Homeಕರ್ನಾಟಕಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

ಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದ ಬಗ್ಗೆ ಸೋಮವಾರ ಮಾತಾನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, “ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜನ ಆತಂಕದಲ್ಲಿದ್ದಾರೆ. ಅನ್ನದಾತನಿಗೆ ರಕ್ಷಣೆಯೇ ಇಲ್ಲವಾಗಿದೆ. ಹಲವು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರ ಮೇಲೆ ಒಕ್ಕೂಟ ಸರ್ಕಾರದ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ಕಗ್ಗೊಲೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

“ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಮಿಶ್ರಾ ಅವರೂ ಸೇರಿದಂತೆ ರೈತರ ಹತ್ಯೆ ಮಾಡಿದವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಿ ಬಂಧಿಸಬೇಕು” ಎಂದು ಶಿವಕುಮಾರ್‌‌ ಹೇಳಿದ್ದಾರೆ.

“ಇದು ನಾಲ್ವರು ರೈತರ ಕೊಲೆ ಮಾತ್ರವಲ್ಲ, ಇಡೀ ದೇಶದ ರೈತ ಸಮುದಾಯದ ಕಗ್ಗೊಲೆ. ಮೃತರ ಕುಟುಂಬದ ಭೇಟಿಗೆ ಮುಂದಾದ ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ನಡೆಸಿಕೊಂಡ ರೀತಿ, ಅವರ ಬಂಧನ ಖಂಡನೀಯ. ಇದು ಇಡೀ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಬಿಜೆಪಿ ಆಡಳಿತದಲ್ಲಿ ಸಾಂತ್ವನ ಹೇಳುವುದೂ ಅಪರಾಧವೇ?” ಎಂದು ಪ್ರಶ್ನಿಸಿದ್ದಾರೆ.

ರೈತರನ್ನು ಹತ್ಯೆ ಮಾಡಿರುವ ಘಟನೆಯ ಬಗ್ಗೆ ಸಿಪಿಐ(ಎಂಎಲ್‌) ಲಿಬರೇಷನ್‌ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಘಟನೆಗೆ ಕಾರಣವಾದ ಒಕ್ಕೂಟ ಸರ್ಕಾರದ ಸಚಿವನ ಮಗನನ್ನು ಬಂಧಿಸಬೇಕು. ಜೊತೆಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂಬಿ ಪಾಟಿಲ್ ಅವರು, “ಉತ್ತರ ಪ್ರದೇಶದ ರೈತರು ಪ್ರತಿಭಟಿಸುತ್ತಿರುವ ವೇಳೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರರ ಪುತ್ರ ಕಾರು ನುಗ್ಗಿಸಿ ರೈತರನ್ನು ಹತ್ಯೆ ಮಾಡಿರುವ ಮೃಗೀಯ ಘಟನೆ ನಡೆದಿದೆ. ದುಷ್ಕೃತ್ಯ ನಡೆದು ಹಲವು ತಾಸುಗಳಾದರೂ ಯಾರನ್ನೂ ಬಂಧಿಸದಿರುವುದು ಮಹಾಅಪರಾಧ. ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

 

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಅವರು, “ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ. ಪ್ರಜಾ ರಕ್ಷಕರಾದ ಒಕ್ಕೂಟ ಸರ್ಕಾರದ ಸಚಿವರೇ ಪ್ರಜಾ ಭಕ್ಷಕರಾಗಿ,ರೈತರ ಹೋರಾಟಗಳನ್ನು ಹತ್ತಿಕ್ಕಲು ರೈತರ ಮೇಲೆ ಕಾರು ಹತ್ತಿಸಿರುವುದು ಅಮಾನುಷ. ಇದನ್ನು ಪ್ರಶ್ನಿಸಿದ ಪ್ರಿಯಾಂಕ ಗಾಂಧಿಯವರ ಬಂಧನ ಹೇಯ ಕೃತ್ಯ. ಈ ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...