Homeಕರ್ನಾಟಕಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

ಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದ ಬಗ್ಗೆ ಸೋಮವಾರ ಮಾತಾನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, “ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜನ ಆತಂಕದಲ್ಲಿದ್ದಾರೆ. ಅನ್ನದಾತನಿಗೆ ರಕ್ಷಣೆಯೇ ಇಲ್ಲವಾಗಿದೆ. ಹಲವು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರ ಮೇಲೆ ಒಕ್ಕೂಟ ಸರ್ಕಾರದ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ಕಗ್ಗೊಲೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

“ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಮಿಶ್ರಾ ಅವರೂ ಸೇರಿದಂತೆ ರೈತರ ಹತ್ಯೆ ಮಾಡಿದವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಿ ಬಂಧಿಸಬೇಕು” ಎಂದು ಶಿವಕುಮಾರ್‌‌ ಹೇಳಿದ್ದಾರೆ.

“ಇದು ನಾಲ್ವರು ರೈತರ ಕೊಲೆ ಮಾತ್ರವಲ್ಲ, ಇಡೀ ದೇಶದ ರೈತ ಸಮುದಾಯದ ಕಗ್ಗೊಲೆ. ಮೃತರ ಕುಟುಂಬದ ಭೇಟಿಗೆ ಮುಂದಾದ ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ನಡೆಸಿಕೊಂಡ ರೀತಿ, ಅವರ ಬಂಧನ ಖಂಡನೀಯ. ಇದು ಇಡೀ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಬಿಜೆಪಿ ಆಡಳಿತದಲ್ಲಿ ಸಾಂತ್ವನ ಹೇಳುವುದೂ ಅಪರಾಧವೇ?” ಎಂದು ಪ್ರಶ್ನಿಸಿದ್ದಾರೆ.

ರೈತರನ್ನು ಹತ್ಯೆ ಮಾಡಿರುವ ಘಟನೆಯ ಬಗ್ಗೆ ಸಿಪಿಐ(ಎಂಎಲ್‌) ಲಿಬರೇಷನ್‌ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಘಟನೆಗೆ ಕಾರಣವಾದ ಒಕ್ಕೂಟ ಸರ್ಕಾರದ ಸಚಿವನ ಮಗನನ್ನು ಬಂಧಿಸಬೇಕು. ಜೊತೆಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂಬಿ ಪಾಟಿಲ್ ಅವರು, “ಉತ್ತರ ಪ್ರದೇಶದ ರೈತರು ಪ್ರತಿಭಟಿಸುತ್ತಿರುವ ವೇಳೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರರ ಪುತ್ರ ಕಾರು ನುಗ್ಗಿಸಿ ರೈತರನ್ನು ಹತ್ಯೆ ಮಾಡಿರುವ ಮೃಗೀಯ ಘಟನೆ ನಡೆದಿದೆ. ದುಷ್ಕೃತ್ಯ ನಡೆದು ಹಲವು ತಾಸುಗಳಾದರೂ ಯಾರನ್ನೂ ಬಂಧಿಸದಿರುವುದು ಮಹಾಅಪರಾಧ. ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

 

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಅವರು, “ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ. ಪ್ರಜಾ ರಕ್ಷಕರಾದ ಒಕ್ಕೂಟ ಸರ್ಕಾರದ ಸಚಿವರೇ ಪ್ರಜಾ ಭಕ್ಷಕರಾಗಿ,ರೈತರ ಹೋರಾಟಗಳನ್ನು ಹತ್ತಿಕ್ಕಲು ರೈತರ ಮೇಲೆ ಕಾರು ಹತ್ತಿಸಿರುವುದು ಅಮಾನುಷ. ಇದನ್ನು ಪ್ರಶ್ನಿಸಿದ ಪ್ರಿಯಾಂಕ ಗಾಂಧಿಯವರ ಬಂಧನ ಹೇಯ ಕೃತ್ಯ. ಈ ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...