗಳನ್ನು ಎದುರಿಸುವ ಹೆಜ್ಜೆಗಳು ತಳಮಟ್ಟದಿಂದ ಆರಂಭವಾಗಬೇಕು; ಈ ಶಕ್ತಿಗಳಿಗೆ ಸಂವಿಧಾನದ ಪಾಠ ಹೇಳಬೇಕು. ಈ ಹೊಣೆ ಮೇಲ್ಜಾತಿಗಳಿಗಿದೆ. ಅವುಗಳೇ ಹೆಚ್ಚಾಗಿರುವ ಸಂಘಟನೆಗಳಿಗಿದೆ.

– ಕೆ.ಪಿ.ಸುರೇಶ
ರಂಗನಾಥ ಕಂಟನಕುಂಟೆ
ಹುಲಿಕುಂಟೆ ಮೂರ್ತಿ
ನರಸಿಂಹ ಮೂರ್ತಿ. ವಿ.ಎಲ್


ನಿಹಾಂಗ್ ಸಿಂಗ್ ಪಂಥದ ಮತಾಂಧರು ದಲಿತ ಸಮುದಾಯದ ಲಕ್ಬೀರ್ ಸಿಂಗ್ ರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಕ್ರೌರ್ಯಕ್ಕೆ ಈ ನಾಗರಿಕ ಸಮಾಜದ ಪ್ರತಿಯೊಬ್ಬರೂ ಸಹ ಹೊಣೆಗಾರರು. ಸಾರ್ತೆ ‘ಎಶ್ಟು ಜನರನ್ನು ಸಾಯಿಸಲಾಗಿದೆ ಎಂಬುದು ಫ್ಯಾಸಿಸಂ ಅಲ್ಲ, ಅವರನ್ನು ಯಾವ ರೀತಿ ಕೊಲೆ ಮಾಡಲಾಗಿದೆ ಎಂಬುದು ಫ್ಯಾಸಿಸಂ’ ಎನ್ನುತ್ತಾನೆ. ದಲಿತ ಎನ್ನುವ ಕಾರಣಕ್ಕೆ ನಡೆದ ಲಕ್ಬೀರ್ ಸಿಂಗ್ ರ ಕೊಲೆಯ ಆ ಭೀಕರತೆಯೂ ಸಹ ಫ್ಯಾಸಿಸಂ ರೀತಿ. ಇದನ್ನು ನಮಗೆ ಸಂಬಂದವಿಲ್ಲ ಎಂದು ನಿರ್ಲಕ್ಷಿಸುವುದು ಸಹ ಭೀಕರತೆಯ ಪಾಲುದಾರಿಕೆಯಾಗುತ್ತದೆ.

ಕಳೆದ ಒಂದು ವರ್ಶದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ಮೂರು ಕರಾಳ ಕಾಯಿದೆಗಳು ಎಲ್ಲಾ ಜಾತಿ, ವರ್ಗದವರಿಗೂ ಮಾರಕ ಎಂದು ಮನಗಂಡು ಅನುಕೂಲಸ್ಥ ರೈತರಿಂದ ಮೊದಲುಗೊಂಡು, ದೊಡ್ಡ ಹಿಡುವಳಿದಾರರಾದ ಜಾಟ್ ರೈತರು, ಸಣ್ಣ, ಅತಿ ಸಣ್ಣ ರೈತರು, ಭೂ ರಹಿತ ದಲಿತರು, ಕೂಲಿ ಕಾರ್ಮಿಕರು ಸಹ ಸಕ್ರಿಯವಾಗಿ ಬಾಗವಹಿಸಿದ್ದಾರೆ. ಜಾತಿ ಹತ್ಯೆಯನ್ನು ಪೋಶಿಸುವ ಖಾಪ್ ಪಂಚಾಯಿತಿಯನ್ನು ಅದು ಈ ಮೂರು ಕರಾಳ ಕಾಯಿದೆ ವಿರುದ್ಧವಿದೆ ಎನ್ನುವ ಒಂದೇ ಕಾರಣಕ್ಕೆ ಬಿನ್ನಾಬಿಪ್ರಾಯ ಬದಿಗಿಟ್ಟು ಬೆಂಬಲಿಸಿದ್ದಾರೆ.

ಬಕಾಸುರ ಬಂಡವಾಳಶಾಹಿ – ಫ್ಯಾಸಿಸ್ಟ್ ಪ್ರಭುತ್ವದ ಮೈತ್ರಿಯ ದಬ್ಬಾಳಿಕೆ ವಿರುದ್ಧ ಒಂದು ದಿಟ್ಟ ಪ್ರತಿರೋಧ ವ್ಯಕ್ತವಾಗಿರುವುದು ಮತ್ತು ಎಲ್ಲಾ ಪ್ರತಿಕೂಲ ಪರಿಸ್ಥಿತಿಗಳ ನಡುವೆ ಒಂದು ವರ್ಶದ ಕಾಲ ನಿರಂತರವಾಗಿ ಅದರ ಪ್ರಸ್ತುತತೆ ಉಳಿಸಿಕೊಂಡಿರುವುದು ಈ ಕಾಲಘಟ್ಟದ ಅಪರೂಪದ ವಿದ್ಯಾಮಾನ. ಇಂತಹ ಐಕ್ಯ ಹೋರಾಟವನ್ನು ಪ್ರಭುತ್ವ ಬಗ್ಗು ಬಡಿಯಲು ಕಾಯುತ್ತಿರುತ್ತದೆ ಎಂಬುದೂ ಸತ್ಯ. ಜನವರಿ 26, 2020ರ ಕೆಂಪುಕೋಟೆಯ ಘಟನೆ, ಲಕೀಂಪುರ ಕೊಲೆ ಮತ್ತು ಇದರ ಮುಂದುವರಿದ ಭಾಗವಾಗಿ ಲಕ್ಬೀರ್ ಸಿಂಗ್ ಹತ್ಯೆ.

ಅಥವಾ ಅದು ನಿಹಾಂಗ್ ಸಿಂಗ್ ಪಂಥೀಯರ ನಡುವಿನ ಜಗಳದ ಪರಿಣಾಮ ಎನ್ನುವ ವಾದಗಳು ಕೇಳಿ ಬರುತ್ತಿವೆ. ಇರಬಹುದು.

ಆದರೆ ಹೋರಾಟದ ಸ್ಥಳದಲ್ಲಿ ದಲಿತನ ಬರ್ಬರ ಹತ್ಯೆಯಾದಾಗ ಮೈ ಕೊಡುವಿಕೊಳ್ಳುವುದು ಅಮಾನವೀಯತೆ. ರೈತ ಹೋರಾಟದ ಇಂತಹ ವರ್ತನೆ ಅನೈತಿಕತೆಯಾಗುತ್ತದೆ. ಮುಖ್ಯವಾಗಿ ಮುಂದಿನ ದಿನಗಳಲ್ಲಿ ಇದು ಮರುಕಳಿಸದಂತೆ ಎಚ್ಚರ ವಹಿಸುವುದು ಸಹ ಅವರ ಹೊಣೆಗಾರಿಕೆಯಾಗುತ್ತದೆ.

ಮಾನವೀಯತೆ ಕಳೆದುಕೊಂಡ ಯಾವುದೇ ಹೋರಾಟ ಅಪ್ರಸ್ತುತವಾಗುತ್ತದೆ

  • ಬಿ.ಶ್ರೀಪಾದ್ ಭಟ್

ಇದನ್ನೂ ಓದಿ: ಸಿಂಘು ಗಡಿಯಲ್ಲಿ ದಲಿತನ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...