Homeಕರ್ನಾಟಕಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

ಲಖಿಂಪುರ್‌ ಖೇರಿ ಘಟನೆ: ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ ಡಿಕೆ ಶಿವಕುಮಾರ್‌‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದ ಬಗ್ಗೆ ಸೋಮವಾರ ಮಾತಾನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, “ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜನ ಆತಂಕದಲ್ಲಿದ್ದಾರೆ. ಅನ್ನದಾತನಿಗೆ ರಕ್ಷಣೆಯೇ ಇಲ್ಲವಾಗಿದೆ. ಹಲವು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರ ಮೇಲೆ ಒಕ್ಕೂಟ ಸರ್ಕಾರದ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ಕಗ್ಗೊಲೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

“ಈ ಅಮಾನವೀಯ ಘಟನೆಯ ನೈತಿಕ ಹೊಣೆ ಹೊತ್ತು ಒಕ್ಕೂಟ ಸಚಿವ ಅಜಯ್ ಮಿಶ್ರಾ, ಯುಪಿ ಸಿಎಂ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಮಿಶ್ರಾ ಅವರೂ ಸೇರಿದಂತೆ ರೈತರ ಹತ್ಯೆ ಮಾಡಿದವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಿ ಬಂಧಿಸಬೇಕು” ಎಂದು ಶಿವಕುಮಾರ್‌‌ ಹೇಳಿದ್ದಾರೆ.

“ಇದು ನಾಲ್ವರು ರೈತರ ಕೊಲೆ ಮಾತ್ರವಲ್ಲ, ಇಡೀ ದೇಶದ ರೈತ ಸಮುದಾಯದ ಕಗ್ಗೊಲೆ. ಮೃತರ ಕುಟುಂಬದ ಭೇಟಿಗೆ ಮುಂದಾದ ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ನಡೆಸಿಕೊಂಡ ರೀತಿ, ಅವರ ಬಂಧನ ಖಂಡನೀಯ. ಇದು ಇಡೀ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಬಿಜೆಪಿ ಆಡಳಿತದಲ್ಲಿ ಸಾಂತ್ವನ ಹೇಳುವುದೂ ಅಪರಾಧವೇ?” ಎಂದು ಪ್ರಶ್ನಿಸಿದ್ದಾರೆ.

ರೈತರನ್ನು ಹತ್ಯೆ ಮಾಡಿರುವ ಘಟನೆಯ ಬಗ್ಗೆ ಸಿಪಿಐ(ಎಂಎಲ್‌) ಲಿಬರೇಷನ್‌ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಘಟನೆಗೆ ಕಾರಣವಾದ ಒಕ್ಕೂಟ ಸರ್ಕಾರದ ಸಚಿವನ ಮಗನನ್ನು ಬಂಧಿಸಬೇಕು. ಜೊತೆಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂಬಿ ಪಾಟಿಲ್ ಅವರು, “ಉತ್ತರ ಪ್ರದೇಶದ ರೈತರು ಪ್ರತಿಭಟಿಸುತ್ತಿರುವ ವೇಳೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರರ ಪುತ್ರ ಕಾರು ನುಗ್ಗಿಸಿ ರೈತರನ್ನು ಹತ್ಯೆ ಮಾಡಿರುವ ಮೃಗೀಯ ಘಟನೆ ನಡೆದಿದೆ. ದುಷ್ಕೃತ್ಯ ನಡೆದು ಹಲವು ತಾಸುಗಳಾದರೂ ಯಾರನ್ನೂ ಬಂಧಿಸದಿರುವುದು ಮಹಾಅಪರಾಧ. ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

 

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಅವರು, “ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ. ಪ್ರಜಾ ರಕ್ಷಕರಾದ ಒಕ್ಕೂಟ ಸರ್ಕಾರದ ಸಚಿವರೇ ಪ್ರಜಾ ಭಕ್ಷಕರಾಗಿ,ರೈತರ ಹೋರಾಟಗಳನ್ನು ಹತ್ತಿಕ್ಕಲು ರೈತರ ಮೇಲೆ ಕಾರು ಹತ್ತಿಸಿರುವುದು ಅಮಾನುಷ. ಇದನ್ನು ಪ್ರಶ್ನಿಸಿದ ಪ್ರಿಯಾಂಕ ಗಾಂಧಿಯವರ ಬಂಧನ ಹೇಯ ಕೃತ್ಯ. ಈ ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...