Homeಕರ್ನಾಟಕಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

ಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದ ಬಗ್ಗೆ ಸೋಮವಾರ ಮಾತಾನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, “ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜನ ಆತಂಕದಲ್ಲಿದ್ದಾರೆ. ಅನ್ನದಾತನಿಗೆ ರಕ್ಷಣೆಯೇ ಇಲ್ಲವಾಗಿದೆ. ಹಲವು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರ ಮೇಲೆ ಒಕ್ಕೂಟ ಸರ್ಕಾರದ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ಕಗ್ಗೊಲೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

“ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಮಿಶ್ರಾ ಅವರೂ ಸೇರಿದಂತೆ ರೈತರ ಹತ್ಯೆ ಮಾಡಿದವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಿ ಬಂಧಿಸಬೇಕು” ಎಂದು ಶಿವಕುಮಾರ್‌‌ ಹೇಳಿದ್ದಾರೆ.

“ಇದು ನಾಲ್ವರು ರೈತರ ಕೊಲೆ ಮಾತ್ರವಲ್ಲ, ಇಡೀ ದೇಶದ ರೈತ ಸಮುದಾಯದ ಕಗ್ಗೊಲೆ. ಮೃತರ ಕುಟುಂಬದ ಭೇಟಿಗೆ ಮುಂದಾದ ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ನಡೆಸಿಕೊಂಡ ರೀತಿ, ಅವರ ಬಂಧನ ಖಂಡನೀಯ. ಇದು ಇಡೀ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಬಿಜೆಪಿ ಆಡಳಿತದಲ್ಲಿ ಸಾಂತ್ವನ ಹೇಳುವುದೂ ಅಪರಾಧವೇ?” ಎಂದು ಪ್ರಶ್ನಿಸಿದ್ದಾರೆ.

ರೈತರನ್ನು ಹತ್ಯೆ ಮಾಡಿರುವ ಘಟನೆಯ ಬಗ್ಗೆ ಸಿಪಿಐ(ಎಂಎಲ್‌) ಲಿಬರೇಷನ್‌ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಘಟನೆಗೆ ಕಾರಣವಾದ ಒಕ್ಕೂಟ ಸರ್ಕಾರದ ಸಚಿವನ ಮಗನನ್ನು ಬಂಧಿಸಬೇಕು. ಜೊತೆಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂಬಿ ಪಾಟಿಲ್ ಅವರು, “ಉತ್ತರ ಪ್ರದೇಶದ ರೈತರು ಪ್ರತಿಭಟಿಸುತ್ತಿರುವ ವೇಳೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರರ ಪುತ್ರ ಕಾರು ನುಗ್ಗಿಸಿ ರೈತರನ್ನು ಹತ್ಯೆ ಮಾಡಿರುವ ಮೃಗೀಯ ಘಟನೆ ನಡೆದಿದೆ. ದುಷ್ಕೃತ್ಯ ನಡೆದು ಹಲವು ತಾಸುಗಳಾದರೂ ಯಾರನ್ನೂ ಬಂಧಿಸದಿರುವುದು ಮಹಾಅಪರಾಧ. ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

 

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಅವರು, “ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ. ಪ್ರಜಾ ರಕ್ಷಕರಾದ ಒಕ್ಕೂಟ ಸರ್ಕಾರದ ಸಚಿವರೇ ಪ್ರಜಾ ಭಕ್ಷಕರಾಗಿ,ರೈತರ ಹೋರಾಟಗಳನ್ನು ಹತ್ತಿಕ್ಕಲು ರೈತರ ಮೇಲೆ ಕಾರು ಹತ್ತಿಸಿರುವುದು ಅಮಾನುಷ. ಇದನ್ನು ಪ್ರಶ್ನಿಸಿದ ಪ್ರಿಯಾಂಕ ಗಾಂಧಿಯವರ ಬಂಧನ ಹೇಯ ಕೃತ್ಯ. ಈ ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...