Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ - ರೈತರ ಆರೋಪ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

ಆಶಿಶ್ ಮಿಶ್ರಾ ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆ ನಡೆದು ಮೂರು ದಿನಗಳಾದರೂ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಬಂಧನವಾಗಿಲ್ಲದ ಕುರಿತು ರೈತರು ಉತ್ತರ ಪ್ರದೇಶ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಶಾಂತಿಯುತ ಪ್ರತಿಭಟನಾನಿರತ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹತ್ತಿಸಿ ನಾಲ್ವರು ರೈತರು ಸೇರಿ 8 ಜನರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಮೊದಲನೇಯದಾಗಿ ಆರೋಪಿ ಆಶಿಶ್ ಮಿಶ್ರಾ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಅವರು ಯುಪಿ ಕ್ರೈಮ್ ಬ್ರಾಂಚ್ ಎದುರು ಹಾಜರಾಗಬೇಕಿತ್ತು. ಅದಕ್ಕಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರು ಅಪರಾಧ ಎಸಗದಿದ್ದಲ್ಲಿ ಏಕೆ ವಿಚಾರಣೆಗೆ ಹಾಜಾರಾಗಿಲ್ಲ? ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

ಎರಡನೇಯದಾಗಿ ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

 

ಪೊಲೀಸರು ಕೇವಲ ಆಶಿಶ್ ಮಿಶ್ರಾನಿಗೆ ಸಮನ್ಸ್ ಕಳಿಸಿದ್ದಾರೆ. ಆದರೆ ಆತನೊಂದಿಗೆ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಇದ್ದುದ್ದು ವಿಡಿಯೋಗಳಲ್ಲಿ, ಆನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರಲ್ಲಿ ದಾಖಲಾಗಿದೆ. ಸುಮಿತ್ ಜೈಸ್ವಾಲ್ ಕಾರಿನಿಂದ ಇಳಿದು ಓಡಿ ಹೋಗುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಅವರನ್ನು ಮತ್ತು ಹತ್ಯಾಕಾಂಡಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ರೈತರು ತಾವೇ ಮೊದಲು ಕಲ್ಲು ಹೊಡೆದು ಪ್ರಚೋದನೆ ನೀಡಿದರು ಎಂಬ ಬಿಜೆಪಿ ಬೆಂಬಲಿಗರ ವಾದವನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಲ್ಲಗೆಳೆದಿದೆ. ಅದರ ವಿಡಿಯೋ ಸಾಕ್ಷ್ಯ ಒದಿಗಿಸಿ ಆ ಎಸ್‌ಯುವಿ ಕಾರು ಹೋಗುವಾಗ ರೈತರು ಯಾವುದೇ ಹಾನಿ ಮಾಡದೇ ಶಾಂತಿಯುತ ಪ್ರತಿಭಟನೆ ನಡೆಸಿರುವುದನ್ನು ತೋರಿಸಿದೆ.

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ರೈತರ ಮೇಲೆ ಹರಿದ ವಾಹನದ ಮೇಲೆ ಏಕೆ ವಿಐಪಿ ಸೈರನ್ ಅಳವಡಿಸಲಾಗಿದೆ ಎಂದು ಯೋಗಿ ಸರ್ಕಾರ ಹೇಳಬೇಕು? ಮೋದಿಜಿ ಕೆಲವು ವರ್ಷಗಳ ಹಿಂದೆ ಕೆಂಪು ದೀಪವನ್ನು ತೆಗೆದು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುತ್ತೇವೆ ಎಂದಿದ್ದರು. ಆದರೂ ಇಲ್ಲಿ ಏಕಿದೆ? ವಾಸ್ತವವಾಗಿ, ಯೋಗಿ ಸರ್ಕಾರವು ರೈತರ ವಿರುದ್ಧದ ಅಪರಾಧವನ್ನು ಉತ್ತೇಜಿಸುತ್ತಿದೆ ಎಂದು ಕಿಸಾನ್ ಮೋರ್ಚಾ ಕಿಡಿಕಾರಿದೆ.

ಹೀಗಿರುವಾಗ ಯುಪಿ ಪೊಲೀಸರು ಸಮಯ ವ್ಯರ್ಥ ಮಾಡಬಾರದು, ಆಶಿಶ್ ಮಿಶ್ರಾ ಪರಾರಿಯಾಗಿದ್ದಾನೆ ಎಂದು ಘೋಷಿಸಬೇಕು ಮತ್ತು ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಬೇಕು, ಅವರ ತಂದೆಯನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...